Snehith Gowda: ‘ಹೀಗಾದ್ರೆ ನಾನು ಬಿಗ್ ಬಾಸ್ ನೋಡಲ್ಲ’; ನೇರವಾಗಿ ಹೇಳಿದ ಸ್ನೇಹಿತ್ ಗೌಡ

ಸ್ನೇಹಿತ್ ಗೌಡ ಬಗ್ಗೆ ಸಾಕಷ್ಟು ಟ್ರೋಲ್​ಗಳು ಹರಿದಾಡಿವೆ. ಅವರಿಗೆ ನಿಕ್​ನೇಮ್​ ಕೂಡ ಇಡಲಾಗಿದೆ. ಈ ಎಲ್ಲಾ ವಿಚಾರಗಳು ಹೊರ ಬಂದ ಬಳಿಕ ಅವರಿಗೆ ಗೊತ್ತಾಗಿದೆ. ಹೀಗಾಗಿ ಅವರು ಯಾವುದೇ ಮಾಧ್ಯಮಗಳಿಗೆ ಸಂದರ್ಶನ ನೀಡಿಲ್ಲ

Snehith Gowda: ‘ಹೀಗಾದ್ರೆ ನಾನು ಬಿಗ್ ಬಾಸ್ ನೋಡಲ್ಲ’; ನೇರವಾಗಿ ಹೇಳಿದ ಸ್ನೇಹಿತ್ ಗೌಡ
ಸ್ನೇಹಿತ್
Follow us
|

Updated on: Dec 14, 2023 | 7:24 AM

‘ಬಿಗ್ ಬಾಸ್ ಕನ್ನಡ ಸೀಸನ್ 10’ನಿಂದ ಸ್ನೇಹಿತ್ ಗೌಡ ಅವರು ಕಳೆದ ವಾರ ಔಟ್ ಆಗಿದ್ದಾರೆ. ಅವರು ಮನೆಯಿಂದ ಹೋದ ಬಗ್ಗೆ ನಮ್ರತಾ ಗೌಡ (Namratha Gowda) , ವಿನಯ್​ ಗೌಡಗೆ ಬೇಸರ ಇದೆ. ಈಗ ಸ್ನೇಹಿತ್ ಗೌಡ ಅವರು ಹೊರ ಪ್ರಪಂಚಕ್ಕೆ ಬಂದ ಬಳಿಕ ಮತ್ತೆ ಡಯಟ್ ಶುರು ಮಾಡಿದ್ದಾರೆ. ಜಿಮ್​ಗೆ ಮರಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಮಾಹಿತಿ ನೀಡುತ್ತಿದ್ದಾರೆ. ಇತ್ತೀಚೆಗೆ ಅವರು ಇನ್​ಸ್ಟಾಗ್ರಾಮ್​​ನಲ್ಲಿ ಲೈವ್ ಬಂದಿದ್ದರು. ಈ ವೇಳೆ ಅವರು ಕೆಲವು ವಿಚಾರ ಹಂಚಿಕೊಂಡಿದ್ದಾರೆ.

ಹೀಗಾದ್ರೆ ಬಿಗ್ ಬಾಸ್ ನೋಡಲ್ಲ..

‘ನೀವು ನಿತ್ಯ ಬಿಗ್ ಬಾಸ್ ನೋಡ್ತಾ ಇದೀರಾ’ ಎಂದು ಕೆಲವರು ಕೇಳಿದರು. ಇದಕ್ಕೆ ಹೌದು ಎನ್ನುವ ಉತ್ತರ ಕೊಟ್ಟಿದ್ದಾರೆ ಸ್ನೇಹಿತ್. ‘ನನ್ನ ಮೂವರು ಗೆಳೆಯರು (ನಮ್ರತಾ, ವಿನಯ್, ಮೈಕಲ್) ಬಿಗ್ ಬಾಸ್ ಮನೆಯಲ್ಲಿ ಇನ್ನೂ ಆಟ ಆಡುತ್ತಿದ್ದಾರೆ. ಅವರು ಎಲ್ಲಿಯವರೆಗೆ ಬಿಗ್ ಬಾಸ್​ ಮನೆಯಲ್ಲಿ ಇರ್ತಾರೋ ಅಲ್ಲಿಯವರೆಗೆ ಬಿಗ್ ಬಾಸ್ ನೋಡ್ತೀನಿ. ಅವರು ಹೊರ ಬಂದ ಬಳಿಕ ಬಿಗ್ ಬಾಸ್ ನೋಡೋದನ್ನು ನಿಲ್ಲಿಸುತ್ತೇನೆ’ ಎಂದಿದ್ದಾರೆ ಸ್ನೇಹಿತ್.

ಟ್ರೋಲ್ ಭಯ

ಸ್ನೇಹಿತ್ ಗೌಡ ಬಗ್ಗೆ ಸಾಕಷ್ಟು ಟ್ರೋಲ್​ಗಳು ಹರಿದಾಡಿವೆ. ಅವರಿಗೆ ನಿಕ್​ನೇಮ್​ ಕೂಡ ಇಡಲಾಗಿದೆ. ಈ ಎಲ್ಲಾ ವಿಚಾರಗಳು ಹೊರ ಬಂದ ಬಳಿಕ ಅವರಿಗೆ ಗೊತ್ತಾಗಿದೆ. ಹೀಗಾಗಿ ಅವರು ಯಾವುದೇ ಮಾಧ್ಯಮಗಳಿಗೆ ಸಂದರ್ಶನ ನೀಡಿಲ್ಲ. ಟ್ರೋಲ್ ಬಗ್ಗೆ ಅವರು ಮಾತನಾಡಿದ್ದಾರೆ. ‘ಬಿಗ್​ ಬಾಸ್​ನಿಂದ ಹೊರ ಬಂದಾಗ ಆರಂಭದಲ್ಲಿ ಟ್ರೋಲ್ ನೋಡಿ ಭಯ ಆಯ್ತು. ಈಗ ಆ ಭಯ ಇಲ್ಲ’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಸಖತ್ ಹರ್ಟ್​ ಮಾಡಿದ್ದೇನೆ’; ಸ್ನೇಹಿತ್​ನ ನೆನೆದು ಕಣ್ಣೀರು ಹಾಕಿದ ನಮ್ರತಾ ಗೌಡ

ಬೇರೆಯವರನ್ನು ಸೇವ್ ಮಾಡಿದ್ರಿ..

ಸ್ನೇಹಿತ್ ಬೇರೆಯವರಿಗೋಸ್ಕರ ಆಟ ಆಡಿದ್ದಾರೆ. ಅವರು ಪ್ರಯತ್ನ ಹಾಕಿದ್ದರೆ ಇನ್ನೂ ಕೆಲವು ದಿನ ಇರಬಹುದಿತ್ತು ಎನ್ನುವ ಕಮೆಂಟ್​ಗಳು ಬಂದಿವೆ. ಆದರೆ, ಇದನ್ನು ಸ್ನೇಹಿತ್ ಗೌಡ ಒಪ್ಪಿಲ್ಲ. ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತಿಲ್ಲ ಎಂದೂ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್