AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀಲಿಚಿತ್ರ ಅತಿಯಾಗಿ ನೋಡುವವರಿಗೆ ಕಿಸ್​ ಮಾಡೋಕೆ ಬರಲ್ಲ’; ಬಿಗ್​ ಬಾಸ್​ ಸ್ಪರ್ಧಿಯ ವಿಚಿತ್ರ ಹೇಳಿಕೆ

ಸಲ್ಮಾನ್​ ಖಾನ್​ ಅವರನ್ನು ಕಟುವಾಗಿ ಟೀಕಿಸಿದ್ದರು ಸೋಫಿಯಾ. ಅರ್ಮಾನ್​ ಕೊಹ್ಲಿ ತಮಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು. ಈಗ ಸೋಫಿಯಾ ವಿಚಿತ್ರವಾದ ಹೇಳಿಕೆ ನೀಡಿದ್ದಾರೆ.   

‘ನೀಲಿಚಿತ್ರ ಅತಿಯಾಗಿ ನೋಡುವವರಿಗೆ ಕಿಸ್​ ಮಾಡೋಕೆ ಬರಲ್ಲ’; ಬಿಗ್​ ಬಾಸ್​ ಸ್ಪರ್ಧಿಯ ವಿಚಿತ್ರ ಹೇಳಿಕೆ
ಸೋಫಿಯಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Feb 12, 2022 | 2:50 PM

Share

ಬಿಗ್​ ಬಾಸ್​ನಲ್ಲಿ (Bigg Boss)ಪಾಲ್ಗೊಂಡ ಅನೇಕರು ದೊಡ್ಮನೆಯಲ್ಲಿ ಸಾಕಷ್ಟು ವಿವಾದ ಮಾಡಿಕೊಂಡಿದ್ದಿದೆ. ಮನೆಯಿಂದ ಹೊರ ಬಂದ ನಂತರದಲ್ಲೂ ಕೆಲವರು ಸುದ್ದಿಯಲ್ಲಿರೋಕೆ ಬಯಸುತ್ತಾರೆ. ಇದಕ್ಕಾಗಿ ಚಿತ್ರ ವಿಚಿತ್ರ ಹೇಳಿಕೆ ನೀಡಿ ಸುದ್ದಿಯಾಗುತ್ತಾರೆ. ನಟಿ ಸೋಫಿಯಾ ಹಯಾತ್ (Sofia Hayat)​ ಕೂಡ ಇದೇ ಸಾಲಿಗೆ ಸೇರುತ್ತಾರೆ. ಅವರು ಸಲ್ಮಾನ್​ ಖಾನ್ (Salman Khan)​ ಸೇರಿ ಅನೇಕರ ವಿರುದ್ಧ ಟೀಕೆಗಳನ್ನು ಮಾಡಿದ್ದರು. ಈಗ ಅವರು ನೀಡಿರುವ ವಿಚಿತ್ರ ಹೇಳಿಕೆ ಸಾಕಷ್ಟು ಚರ್ಚೆ ಆಗುತ್ತಿದೆ. ಅತಿಯಾಗಿ ನೀಲಿಚಿತ್ರ ವೀಕ್ಷಣೆ ಮಾಡುವವರಿಗೆ ಸರಿಯಾಗಿ ಕಿಸ್​ ಮಾಡೋಕೆ ಬರುವುದಿಲ್ಲ ಎಂದು ಸೋಫಿಯಾ ಹೇಳಿಕೆ ನೀಡಿದ್ದಾರೆ.  

ಸೋಫಿಯಾ ಈ ಮೊದಲು ಸಲ್ಮಾನ್​ ಖಾನ್​ ವಿರುದ್ಧ ಟೀಕೆ ಮಾಡಿದ್ದರು. ಸಲ್ಮಾನ್​ ಖಾನ್​ ಕೃಷ್ಣ ಮೃಗವನ್ನು ಬೇಟೆಯಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಯನ್ನೂ ಸಲ್ಮಾನ್​ ಖಾನ್​ ಎದುರಿಸಿದರು. ರಾಜಸ್ಥಾನದ ಸೆಷನ್ಸ್ ನ್ಯಾಯಾಲಯವು ಸಲ್ಲು​ ಅವರನ್ನು ತಪ್ಪಿತಸ್ಥರೆಂದು ತೀರ್ಪು ನೀಡಿ ಅವರಿಗೆ ಐದು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಈ ಪ್ರಕರಣದಲ್ಲಿ ಸಲ್ಮಾನ್​ ಖಾನ್​ ಅವರನ್ನು ಕಟುವಾಗಿ ಟೀಕಿಸಿದ್ದರು ಸೋಫಿಯಾ. ಅರ್ಮಾನ್​ ಕೊಹ್ಲಿ ತಮಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು. ಈಗ ಸೋಫಿಯಾ ವಿಚಿತ್ರವಾದ ಹೇಳಿಕೆ ನೀಡಿದ್ದಾರೆ.

ಫಿಲ್ಮಿಬೀಟ್​ ಇಂಗ್ಲಿಷ್​ ವೆಬ್​ಸೈಟ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ‘ನನಗೆ ಆಗಿನ್ನೂ 18 ವರ್ಷ. ನನ್ನ ತರಗತಿಯಲ್ಲಿರುವ ಹುಡುಗ ನನಗೆ ಕಿಸ್ ಮಾಡಿದ್ದ. ಅವನು ನನ್ನ ಹತ್ತಿರ ಬಂದ. ಕಣ್ಣಲ್ಲಿ ಕಣ್ಣಿಟ್ಟು ನೋಡಿದ. ನಾವು ಏನು ಮಾಡುತ್ತಿದ್ದೇವೆ ಎಂಬುದೇ ಗೊತ್ತಾಗುತ್ತಿರಲಿಲ್ಲ. ಆದಾಗ್ಯೂ, ಆತ ಮುತ್ತುಕೊಟ್ಟ. ನನಗೆ ಇದು ಇಷ್ಟವಾಗುವುದಿಲ್ಲ ಎನ್ನುವುದು ಗೊತ್ತಾಗಿತ್ತು. ನಾನು ಗೊಂದಲದಲ್ಲಿದೆ. ಆದರೆ, ಆತ ತುಂಬಾನೆ ಕೆಟ್ಟದಾಗಿ ಕಿಸ್​ ಮಾಡಿದ್ದ. ಅದು ನನಗೆ ಈಗಲೂ ನೆನಪಿದೆ’ ಎಂದಿದ್ದಾರೆ ಸೋಫಿಯಾ.

‘ಈ ಘಟನೆ ನಡೆದ ಬಳಿಕ ಮತ್ತೋರ್ವ ಹುಡುಗ ಸಿಕ್ಕಿದ್ದ. ಆತ ಕಿಸ್​ ಮಾಡುವ ವಿಧಾನ ತುಂಬಾನೇ ಸ್ವೀಟ್​ ಆಗಿತ್ತು. ಮುತ್ತು ಕೊಡುವಾಗ ಪ್ರೀತಿ ಇರಬೇಕು. ಅನೇಕ ಪುರುಷರಿಗೆ ಕಿಸ್​ ಮಾಡೋಕೆ ಬರಲ್ಲ. ಇದಕ್ಕೆ ಅವರು ಹೆಚ್ಚು ನೀಲಿ ಚಿತ್ರಗಳನ್ನು ವೀಕ್ಷಣೆ ಮಾಡೋದು ಕಾರಣ ಇರಬಹುದು’ ಎನ್ನುತ್ತಾರೆ ಸೋಫಿಯಾ.

‘ತೃಷೆಯ ಉದ್ದೇಶ ಇಟ್ಟುಕೊಂಡು ಕಿಸ್​ ಮಾಡಿದರೆ ಅದು ಉತ್ತಮ ಕಿಸ್​ ಆಗಿರುವುದಿಲ್ಲ. ಕ್ವೀನ್​ಗೆ ನಾನು ಮುತ್ತು ಕೊಡುತ್ತಿದ್ದೇನೆ ಎಂದು ಭಾವಿಸಿ ಕಿಸ್​ ಮಾಡಿದರೆ ಆಕೆ ನಿಜಕ್ಕೂ ರಾಣಿ ಎನ್ನುವ ಭಾವನೆ’ ಬರುತ್ತದೆ ಎಂದಿದ್ದಾರೆ ಸೋಫಿಯಾ.

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ನಾನಾ ರೀತಿಯಲ್ಲಿ ಚರ್ಚೆ ಆಗುತ್ತಿದೆ. ಕೆಲವರು ಅವರ ಹೇಳಿಕೆಯನ್ನು ಟೀಕೆ ಮಾಡಿದ್ದಾರೆ. ಇನ್ನೂ ಕೆಲವರು ಅವರ ಹೇಳಿಕೆಯನ್ನು ಒಪ್ಪಿಕೊಂಡಿದ್ದಾರೆ. ಸೋಫಿಯಾ ಕೆಲ ಸಿನಿಮಾಗಳಲ್ಲೂ ನಟಿಸಿದ್ದಾರೆ. 2017ರಲ್ಲಿ ತೆರೆಗೆ ಬಂದ ‘ಅಕ್ಸರ್​ 2’ ಅವರ ಕೊನೆಯ ಸಿನಿಮಾ.

ಇದನ್ನೂ ಓದಿ: ಹಿಂದೂ ದೇವರಿಗೆ ಅವಹೇಳನ ಮಾಡಿದ ಆರೋಪ; ಬಿಗ್​ ಬಾಸ್​ ಕೊನೆಯ ಸೀಸನ್​ನ ಸ್ಪರ್ಧಿ ಅರೆಸ್ಟ್​

Divya Suresh: ನೈಟ್ ಕರ್ಫ್ಯೂ ವೇಳೆ ಬಿಗ್​ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಕಿರಿಕ್?; ವಿಡಿಯೋ ಇಲ್ಲಿದೆ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!