AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೂವ್​ ಆನ್ ಆಗಲೇಬೇಕು’; ಬಿಗ್ ಬಾಸ್​ ನಿರೂಪಣೆ ಬಗ್ಗೆ ಮೌನಮುರಿದ ಸುದೀಪ್

‘ಹಿಂದಿ ಬಿಗ್ ಬಾಸ್ ಒಟಿಟಿ ಸೀಸನ್ 3’ ರಿಯಾಲಿಟಿ ಶೋನ ಸಲ್ಮಾನ್ ಖಾನ್ ನಡೆಸಿಡಿಕೊಡಬೇಕಿತ್ತು. ಆದರೆ, ಅನಿಲ್ ಕಪೂರ್ ಅವರನ್ನು ಕರೆತರಲಾಗಿದೆ. ತಮಿಳಿನ ಬಿಗ್ ಬಾಸ್​ಗೆ ನಟ ಕಮಲ್ ಹಾಸನ್ ಅವರು ಗುಡ್​ಬೈ ಹೇಳಿದ್ದಾರೆ. ಅದೇ ರೀತಿ ಕನ್ನಡದಲ್ಲೂ ನಿರೂಪಕರನ್ನು ಬದಲಿಸುವ ಆಲೋಚನೆ ವಾಹಿನಿಯವರಿಗೆ ಬಂದಿದೆ ಎಂದು ವರದಿ ಆಗಿತ್ತು. ಇದಕ್ಕೆ ಸುದೀಪ್ ಸ್ಪಷ್ಟನೆ ನೀಡಿದ್ದಾರೆ.

‘ಮೂವ್​ ಆನ್ ಆಗಲೇಬೇಕು’; ಬಿಗ್ ಬಾಸ್​ ನಿರೂಪಣೆ ಬಗ್ಗೆ ಮೌನಮುರಿದ ಸುದೀಪ್
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Aug 31, 2024 | 12:18 PM

Share

ಸುದೀಪ್ ಅವರು ಬಿಗ್ ಬಾಸ್ ನಡೆಸಿಕೊಡುವುದಿಲ್ಲ ಎನ್ನುವ ಮಾತು ಇತ್ತೀಚೆಗೆ ವೈರಲ್ ಆಗಿತ್ತು. ವಾಹಿನಿಯವರು ಸುದೀಪ್​ನ ಹೊರಗಿಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದೆಲ್ಲ ಹೇಳಲಾಗಿತ್ತು. ಈ ಮಧ್ಯೆ ಸುದೀಪ್ ಅವರು ಪ್ರೋಮೋ ಶೂಟ್ ಮುಗಿಸಿದ್ದಾರೆ ಎಂದು ಕೂಡ ಹೇಳಲಾಯಿತು. ಈ ಬಗ್ಗೆ ಸುದೀಪ್ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ. ಅವರು ಅಡ್ಡಗೋಡೆಯ ಮೇಲೆ ದೀಪ ಇಟ್ಟಿದ್ದಾರೆ.

‘ಮಾತುಕತೆ ನಡೆಯುತ್ತಿದೆ. 10 ವರ್ಷ ಬಿಗ್ ಬಾಸ್​ಗೆ ಡೆಡಿಕೇಟ್ ಮಾಡಿದ್ದೀನಿ. ಬಿಗ್ ಬಾಸ್ ದೊಡ್ಡ ಶ್ರಮ. ಎಲ್ಲರಿಗೂ ನಾನು ನಡೆಸಿಕೊಟ್ಟಿದ್ದೇನೆ ಅನ್ನೋದಷ್ಟೇ ಗೊತ್ತಿದೆ. ಹೇಗೆ ನಿಂತು ಇರ್ತೀನಿ ಗೊತ್ತಾ? ಮ್ಯಾಕ್ಸ್ ಸಿನಿಮಾ ರಾತ್ರಿ ಶೂಟ್ ನಡೆದಿತ್ತು. ಬೆಳಿಗ್ಗೆ 3:30 ಗಂಟೆಗೆ ಮ್ಯಾಕ್ಸ್ ಶೂಟ್ ಮುಗಿಯುತ್ತಿತ್ತು. ವಿಮಾನ ಲೇಟ್ ಆಗುತ್ತದೆ ಎನ್ನುವ ಕಾರಣಕ್ಕೆ ಚಾಟೆರ್ಡ್​ ಫ್ಲೈಟ್ ಬಾಡಿಗೆಗೆ ತೆಗೆದುಕೊಂಡಿದ್ದೆ. ಅದು ನನ್ನದೇ ದುಡ್ಡಲ್ಲಿ. ಅಲ್ಲಿಂದ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ನೇರವಾಗಿ ಮನೆಗೆ ಬರುತ್ತಿದ್ದೆ. ನಂತರ ಬಿಗ್ ಬಾಸ್ ಸೆಟ್​ಗೆ ಹೋಗುತ್ತಿದ್ದೆ’ ಎಂದಿದ್ದಾರೆ ಅವರು.

‘ಬೆಳಿಗ್ಗೆ ಬಿಗ್ ಬಾಸ್ ಶೂಟ್​ಗೆ ನಿಂತರೆ ಮಧ್ಯಾಹ್ನದವರೆಗೆ ಶೂಟ್ ಮಾಡುತ್ತಿದ್ದೆ​. ಆ ಬಳಿಕ 2 ಗಂಟೆ ಗ್ಯಾಪ್. ನಂತರ ಮತ್ತೊಂದು ಎಪಿಸೋಡ್ ಶೂಟ್ ಮಾಡುತ್ತಿದ್ದೆ. ಆ ಬಳಿಕ ರಾತ್ರೋರಾತ್ರಿ ಚೆನ್ನೈಗೆ ಹೋಗುತ್ತಿದ್ದೆ. ಅಲ್ಲಿಂದ ಮಹಾಬಲಿಪುರಂಗೆ ಹೋಗುತ್ತಿದ್ದೆ. ಹೋದ ತಕ್ಷಣ ಶೂಟ್ ಶುರುವಾಗುತ್ತಿತ್ತು. ನನಗೆ ಸಿನಿಮಾಗೆ ನ್ಯಾಯ ಕೊಡಲ, ಶೋಗೆ ನ್ಯಾಯ ಕೊಡಲ ಎನಿಸುತ್ತಿತ್ತು. ಶೋನ ಎಂಜಾಯ್ ಮಾಡಿದ್ದೇನೆ, ಆಸಕ್ತಿಯೂ ಇದೆ. ಆದರೆ, ಕೆಲವೊಮ್ಮೆ ಮೂವ್​ ಆನ್ ಆಗಲೇಬೇಕು. ನನಗೆ ಮಾಡೋಕೆ ಇಂಟ್ರೆಸ್ಟಿಲ್ಲ, ಅವರಿಗೆ ನಾನು ಬೇಡ ಎಂದಲ್ಲ. ಇದೆಲ್ಲ ಕಾಂಟ್ರವರ್ಸಿ. ಬಿಗ್ ಬಾಸ್ ವಿಚಾರ ಬಂದಾಗ ಅವರೇ ಹೇಳಬಹುದು’ ಎಂದಿದ್ದಾರೆ.

ಇದನ್ನೂ ಓದಿ: ಸುದೀಪ್ ಬಿಗ್ ಬಾಸ್ ತೊರೆದರೆ ಯಾರಿಗೆ ನಷ್ಟ? ಆಗುವ ಪರಿಣಾಮಗಳೇನು?

‘ಬೇರೇ ಕಲಾವಿದರನ್ನು ಹುಡುಕಲಾಗುತ್ತಿದೆ ಎಂಬ ಮಾತು ಇದೆಯಲ್ಲ’ ಎಂದು ಕೇಳಲಾಯಿತು. ಈ ಬಗ್ಗೆಯೂ ಸುದೀಪ್ ಮಾತನಾಡಿದ್ದಾರೆ. ‘ಅವರು ಬೇರೆಯವರನ್ನು ಹುಡುಕಲಿ ಎಂದು ನಾನು ಬಯಸುತ್ತಿದ್ದೇನೆ’ ಎಂದಿದ್ದಾರೆ ಅವರು.  ‘ಅಮ್ಮ ನಿನ್ನ ಅಡುಗೆ ಬೇಡ, ಖಾರ ಆಗುತ್ತಿದೆ ಎಂದು ಹೇಳಿದಾಗ ಅವರು ಅಡುಗೆ ಮಾಡೋದು ನಿಲ್ಲಿಸಲ್ಲ. ಕಡಿಮೆ ಖಾರ ಹಾಕಿ ಅಡುಗೆ ಮಾಡಿಕೊಡಬಹುದು’ ಎಂದಿದ್ದಾರೆ ಸುದೀಪ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:02 pm, Sat, 31 August 24

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!