AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇರೆಲ್ಲ ರಿಯಾಲಿಟಿ ಶೋಗಳಿಗೆ ಬೈಯ್ಯುವ ಸೋನು ನಿಗಮ್​ ಈ ಒಂದು ಶೋಗೆ ಜಡ್ಜ್​ ಆಗಲು ಒಪ್ಪಿದ್ದೇಕೆ?

ಅಷ್ಟಕ್ಕೂ ಬೆಂಗಾಲಿ ಭಾಷೆಯ ‘ಸೂಪರ್​ ಸಿಂಗರ್​’ ಕಾರ್ಯಕ್ರಮಕ್ಕೆ ಸೋನು ನಿಗಮ್​ ಯಾಕೆ ಜಡ್ಜ್​ ಆಗಿದ್ದಾರೆ? ಅಭಿಮಾನಿಗಳಿಗೆ ಈ ಪ್ರಶ್ನೆ ಮೂಡುವುದು ಸಹಜ. ಅದಕ್ಕೆ ಸ್ವತಃ ಸೋನು ನಿಗಮ್​ ಉತ್ತರ ನೀಡಿದ್ದಾರೆ.

ಬೇರೆಲ್ಲ ರಿಯಾಲಿಟಿ ಶೋಗಳಿಗೆ ಬೈಯ್ಯುವ ಸೋನು ನಿಗಮ್​ ಈ ಒಂದು ಶೋಗೆ ಜಡ್ಜ್​ ಆಗಲು ಒಪ್ಪಿದ್ದೇಕೆ?
ಸೋನು ನಿಗಮ್​
TV9 Web
| Edited By: |

Updated on: Aug 01, 2021 | 8:12 AM

Share

ಖ್ಯಾತ ಗಾಯಕ ಸೋನು ನಿಗಮ್ (Sonu Nigam) ಅವರು ಆಗಾಗ ತಮ್ಮ ನೇರ ನಡೆ-ನುಡಿಯ ಕಾರಣದಿಂದ ಸುದ್ದಿ ಆಗುತ್ತಿರುತ್ತಾರೆ. ಸಿನಿಮಾ ಸಂಗೀತಲೋಕದಲ್ಲಿ ದೊಡ್ಡ ಸಾಧನೆ ಮಾಡಿರುವ ಅವರು ಬಹುಬೇಡಿಕೆಯ ಗಾಯಕ. ನೂರಾರು ಸೂಪರ್​ ಹಿಟ್​ ಗೀತೆಗಳಿಗೆ ಅವರು ಧ್ವನಿ ಆಗಿದ್ದಾರೆ. ಕೆಲವೊಮ್ಮೆ ತುಂಬ ನಿಷ್ಠುರವಾದ ಮಾತುಗಳನ್ನು ಆಡುವ ಮೂಲಕ ಅವರು ದೊಡ್ಡ ದೊಡ್ಡ ಮನರಂಜನಾ ವಾಹಿನಿ ಮತ್ತು ಮ್ಯೂಸಿಕ್​ ಕಂಪನಿಗಳ ವಿರೋಧವನ್ನೂ ಕಟ್ಟಿಕೊಂಡ ಉದಾಹರಣೆಗಳಿವೆ. ರಿಯಾಲಿಟಿ ಶೋಗಳ (Reality Show) ನಾಟಕೀಯತೆ ಬಗ್ಗೆಯೂ ಅವರಿಗೆ ಅಸಮಾಧಾನ ಇದೆ. ಆದರೂ ಅವರು ಸೂಪರ್​ ಸಿಂಗರ್​ ಶೋಗೆ ಜಡ್ಜ್​ ಆಗಿರುವುದು ವಿಶೇಷ. 

ಅಷ್ಟಕ್ಕೂ ಬೆಂಗಾಲಿ ಭಾಷೆಯ ‘ಸೂಪರ್​ ಸಿಂಗರ್​’ ಕಾರ್ಯಕ್ರಮಕ್ಕೆ ಸೋನು ನಿಗಮ್​ ಯಾಕೆ ಜಡ್ಜ್​ ಆಗಿದ್ದಾರೆ ಎಂಬ ಪ್ರಶ್ನೆ ಮೂಡುವುದು ಸಹಜ. ಅದಕ್ಕೆ ಸ್ವತಃ ಅವರೇ ಉತ್ತರ ನೀಡಿದ್ದಾರೆ. ‘ಸ್ಟಾರ್​ ಜಲ್ಸಾ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ಈ ಸಿಂಗಿಂಗ್ ರಿಯಾಲಿಟಿ ಶೋ ನನಗೆ ಆಸಕ್ತಿಕರವಾಗಿದೆ. ಕುಮಾರ್​ ಸಾನು, ಕೌಶಿಕಿ ಚಕ್ರವರ್ತಿ ಕೂಡ ಜಡ್ಜ್​ ಆಗಿದ್ದಾರೆ. ಒಂದು ಒಳ್ಳೆಯ ವಾತಾವರಣ ಅದರಲ್ಲಿ ಇದೆ. ಈ ಕಾರ್ಯಕ್ರಮದಲ್ಲಿ ನನಗೆ ಕಂಫರ್ಟ್​ ಎನಿಸುತ್ತದೆ. ಒಂದು ವೇಳೆ ಅವರು ಕೂಡ ನನ್ನಿಂದ ಡ್ರಾಮಾ ಮಾಡಿಸಲು ಪ್ರಯತ್ನಿಸಿದರೆ ಆಗ ಅವರನ್ನು ನೋಡಿಕೊಳ್ಳುತ್ತೇನೆ’ ಎಂದು ಸೋನು ನಿಗಮ್​ ಎಚ್ಚರಿಕೆಯನ್ನೂ ನೀಡಿದ್ದಾರೆ.

ಈ ಹಿಂದೆ ಸರಿಗಮಪ, ಇಂಡಿಯನ್ ಐಡಲ್​ ಮುಂತಾದ ಶೋಗಳಿಗೆ ಸೋನು ನಿಗಮ್​ ಜಡ್ಜ್​ ಆಗಿದ್ದರು. ಇತ್ತೀಚಿನ ದಿನಗಳಲ್ಲಿ ಇಂಡಿಯನ್​ ಐಡಲ್​ ಕಾರ್ಯಕ್ರಮದ ಬಗ್ಗೆ ಭಾರಿ ಟೀಕೆ ಕೇಳಿಬರುತ್ತಿದೆ. ಸ್ಪರ್ಧಿಗಳ ನಡುವೆ ಸುಳ್ಳು ಲವ್​ಸ್ಟೋರಿ ಸೃಷ್ಟಿ ಮಾಡಲಾಗುತ್ತಿದೆ. ಸ್ಪರ್ಧಿಗಳನ್ನು ಅನವಶ್ಯಕವಾಗಿ ಹೊಗಳಲಾಗುತ್ತದೆ. ಸುಳ್ಳು ಭಾವುಕತೆಯನ್ನು ವೇದಿಕೆ ಮೇಲೆ ಪ್ರದರ್ಶಿಸಲಾಗುತ್ತದೆ. ಬಡತನವನ್ನು ವೈಭವೀಕರಿಸಲಾಗುತ್ತದೆ ಎಂಬಿತ್ಯಾದಿ ಆರೋಪಗಳು ಕೇಳಿಬಂದಿವೆ. ಅನೇಕ ಸೆಲೆಬ್ರಿಟಿಗಳು ಕೂಡ ಈ ಶೋ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದುಂಟು.

ಇದನ್ನೂ ಓದಿ:

ಸ್ಪರ್ಧಿಗಳನ್ನು ಪ್ರಶಂಸಿಸಲು ಜಡ್ಜ್​ಗಳು ಅತಿರೇಕಕ್ಕೆ ಹೋಗುತ್ತಾರೆ; ರಿಯಾಲಿಟಿ ಶೋ ಬಗ್ಗೆ ಸೋನು ನಿಗಮ್​ ಬೇಸರ

ಮಗ ಗಾಯಕನಾಗೋದು ಸೋನು ನಿಗಮ್​ಗೆ ಇಷ್ಟ ಇಲ್ವಂತೆ! ಅದರಲ್ಲೂ ಭಾರತದಲ್ಲಿ..

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು