AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇರೆಲ್ಲ ರಿಯಾಲಿಟಿ ಶೋಗಳಿಗೆ ಬೈಯ್ಯುವ ಸೋನು ನಿಗಮ್​ ಈ ಒಂದು ಶೋಗೆ ಜಡ್ಜ್​ ಆಗಲು ಒಪ್ಪಿದ್ದೇಕೆ?

ಅಷ್ಟಕ್ಕೂ ಬೆಂಗಾಲಿ ಭಾಷೆಯ ‘ಸೂಪರ್​ ಸಿಂಗರ್​’ ಕಾರ್ಯಕ್ರಮಕ್ಕೆ ಸೋನು ನಿಗಮ್​ ಯಾಕೆ ಜಡ್ಜ್​ ಆಗಿದ್ದಾರೆ? ಅಭಿಮಾನಿಗಳಿಗೆ ಈ ಪ್ರಶ್ನೆ ಮೂಡುವುದು ಸಹಜ. ಅದಕ್ಕೆ ಸ್ವತಃ ಸೋನು ನಿಗಮ್​ ಉತ್ತರ ನೀಡಿದ್ದಾರೆ.

ಬೇರೆಲ್ಲ ರಿಯಾಲಿಟಿ ಶೋಗಳಿಗೆ ಬೈಯ್ಯುವ ಸೋನು ನಿಗಮ್​ ಈ ಒಂದು ಶೋಗೆ ಜಡ್ಜ್​ ಆಗಲು ಒಪ್ಪಿದ್ದೇಕೆ?
ಸೋನು ನಿಗಮ್​
TV9 Web
| Updated By: ಮದನ್​ ಕುಮಾರ್​|

Updated on: Aug 01, 2021 | 8:12 AM

Share

ಖ್ಯಾತ ಗಾಯಕ ಸೋನು ನಿಗಮ್ (Sonu Nigam) ಅವರು ಆಗಾಗ ತಮ್ಮ ನೇರ ನಡೆ-ನುಡಿಯ ಕಾರಣದಿಂದ ಸುದ್ದಿ ಆಗುತ್ತಿರುತ್ತಾರೆ. ಸಿನಿಮಾ ಸಂಗೀತಲೋಕದಲ್ಲಿ ದೊಡ್ಡ ಸಾಧನೆ ಮಾಡಿರುವ ಅವರು ಬಹುಬೇಡಿಕೆಯ ಗಾಯಕ. ನೂರಾರು ಸೂಪರ್​ ಹಿಟ್​ ಗೀತೆಗಳಿಗೆ ಅವರು ಧ್ವನಿ ಆಗಿದ್ದಾರೆ. ಕೆಲವೊಮ್ಮೆ ತುಂಬ ನಿಷ್ಠುರವಾದ ಮಾತುಗಳನ್ನು ಆಡುವ ಮೂಲಕ ಅವರು ದೊಡ್ಡ ದೊಡ್ಡ ಮನರಂಜನಾ ವಾಹಿನಿ ಮತ್ತು ಮ್ಯೂಸಿಕ್​ ಕಂಪನಿಗಳ ವಿರೋಧವನ್ನೂ ಕಟ್ಟಿಕೊಂಡ ಉದಾಹರಣೆಗಳಿವೆ. ರಿಯಾಲಿಟಿ ಶೋಗಳ (Reality Show) ನಾಟಕೀಯತೆ ಬಗ್ಗೆಯೂ ಅವರಿಗೆ ಅಸಮಾಧಾನ ಇದೆ. ಆದರೂ ಅವರು ಸೂಪರ್​ ಸಿಂಗರ್​ ಶೋಗೆ ಜಡ್ಜ್​ ಆಗಿರುವುದು ವಿಶೇಷ. 

ಅಷ್ಟಕ್ಕೂ ಬೆಂಗಾಲಿ ಭಾಷೆಯ ‘ಸೂಪರ್​ ಸಿಂಗರ್​’ ಕಾರ್ಯಕ್ರಮಕ್ಕೆ ಸೋನು ನಿಗಮ್​ ಯಾಕೆ ಜಡ್ಜ್​ ಆಗಿದ್ದಾರೆ ಎಂಬ ಪ್ರಶ್ನೆ ಮೂಡುವುದು ಸಹಜ. ಅದಕ್ಕೆ ಸ್ವತಃ ಅವರೇ ಉತ್ತರ ನೀಡಿದ್ದಾರೆ. ‘ಸ್ಟಾರ್​ ಜಲ್ಸಾ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ಈ ಸಿಂಗಿಂಗ್ ರಿಯಾಲಿಟಿ ಶೋ ನನಗೆ ಆಸಕ್ತಿಕರವಾಗಿದೆ. ಕುಮಾರ್​ ಸಾನು, ಕೌಶಿಕಿ ಚಕ್ರವರ್ತಿ ಕೂಡ ಜಡ್ಜ್​ ಆಗಿದ್ದಾರೆ. ಒಂದು ಒಳ್ಳೆಯ ವಾತಾವರಣ ಅದರಲ್ಲಿ ಇದೆ. ಈ ಕಾರ್ಯಕ್ರಮದಲ್ಲಿ ನನಗೆ ಕಂಫರ್ಟ್​ ಎನಿಸುತ್ತದೆ. ಒಂದು ವೇಳೆ ಅವರು ಕೂಡ ನನ್ನಿಂದ ಡ್ರಾಮಾ ಮಾಡಿಸಲು ಪ್ರಯತ್ನಿಸಿದರೆ ಆಗ ಅವರನ್ನು ನೋಡಿಕೊಳ್ಳುತ್ತೇನೆ’ ಎಂದು ಸೋನು ನಿಗಮ್​ ಎಚ್ಚರಿಕೆಯನ್ನೂ ನೀಡಿದ್ದಾರೆ.

ಈ ಹಿಂದೆ ಸರಿಗಮಪ, ಇಂಡಿಯನ್ ಐಡಲ್​ ಮುಂತಾದ ಶೋಗಳಿಗೆ ಸೋನು ನಿಗಮ್​ ಜಡ್ಜ್​ ಆಗಿದ್ದರು. ಇತ್ತೀಚಿನ ದಿನಗಳಲ್ಲಿ ಇಂಡಿಯನ್​ ಐಡಲ್​ ಕಾರ್ಯಕ್ರಮದ ಬಗ್ಗೆ ಭಾರಿ ಟೀಕೆ ಕೇಳಿಬರುತ್ತಿದೆ. ಸ್ಪರ್ಧಿಗಳ ನಡುವೆ ಸುಳ್ಳು ಲವ್​ಸ್ಟೋರಿ ಸೃಷ್ಟಿ ಮಾಡಲಾಗುತ್ತಿದೆ. ಸ್ಪರ್ಧಿಗಳನ್ನು ಅನವಶ್ಯಕವಾಗಿ ಹೊಗಳಲಾಗುತ್ತದೆ. ಸುಳ್ಳು ಭಾವುಕತೆಯನ್ನು ವೇದಿಕೆ ಮೇಲೆ ಪ್ರದರ್ಶಿಸಲಾಗುತ್ತದೆ. ಬಡತನವನ್ನು ವೈಭವೀಕರಿಸಲಾಗುತ್ತದೆ ಎಂಬಿತ್ಯಾದಿ ಆರೋಪಗಳು ಕೇಳಿಬಂದಿವೆ. ಅನೇಕ ಸೆಲೆಬ್ರಿಟಿಗಳು ಕೂಡ ಈ ಶೋ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದುಂಟು.

ಇದನ್ನೂ ಓದಿ:

ಸ್ಪರ್ಧಿಗಳನ್ನು ಪ್ರಶಂಸಿಸಲು ಜಡ್ಜ್​ಗಳು ಅತಿರೇಕಕ್ಕೆ ಹೋಗುತ್ತಾರೆ; ರಿಯಾಲಿಟಿ ಶೋ ಬಗ್ಗೆ ಸೋನು ನಿಗಮ್​ ಬೇಸರ

ಮಗ ಗಾಯಕನಾಗೋದು ಸೋನು ನಿಗಮ್​ಗೆ ಇಷ್ಟ ಇಲ್ವಂತೆ! ಅದರಲ್ಲೂ ಭಾರತದಲ್ಲಿ..

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ