AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೊದಲು ಅವಮಾನ, ಆಮೇಲೆ ಸನ್ಮಾನ’; ಸಂಗೀತಾ ಬೆಂಬಲಕ್ಕೆ ನಿಂತ ಸೋನು ಗೌಡ

ಸಂಗೀತಾ ಶೃಂಗೇರಿ ಅವರು ಅನೇಕ ವಿಚಾರಗಳ ಬಗ್ಗೆ ಈ ವಾರ ಮಾತನಾಡಿದ್ದಾರೆ. ತಪ್ಪಿದ್ದರೆ ಕ್ಷಮೆ ಕೇಳಿದ್ದಾರೆ ಹಲವರ ಎದುರು ಅವರು ತೊಡೆ ತಟ್ಟಿದ್ದಾರೆ. ಅವರು ಈ ವಾರ ಉತ್ತಮ ಆಗಿರಬೇಕಿತ್ತು ಎಂಬುದು ಅನೇಕರ ಅಭಿಪ್ರಾಯ. ಆದರೆ, ಉತ್ತಮ ಸಿಕ್ಕಿದ್ದು ವಿನಯ್​ಗೆ. ಕಳಪೆ ಸಿಕ್ಕಿದ್ದು ಸಂಗೀತಾಗೆ.

‘ಮೊದಲು ಅವಮಾನ, ಆಮೇಲೆ ಸನ್ಮಾನ’; ಸಂಗೀತಾ ಬೆಂಬಲಕ್ಕೆ ನಿಂತ ಸೋನು ಗೌಡ
ಸಂಗೀತಾ-ಸೋನು
ರಾಜೇಶ್ ದುಗ್ಗುಮನೆ
|

Updated on: Nov 04, 2023 | 10:37 AM

Share

ಬಿಗ್ ಬಾಸ್ (Bigg Boss) ಮನೆಯಲ್ಲಿ ಕಳಪೆ ನೀಡುವ ವಿಚಾರವನ್ನು ಯಾರೊಂದಿಗೂ ಮಾತನಾಡುವಂತಿಲ್ಲ. ಅಲ್ಲಿ ತಮ್ಮ ನಿರ್ಧಾರ ಏನಿದೆಯೋ ಅದನ್ನು ಮಾತ್ರ ಹೇಳಬೇಕು. ಇದು ಬಿಗ್ ಬಾಸ್ ನಿಯಮ. ಆದರೆ, ಈ ವಾರ ನಿಯಮ ಮೀರಲಾಗಿದೆ. ಕಳಪೆ ಯಾರಿಗೆ ಕೊಡಬೇಕು ಎನ್ನುವ ಬಗ್ಗೆ ಚರ್ಚೆಗಳು ನಡೆದಿವೆ. ವಿನಯ್ ಗೌಡ ಅವರು ಅನೇಕರ ಮೇಲೆ ಪ್ರಭಾವ ಬೀರಿದ್ದಾರೆ. ಕಳಪೆ ಕೊಡುವ ಬಗ್ಗೆ ಓಪನ್ ಆಗಿ ಚರ್ಚೆ ನಡೆದಿದೆ. ಹೀಗಾಗಿ, ಸಂಗೀತಾ ಶೃಂಗೇರಿಗೆ ಕಳಪೆ ಸಿಕ್ಕಿದೆ. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಅನೇಕರು ಸಂಗೀತಾ ಪರ ಧ್ವನಿ ಎತ್ತಿದ್ದಾರೆ.

ಸಂಗೀತಾ ಶೃಂಗೇರಿ ಅವರು ಅನೇಕ ವಿಚಾರಗಳ ಬಗ್ಗೆ ಈ ವಾರ ಮಾತನಾಡಿದ್ದಾರೆ. ತಪ್ಪಿದ್ದರೆ ಕ್ಷಮೆ ಕೇಳಿದ್ದಾರೆ ಹಲವರ ಎದುರು ಅವರು ತೊಡೆ ತಟ್ಟಿದ್ದಾರೆ. ಅವರು ಈ ವಾರ ಉತ್ತಮ ಆಗಿರಬೇಕಿತ್ತು ಎಂಬುದು ಅನೇಕರ ಅಭಿಪ್ರಾಯ. ಆದರೆ, ಉತ್ತಮ ಸಿಕ್ಕಿದ್ದು ವಿನಯ್​ಗೆ. ಕಳಪೆ ಸಿಕ್ಕಿದ್ದು ಸಂಗೀತಾಗೆ. ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆಗೆ ಬರೋ ಸಾಧ್ಯತೆ ಇದೆ.

ಸೋನು ಶ್ರೀನಿವಾಸ್ ಗೌಡ ಅವರು ಸಂಗೀತಾ ಪರ ಮಾತನಾಡಿದ್ದಾರೆ. ‘ಮೊದಲು ಅವಮಾನ, ಆಮೇಲೆ ಸನ್ಮಾನ’ ಎಂದು ಅವರು ಹೇಳಿದ್ದಾರೆ. ಜೊತೆಗೆ ಬಿಗ್ ಬಾಸ್ ನಿಯಮ ಗೊತ್ತಿಲ್ಲದೆ ಇರುವವರೆಲ್ಲ ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ ಎಂದು ಅವರು ಟೀಕೆ ಮಾಡಿದ್ದಾರೆ. ಅವರು ಮಾಡಿರೋ ಪೋಸ್ಟ್ ವೈರಲ್ ಆಗಿದೆ. ಸಂಗೀತಾ ಮಾತ್ರವಲ್ಲದೆ, ಭವ್ಯಾ ಗೌಡ, ದಿವ್ಯಾ ಸುರೇಶ್ ಸೇರಿ ಅನೇಕರು ಸಂಗೀತಾ ಪರ ಮಾತನಾಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಎಫೆಕ್ಟ್: ‘ಸೀತಾ ರಾಮ’ ಧಾರಾವಾಹಿ ಟಿಆರ್​ಪಿಯಲ್ಲಿ ಇಳಿಕೆ; ಇಲ್ಲಿದೆ ವಿವರ

ಕಳೆದ ಸೀಸನ್​ಗೆ ಹೋಲಿಕೆ ಮಾಡಿದರೆ ಈ ಬಾರಿಯ ಬಿಗ್ ಬಾಸ್ ಸಾಕಷ್ಟು ಚರ್ಚೆ ಆಗುತ್ತಿದೆ. ದೊಡ್ಮನೆಯಲ್ಲಿ ಅನ್ಯಾಯ ನಡೆದಿದ್ದು, ಇದರ ಪರವಾಗಿ ಸುದೀಪ್ ಮಾತನಾಡಬೇಕು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ