AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ಗೆ ಶಾಕ್; ಬಿತ್ತು ಎರಡು ಕೋಟಿ ರೂಪಾಯಿ ಕೇಸ್

ಬಿಗ್ ಬಾಸ್​ಗೂ ವಿವಾದಕ್ಕೂ ಎಲ್ಲಿಲ್ಲದ ನಂಟು. ಈ ಶೋಗೆ ಕಾನೂನಿನ ಸಮಸ್ಯೆಗಳು, ಪೊಲೀಸ್ ಕೇಸ್ಗಳು ಹೊಸದೇನು ಅಲ್ಲ. ಪ್ರತಿ ವರ್ಷವೂ ಒಂದಷ್ಟು ಕೇಸ್​ಗಳು ಬೀಳುತ್ತವೆ. ಕೆಲವು ವಿವಾದಗಳು ಆಗುತ್ತವೆ. ಈ ಬಾರಿಯೂ ಹಾಗೆಯೇ ಆಗಿದೆ. ಬಿಗ್ ಬಾಸ್ ಮೇಲೆ 2 ಕೋಟಿ ರೂಪಾಯಿ ಕೇಸ್ ಬಿದ್ದಿದೆ. ಇದಕ್ಕೆ ಕಾರಣ ಇಲ್ಲಿದೆ.

ಬಿಗ್ ಬಾಸ್​ಗೆ ಶಾಕ್; ಬಿತ್ತು ಎರಡು ಕೋಟಿ ರೂಪಾಯಿ ಕೇಸ್
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Sep 26, 2025 | 7:30 AM

Share

‘ಬಿಗ್ ಬಾಸ್’ (Bigg Boss) ದೇಶದ ಅತ್ಯಂತ ಮನರಂಜನಾತ್ಮಕ ಹಾಗೂ ಅಷ್ಟೇ ವಿವಾದಿತ ಶೋಗಳಲ್ಲಿ ಒಂದು. ಈ ಶೋಗೆ ಕಾನೂನಿನ ಸಮಸ್ಯೆಗಳು, ಪೊಲೀಸ್ ಕೇಸ್​ಗಳು ಹೊಸದೇನು ಅಲ್ಲ. ಪ್ರತಿ ವರ್ಷವೂ ಈ ರೀತಿಯ ಕೆಲವು ಸಮಸ್ಯೆಗಳು ಇದ್ದೇ ಇರುತ್ತವೆ. ಈ ವರ್ಷವೂ ಅದು ಮುಂದುವರಿದಿದೆ. ‘ಹಿಂದಿ ಬಿಗ್ ಬಾಸ್’ 19ನೇ ಸೀಸನ್​ಗೆ ಸಂಕಷ್ಟ ಎದುರಾಗಿದೆ. ಮ್ಯೂಸಿಕ್ ಸಂಸ್ಥೆಯೊಂದು ಈ ಶೋನ ವಿರುದ್ಧ 2 ಕೋಟಿ ರೂಪಾಯಿ ಕೇಸ್ ಹಾಕಿದೆ ಎಂದು ವರದಿ ಆಗಿದೆ.

ಫೋನೋಗ್ರಾಫಿಕ್ ಪರ್ಫಾರ್ಮೆನ್ಸ್ ಲಿಮಿಟೆಡ್ ಬಿಗ್ ಬಾಸ್​ ಮೇಕರ್​ಗಳಾದ ಎಂಡಮೋಲ್ ಶೈನ್ ಇಂಡಿಯಾ ಹಾಗೂ ಬನಿಜಾಯ್ ವಿರುದ್ಧ ನೋಟಿಸ್ ಜಾರಿ ಮಾಡಿದೆ. ‘ಅಗ್ನೀಪತ್’ ಸಿನಿಮಾದ ‘ಚಿಕಣಿ ಚಮೇಲಿ’ ಹಾಗೂ ‘ಗೋರಿ ತೇರಿ ಪ್ಯಾರ್ ಮೇ’ ಸಿನಿಮಾದ ‘ಧಾತ್ ತೇರಿ ಕಿ ಮೇ’ ಹಾಡನ್ನು 11ನೇ ಎಪಿಸೋಡ್​ನಲ್ಲಿ ಬಳಸಿದ ಆರೋಪ ಇದೆ. ಯಾವುದೇ ಒಪ್ಪಿಗೆ ಇಲ್ಲದೆ ಈ ಹಾಡು ಬಳಕೆ ಆಗಿದೆ ಎಂದು ವರದಿ ಆಗಿದೆ.

ಸೋನಿ ಮ್ಯೂಸಿಕ್ ಇಂಡಿಯಾ ಈ ಹಾಡುಗಳ ಹಕ್ಕನ್ನು ಹೊಂದಿವೆ. ಫೋನೋಗ್ರಾಫಿಕ್ ಪರ್ಫಾರ್ಮೆನ್ಸ್ ಲಿಮಿಟೆಡ್ ಈ ಹಕ್ಕುಗಳ ನಿರ್ವಹಣೆ ಮಾಡುತ್ತದೆ. ಸಂಸ್ಥೆಯ ಅನುಮತಿಯಿಲ್ಲದೆ ಹಾಡುಗಳನ್ನು ಬಳಸುವುದು ಉದ್ದೇಶಪೂರ್ವಕ ನಿಯಮ ಉಲ್ಲಂಘನೆಯಾಗಿದೆ. ಆರ್ಥಿಕ ಹಾನಿ ಮತ್ತು ಪರವಾನಗಿ ಶುಲ್ಕವನ್ನು ನೀಡಬೇಕು ಎಂದು ಹೇಳಿದೆ. ಈ ವಿಚಾರದಲ್ಲಿ ಮುಂದಿನ ದಿನಗಳಲ್ಲಿ ರಾಜಿ ಆಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ
Image
‘ಓಜಿ’ ಅಬ್ಬರದ ಕಲೆಕ್ಷನ್; ಮೊದಲ ದಿನವೇ 100 ಕೋಟಿ ರೂಪಾಯಿ ಗಳಿಕೆ
Image
‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋಗೆ ಫೈನಲ್ ಆದ ಸ್ಪರ್ಧಿಗಳು ಇವರೇ ನೋಡಿ
Image
ಮುತ್ತುರಾಜ್ ಹೆಸರು ಬದಲಾಗಿದ್ದು ಅಣ್ಣಾವ್ರಿಗೇ ಗೊತ್ತಿರಲಿಲ್ಲ
Image
ರಿಂಗ್ ಕೊಡಿಸಲು ರಮ್ಯಾ ಜೊತೆ ಜ್ಯುವೆಲರಿ ಶಾಪ್​ಗೆ ಹೋದ ವಿನಯ್;ಇದೆ ಟ್ವಿಸ್ಟ್

ಕೆಲವು ವರದಿಗಳ ಪ್ರಕಾರ ಇದಕ್ಕೂ ಎಂಡಮೋಲ್ ಸಂಸ್ಥೆಗೂ ಯಾವುದೇ ಸಂಬಂಧ ಇಲ್ಲ ಎನ್ನಲಾಗಿದೆ. ಯಾವ ಹಾಡುಗಳನ್ನು ಪ್ಲೇ ಮಾಡಬೇಕು ಎಂಬುದನ್ನು ಜಿಯೋ ಹಾಟ್​​ಸ್ಟಾರ್​ನ ಪ್ರೋಮೋ ಟೀಮ್​ನವರು ನಿರ್ಧರಿಸುತ್ತಾರೆ ಎನ್ನಲಾಗಿದೆ.  ಹೀಗಾಗಿ, ಈ ನೋಟಿಸ್​ಗೆ ಜಿಯೋ ಹಾಟ್​ಸ್ಟಾರ್ ಉತ್ತರಿಸುತ್ತದೆಯೇ ಎಂಬ ಪ್ರಶ್ನೆಯೂ ಮೂಡಿದೆ.

ಇದನ್ನೂ ಓದಿ: ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋಗೆ ಫೈನಲ್ ಆದ ಸ್ಪರ್ಧಿಗಳು ಇವರೇ ನೋಡಿ

ಸದ್ಯ ಕನ್ನಡದ ಬಿಗ್ ಬಾಸ್ ಆರಂಬಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಶೋ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಬಾರಿ ಯಾವ ರೀತಿಯ ಸ್ಪರ್ಧಿಗಳು ಬರುತ್ತಾರೆ ಎಂಬ ಕುತೂಹಲ ಮೂಡಿದೆ. ಕಳೆದ ಬಾರಿ ಶೋ ವಿವಾದಗಳಿಂದಲೇ ತುಂಬಿ ಹೋಗಿತ್ತು. ಈ ಬಾರಿ ಆ ರೀತಿ ಆಗದಿರಲಿ ಎಂಬುದು ಎಲ್ಲರ ಆಶಯ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!
ಈದ್ ಮಿಲಾದ್​ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ
ಈದ್ ಮಿಲಾದ್​ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ