AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೇಶ್ ಕೃಷ್ಣನ್ ಬಗ್ಗೆ ಎಸ್​​ಪಿಬಿಗೆ ಇತ್ತು ವಿಶೇಷ ಹೆಮ್ಮೆ

ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಮಣ್ಯಂ ಅವರು ರಾಜೇಶ್ ಕೃಷ್ಣನ್ ಅವರ ಗಾಯನ ಶೈಲಿಯನ್ನು ಮೆಚ್ಚಿಕೊಂಡಿದ್ದರು. ಈ ವಿಡಿಯೋ ವೈರಲ್ ಆಗಿದೆ. ಗಾಯಕ ರಾಜೇಶ್ ಕೃಷ್ಣನ್ ಅವರು ಕನ್ನಡ ಚಿತ್ರರಂಗದಲ್ಲಿ ಗಾಯಕ ಮತ್ತು ನಟರಾಗಿ ಯಶಸ್ವಿಯಾಗಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದಲ್ಲಿ ಜಡ್ಜ್​ ಆಗಿದ್ದಾರೆ. ಇದು ಅಭಿಮಾನಿಗಳಿಗೆ ಖುಷಿಕೊಟ್ಟಿದೆ.

ರಾಜೇಶ್ ಕೃಷ್ಣನ್ ಬಗ್ಗೆ ಎಸ್​​ಪಿಬಿಗೆ ಇತ್ತು ವಿಶೇಷ ಹೆಮ್ಮೆ
ರಾಜೇಶ್-ಎಸ್​ಪಿಬಿ
 ಶ್ರೀಲಕ್ಷ್ಮೀ ಎಚ್
| Edited By: |

Updated on:Jan 04, 2025 | 8:08 AM

Share

ಎಸ್​​ಪಿ ಬಾಲಸುಬ್ರಮಣ್ಯಮ್ ಅವರು ಚಿತ್ರರಂಗ ಕಂಡ ಶ್ರೇಷ್ಠ ಗಾಯಕರಲ್ಲಿ ಒಬ್ಬರು. ಅವರು ಸಾವಿರಾರು ಹಾಡುಗಳನ್ನು ಹಾಡಿದ್ದರೂ ಅವರಿಗೆ ಯಾವುದೇ ಅಹಂ ಇರಲಿಲ್ಲ. ಎಂದಿಗೂ ಅವರು ಅಹಂ ತೋರಿಸಿದವರಲ್ಲ. ದೊಡ್ಡ ಗಾಯಕರಿರಲಿ, ಚಿಕ್ಕ ಗಾಯಕರಿರಲಿ ಅವರು ಎಲ್ಲರ ಜೊತೆಯೂ ಸಮನಾಗಿ ನಡೆದುಕೊಳ್ಳುತ್ತಿದ್ದರು. ಈಗ ಅವರು ರಾಜೇಶ್ ಕೃಷ್ಣನ್ ಬಗ್ಗೆ ಮಾತನಾಡಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಾಜೇಶ್ ಕೃಷ್ಣನ್ ಕೂಡ ಓರ್ವ ಅದ್ಭುತ ಗಾಯಕ. ಕನ್ನಡದವರೇ ಆದ ಅವರು ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಉತ್ತಮವಾಗಿ ಅವರು ಹಾಡುತ್ತಾರೆ. ಈ ಕಾರಣಕ್ಕೆ ಅವರು ಅನೇಕರಿಗೆ ಇಷ್ಟ ಆಗುತ್ತಾರೆ. ಅವರ ಬಗ್ಗೆ ಅನೇಕರು ಮಾತನಾಡಿದ್ದು ಇದೆ. ಅದೇ ರೀತಿ ರಾಜೇಶ್ ಕೃಷ್ಣನ್ ಬಗ್ಗೆ ಎಸ್​ಪಿಬಿ ಅವರು ಮೆಚ್ಚುಗೆಯ ಮಾತುಗಳನ್ನು ಆಡಿದ್ದರು.

‘ರಾಜೇಶ್ ಅಂತ ಒಬ್ಬ ಸಿಂಗರ್ ಇದಾನೆ. ಸೇಮ್ ಟು ಸೇಮ್ ನನ್ನ ಹಾಗೇ ಹಾಡ್ತಾನೆ. ಎಷ್ಟೋ ಬಾರಿ ನಾನೇ ಮೋಸ ಹೋಗಿದ್ದೀನಿ’ ಎಂದು ರಾಜೇಶ್ ಕೃಷ್ಣನ್ ಬಗ್ಗೆ ಎಸ್​ಪಿಬಿ ಸಂದರ್ಶನದಲ್ಲ ಗರ್ವದಿಂದ ಹೇಳಿಕೊಂಡಿದ್ದರು. ರಾಜೇಶ್ ಅವರ ಕಲೆಯನ್ನು ಎಸ್​ಪಿಬಿ ಅವರು ಮೆಚ್ಚಿಕೊಂಡಿದ್ದರು.

90ರ ದಶಕದಿಂದ ರಾಜೇಶ್ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ‘ಗೌರಿ ಗಣೇಶ’ ಚಿತ್ರದ ‘ಮಾತಿನಲ್ಲೆ..’ ಹಾಡನ್ನು ಅವರು ಹಾಡಿದರು. ‘ಹುಚ್ಚ’ ಚಿತ್ರದ ‘ಉಸಿರೇ.. ಉಸಿರೇ’ ಹಾಡಿ ಸಾಕಷ್ಟು ಹೆಸರು ಮಾಡಿದರು. ಅವರು ಸಾಕಷ್ಟು ಅವಾರ್ಡ್ ಪಡೆದಿದ್ದಾರೆ. ಅವರು ನಟನಾಗಿಯೂ ಫೇಮಸ್ ಆಗಿದ್ದಾರೆ. ‘ಗಾಳಿಪಟ’ ಚಿತ್ರದಲ್ಲಿ ಕಿಟ್ಟಿ ಆಗಿ ಅವರು ಕಾಣಿಸಿಕೊಂಡಿದ್ದರು. ಅವರ ಪಾತ್ರ ಗಮನ ಸೆಳೆದಿತ್ತು.

ಇದನ್ನೂ ಓದಿ: ಸರಿಗಮಪ ಶೋನಿಂದ ರಾಜೇಶ್ ಕೃಷ್ಣನ್ ಹೊರಹೋಗಲು ಅನುಶ್ರೀ ಕಾರಣ’; ಅಚ್ಚರಿ ವಿಚಾರ ಹೇಳಿದ ವಿಜಯ್ ಪ್ರಕಾಶ್

ರಾಜೇಶ್ ಕೃಷ್ಣನ್ ಅವರು ಸದ್ಯ ‘ಸರಿಗಮಪ’ ಹೊಸ ಸೀಸನ್​ನ ಜಡ್ಜ್​ ಸ್ಥಾನದಲ್ಲಿ ಕುಳಿತಿದ್ದಾರೆ. ಅವರನ್ನು ಜಡ್ಜ್​ ಆಗಿ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಅವರು ‘ಎದೆ ತುಂಬು ಹಾಡುವೆನು’ಗಾಗಿ ‘ಸರಿಗಮಪ’ ಶೋ ಬಿಟ್ಟು ಕಲರ್ಸ್​ ಕನ್ನಡ ಶೋಗೆ ಹೋಗಿದ್ದರು. ಆದರೆ, ಈಗ ಅವರು ಮರಳಿದ್ದಾರೆ. ಈ ಕಾರಣಕ್ಕೆ ಫ್ಯಾನ್ಸ್ ತುಂಬಾನೇ ಖುಷಿಪಟ್ಟಿದ್ದಾರೆ. ಅವರ ಜೊತೆ ವಿಜಯ್ ಪ್ರಕಾಶ್, ಅರ್ಜುನ್ ಜನ್ಯ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:07 am, Sat, 4 January 25

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​