AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೇಶ್ ಕೃಷ್ಣನ್ ಬಗ್ಗೆ ಎಸ್​​ಪಿಬಿಗೆ ಇತ್ತು ವಿಶೇಷ ಹೆಮ್ಮೆ

ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಮಣ್ಯಂ ಅವರು ರಾಜೇಶ್ ಕೃಷ್ಣನ್ ಅವರ ಗಾಯನ ಶೈಲಿಯನ್ನು ಮೆಚ್ಚಿಕೊಂಡಿದ್ದರು. ಈ ವಿಡಿಯೋ ವೈರಲ್ ಆಗಿದೆ. ಗಾಯಕ ರಾಜೇಶ್ ಕೃಷ್ಣನ್ ಅವರು ಕನ್ನಡ ಚಿತ್ರರಂಗದಲ್ಲಿ ಗಾಯಕ ಮತ್ತು ನಟರಾಗಿ ಯಶಸ್ವಿಯಾಗಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದಲ್ಲಿ ಜಡ್ಜ್​ ಆಗಿದ್ದಾರೆ. ಇದು ಅಭಿಮಾನಿಗಳಿಗೆ ಖುಷಿಕೊಟ್ಟಿದೆ.

ರಾಜೇಶ್ ಕೃಷ್ಣನ್ ಬಗ್ಗೆ ಎಸ್​​ಪಿಬಿಗೆ ಇತ್ತು ವಿಶೇಷ ಹೆಮ್ಮೆ
ರಾಜೇಶ್-ಎಸ್​ಪಿಬಿ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Jan 04, 2025 | 8:08 AM

ಎಸ್​​ಪಿ ಬಾಲಸುಬ್ರಮಣ್ಯಮ್ ಅವರು ಚಿತ್ರರಂಗ ಕಂಡ ಶ್ರೇಷ್ಠ ಗಾಯಕರಲ್ಲಿ ಒಬ್ಬರು. ಅವರು ಸಾವಿರಾರು ಹಾಡುಗಳನ್ನು ಹಾಡಿದ್ದರೂ ಅವರಿಗೆ ಯಾವುದೇ ಅಹಂ ಇರಲಿಲ್ಲ. ಎಂದಿಗೂ ಅವರು ಅಹಂ ತೋರಿಸಿದವರಲ್ಲ. ದೊಡ್ಡ ಗಾಯಕರಿರಲಿ, ಚಿಕ್ಕ ಗಾಯಕರಿರಲಿ ಅವರು ಎಲ್ಲರ ಜೊತೆಯೂ ಸಮನಾಗಿ ನಡೆದುಕೊಳ್ಳುತ್ತಿದ್ದರು. ಈಗ ಅವರು ರಾಜೇಶ್ ಕೃಷ್ಣನ್ ಬಗ್ಗೆ ಮಾತನಾಡಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಾಜೇಶ್ ಕೃಷ್ಣನ್ ಕೂಡ ಓರ್ವ ಅದ್ಭುತ ಗಾಯಕ. ಕನ್ನಡದವರೇ ಆದ ಅವರು ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಉತ್ತಮವಾಗಿ ಅವರು ಹಾಡುತ್ತಾರೆ. ಈ ಕಾರಣಕ್ಕೆ ಅವರು ಅನೇಕರಿಗೆ ಇಷ್ಟ ಆಗುತ್ತಾರೆ. ಅವರ ಬಗ್ಗೆ ಅನೇಕರು ಮಾತನಾಡಿದ್ದು ಇದೆ. ಅದೇ ರೀತಿ ರಾಜೇಶ್ ಕೃಷ್ಣನ್ ಬಗ್ಗೆ ಎಸ್​ಪಿಬಿ ಅವರು ಮೆಚ್ಚುಗೆಯ ಮಾತುಗಳನ್ನು ಆಡಿದ್ದರು.

‘ರಾಜೇಶ್ ಅಂತ ಒಬ್ಬ ಸಿಂಗರ್ ಇದಾನೆ. ಸೇಮ್ ಟು ಸೇಮ್ ನನ್ನ ಹಾಗೇ ಹಾಡ್ತಾನೆ. ಎಷ್ಟೋ ಬಾರಿ ನಾನೇ ಮೋಸ ಹೋಗಿದ್ದೀನಿ’ ಎಂದು ರಾಜೇಶ್ ಕೃಷ್ಣನ್ ಬಗ್ಗೆ ಎಸ್​ಪಿಬಿ ಸಂದರ್ಶನದಲ್ಲ ಗರ್ವದಿಂದ ಹೇಳಿಕೊಂಡಿದ್ದರು. ರಾಜೇಶ್ ಅವರ ಕಲೆಯನ್ನು ಎಸ್​ಪಿಬಿ ಅವರು ಮೆಚ್ಚಿಕೊಂಡಿದ್ದರು.

90ರ ದಶಕದಿಂದ ರಾಜೇಶ್ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ‘ಗೌರಿ ಗಣೇಶ’ ಚಿತ್ರದ ‘ಮಾತಿನಲ್ಲೆ..’ ಹಾಡನ್ನು ಅವರು ಹಾಡಿದರು. ‘ಹುಚ್ಚ’ ಚಿತ್ರದ ‘ಉಸಿರೇ.. ಉಸಿರೇ’ ಹಾಡಿ ಸಾಕಷ್ಟು ಹೆಸರು ಮಾಡಿದರು. ಅವರು ಸಾಕಷ್ಟು ಅವಾರ್ಡ್ ಪಡೆದಿದ್ದಾರೆ. ಅವರು ನಟನಾಗಿಯೂ ಫೇಮಸ್ ಆಗಿದ್ದಾರೆ. ‘ಗಾಳಿಪಟ’ ಚಿತ್ರದಲ್ಲಿ ಕಿಟ್ಟಿ ಆಗಿ ಅವರು ಕಾಣಿಸಿಕೊಂಡಿದ್ದರು. ಅವರ ಪಾತ್ರ ಗಮನ ಸೆಳೆದಿತ್ತು.

ಇದನ್ನೂ ಓದಿ: ಸರಿಗಮಪ ಶೋನಿಂದ ರಾಜೇಶ್ ಕೃಷ್ಣನ್ ಹೊರಹೋಗಲು ಅನುಶ್ರೀ ಕಾರಣ’; ಅಚ್ಚರಿ ವಿಚಾರ ಹೇಳಿದ ವಿಜಯ್ ಪ್ರಕಾಶ್

ರಾಜೇಶ್ ಕೃಷ್ಣನ್ ಅವರು ಸದ್ಯ ‘ಸರಿಗಮಪ’ ಹೊಸ ಸೀಸನ್​ನ ಜಡ್ಜ್​ ಸ್ಥಾನದಲ್ಲಿ ಕುಳಿತಿದ್ದಾರೆ. ಅವರನ್ನು ಜಡ್ಜ್​ ಆಗಿ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಅವರು ‘ಎದೆ ತುಂಬು ಹಾಡುವೆನು’ಗಾಗಿ ‘ಸರಿಗಮಪ’ ಶೋ ಬಿಟ್ಟು ಕಲರ್ಸ್​ ಕನ್ನಡ ಶೋಗೆ ಹೋಗಿದ್ದರು. ಆದರೆ, ಈಗ ಅವರು ಮರಳಿದ್ದಾರೆ. ಈ ಕಾರಣಕ್ಕೆ ಫ್ಯಾನ್ಸ್ ತುಂಬಾನೇ ಖುಷಿಪಟ್ಟಿದ್ದಾರೆ. ಅವರ ಜೊತೆ ವಿಜಯ್ ಪ್ರಕಾಶ್, ಅರ್ಜುನ್ ಜನ್ಯ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:07 am, Sat, 4 January 25

ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು