AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಲ್ಲಿ ವಿರುದ್ಧ ಮಸಲತ್ತು ಶುರು ಮಾಡಿದ ಸ್ಪಂದನಾ; ಏರಿದ ಏಣಿಯನ್ನೇ ಒದ್ದರಾ?

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ಅವರು ಉತ್ತಮವಾಗಿ ಆಟ ಆಡುತ್ತಿದ್ದಾರೆ. ಅವರು ಗೆಲ್ಲೋ ಕುದುರೆ ಆಗಿದ್ದಾರೆ. ಈ ಕಾರಣದಿಂದಲೇ ಅನೇಕರು ಗಿಲ್ಲಿ ಸುತ್ತ ಸುತ್ತುತ್ತಿದ್ದಾರೆ. ಇನ್ನೂ ಕೆಲವರು ಗಿಲ್ಲಿಯನ್ನು ಎದುರು ಹಾಕಿಕೊಳ್ಳುತ್ತಿದ್ದಾರೆ. ಸ್ಪಂದನಾ ಇಷ್ಟು ದಿನ ಗಿಲ್ಲಿ ಜೊತೆ ಚೆನ್ನಾಗಿಯೇ ಇದ್ದು, ಈಗ ಅವರ ವಿರುದ್ಧವೇ ಮಸಲತ್ತು ಮಾಡುತ್ತಿದ್ದಾರೆ.

ಗಿಲ್ಲಿ ವಿರುದ್ಧ ಮಸಲತ್ತು ಶುರು ಮಾಡಿದ ಸ್ಪಂದನಾ; ಏರಿದ ಏಣಿಯನ್ನೇ ಒದ್ದರಾ?
ಗಿಲ್ಲಿ-ಸ್ಪಂದನಾ
ರಾಜೇಶ್ ದುಗ್ಗುಮನೆ
|

Updated on:Nov 20, 2025 | 8:55 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ (BBk 12) ಸ್ಪಂದನಾ ಹಾಗೂ ಗಿಲ್ಲಿ ನಟ ಫ್ರೆಂಡ್​ಶಿಪ್ ಗಮನ ಸೆಳೆದಿದೆ. ‘ಕಳ್ಳ ಪುಟ್ಟಿ’ ಎಂದು ಸ್ಪಂದನಾ ಅವರನ್ನು ಗಿಲ್ಲಿ ಪ್ರೀತಿಯಿಂದ ಕರೆಯುತ್ತಿದ್ದಾರೆ. ಗಿಲ್ಲಿ ಅವರು ಸ್ಪಂದನಾನ ಸಾಕಷ್ಟು ಗೌರವಿಸುತ್ತಾರೆ. ವಿಶೇಷ ಪ್ರೀತಿ ತೋರಿಸುತ್ತಾರೆ. ಆದರೆ, ಸ್ಪಂದನಾ ಅವರು ಗಿಲ್ಲಿ ವಿರುದ್ಧವೇ ಈಗ ಮಸಲತ್ತು ಮಾಡುತ್ತಿದ್ದಾರೆ. ಧನುಷ್ ಜೊತೆ ಸೇರಿಕೊಂಡು ಗಿಲ್ಲಿ ವಿರುದ್ಧ ಮಾತನಾಡುತ್ತಿದ್ದಾರೆ. ಇದು ವೀಕ್ಷಕರ ಗಮನಕ್ಕೆ ಬಂದಿದೆ.

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ಅವರು ಉತ್ತಮವಾಗಿ ಆಟ ಆಡುತ್ತಿದ್ದಾರೆ. ಅವರು ಗೆಲ್ಲೋ ಕುದುರೆ ಆಗಿದ್ದಾರೆ. ಈ ಕಾರಣದಿಂದಲೇ ಅನೇಕರು ಗಿಲ್ಲಿ ಸುತ್ತ ಸುತ್ತುತ್ತಿದ್ದಾರೆ. ಇನ್ನೂ ಕೆಲವರು ಗಿಲ್ಲಿಯನ್ನು ಎದುರು ಹಾಕಿಕೊಳ್ಳುತ್ತಿದ್ದಾರೆ. ಸ್ಪಂದನಾ ಇಷ್ಟು ದಿನ ಗಿಲ್ಲಿ ಜೊತೆ ಚೆನ್ನಾಗಿಯೇ ಇದ್ದು, ಈಗ ಅವರ ವಿರುದ್ಧವೇ ಮಸಲತ್ತು ಮಾಡುತ್ತಿದ್ದಾರೆ.

ಈ ಮೊದಲು ಸ್ಪಂದನಾ ಅವರು ರಕ್ಷಿತಾ ಶೆಟ್ಟಿ ಜೊತೆ ಒಳ್ಳೆಯ ರೀತಿಯಲ್ಲಿ ಇದ್ದರು. ಆದರೆ, ಇತ್ತೀಚೆಗೆ ಸ್ಪಂದನಾ ಅವರು ರಕ್ಷಿತಾ ಬಗ್ಗೆ ಅಸಮಧಾನ ಹೊರಹಾಕಿದ್ದರು. ‘ರಕ್ಷಿತಾ ಮುಗ್ಧೆ ಅಲ್ಲ. ಅವಳು ಪ್ಲ್ಯಾನ್ ಮಾಡಿಕೊಂಡು ಆಡುತ್ತಿದ್ದಾಳೆ’ ಎಂದು ಹೇಳಿದ್ದರು. ರಕ್ಷಿತಾ ಬೆನ್ನ ಹಿಂದೆ ನಿಂತು ಅನೇಕ ಬಾರಿ ಅವರು ಈ ರೀತಿಯ ಮಾತನ್ನು ಹೇಳಿದ್ದಾರೆ.

ಈಗ ಗಿಲ್ಲಿ ಬಗ್ಗೆ ಮಾತನಾಡುತ್ತಿದ್ದಾರೆ. ಧನುಷ್ ಜೊತೆ ಸ್ಪಂದನಾ ಮಾತುಕತೆ ನಡೆಸಿದ್ದಾರೆ. ‘ಎಲ್ಲರೂ ಗಿಲ್ಲಿಯನ್ನು ಅವಾಯ್ಡ್ ಮಾಡಿದರೆ ಅವನು ದಾರಿಗೆ ಬರ್ತಾನೆ’ ಎಂದು ಧನುಷ್ ಹೇಳಿದರು. ‘ಏನೇ ಆದರೂ ಕಾವ್ಯಾ ಅವನನ್ನು ದೂರ ತಳ್ಳಲ್ಲ’ ಎಂದು ಸ್ಪಂದನಾ ಹೇಳಿದರು. ‘ಕಾವ್ಯಾಗೂ ಲಾಭ ಇದೆ’ ಎಂದು ಧನು ಹೇಳಿದರು. ಆಗ ಸ್ಪಂದನಾ ಅವರು, ‘ಇದು ಕಾವ್ಯಾಗೂ ಗೊತ್ತು ಎನಿಸುತ್ತದೆ’ ಎಂದಿದ್ದಾರೆ.

ಇದನ್ನೂ ಓದಿ: ರೇಜಿಗೆ ಹುಟ್ಟಿಸಿದ ಅಶ್ವಿನಿ ಗೌಡ-ಜಾನ್ವಿ; ಅಸಮಾಧಾನ ಹೊರಹಾಕಿದ ಬಿಗ್ ಬಾಸ್

ಸ್ಪಂದನಾ ಅವರು ಈ ರೀತಿ ಬದಲಾಗುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ‘ಗಿಲ್ಲಿ ಇಲ್ಲ ಎಂದಿದ್ರೆ ನೀವು ಇಲ್ಲಿವರೆಗೆ ಬರುತ್ತಲೇ ಇರುತ್ತಿರಲಿಲ್ಲ, ಏರಿದ ಏಣಿಯನ್ನು ಒದೆಯಬೇಡಿ’ ಎಂದು ಅನೇಕರು ಕಿವಿಮಾತು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:55 am, Thu, 20 November 25

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು