AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಲ್ಲಿ ವಿರುದ್ಧ ಮಸಲತ್ತು ಶುರು ಮಾಡಿದ ಸ್ಪಂದನಾ; ಏರಿದ ಏಣಿಯನ್ನೇ ಒದ್ದರಾ?

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ಅವರು ಉತ್ತಮವಾಗಿ ಆಟ ಆಡುತ್ತಿದ್ದಾರೆ. ಅವರು ಗೆಲ್ಲೋ ಕುದುರೆ ಆಗಿದ್ದಾರೆ. ಈ ಕಾರಣದಿಂದಲೇ ಅನೇಕರು ಗಿಲ್ಲಿ ಸುತ್ತ ಸುತ್ತುತ್ತಿದ್ದಾರೆ. ಇನ್ನೂ ಕೆಲವರು ಗಿಲ್ಲಿಯನ್ನು ಎದುರು ಹಾಕಿಕೊಳ್ಳುತ್ತಿದ್ದಾರೆ. ಸ್ಪಂದನಾ ಇಷ್ಟು ದಿನ ಗಿಲ್ಲಿ ಜೊತೆ ಚೆನ್ನಾಗಿಯೇ ಇದ್ದು, ಈಗ ಅವರ ವಿರುದ್ಧವೇ ಮಸಲತ್ತು ಮಾಡುತ್ತಿದ್ದಾರೆ.

ಗಿಲ್ಲಿ ವಿರುದ್ಧ ಮಸಲತ್ತು ಶುರು ಮಾಡಿದ ಸ್ಪಂದನಾ; ಏರಿದ ಏಣಿಯನ್ನೇ ಒದ್ದರಾ?
ಗಿಲ್ಲಿ-ಸ್ಪಂದನಾ
ರಾಜೇಶ್ ದುಗ್ಗುಮನೆ
|

Updated on:Nov 20, 2025 | 8:55 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ (BBk 12) ಸ್ಪಂದನಾ ಹಾಗೂ ಗಿಲ್ಲಿ ನಟ ಫ್ರೆಂಡ್​ಶಿಪ್ ಗಮನ ಸೆಳೆದಿದೆ. ‘ಕಳ್ಳ ಪುಟ್ಟಿ’ ಎಂದು ಸ್ಪಂದನಾ ಅವರನ್ನು ಗಿಲ್ಲಿ ಪ್ರೀತಿಯಿಂದ ಕರೆಯುತ್ತಿದ್ದಾರೆ. ಗಿಲ್ಲಿ ಅವರು ಸ್ಪಂದನಾನ ಸಾಕಷ್ಟು ಗೌರವಿಸುತ್ತಾರೆ. ವಿಶೇಷ ಪ್ರೀತಿ ತೋರಿಸುತ್ತಾರೆ. ಆದರೆ, ಸ್ಪಂದನಾ ಅವರು ಗಿಲ್ಲಿ ವಿರುದ್ಧವೇ ಈಗ ಮಸಲತ್ತು ಮಾಡುತ್ತಿದ್ದಾರೆ. ಧನುಷ್ ಜೊತೆ ಸೇರಿಕೊಂಡು ಗಿಲ್ಲಿ ವಿರುದ್ಧ ಮಾತನಾಡುತ್ತಿದ್ದಾರೆ. ಇದು ವೀಕ್ಷಕರ ಗಮನಕ್ಕೆ ಬಂದಿದೆ.

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ಅವರು ಉತ್ತಮವಾಗಿ ಆಟ ಆಡುತ್ತಿದ್ದಾರೆ. ಅವರು ಗೆಲ್ಲೋ ಕುದುರೆ ಆಗಿದ್ದಾರೆ. ಈ ಕಾರಣದಿಂದಲೇ ಅನೇಕರು ಗಿಲ್ಲಿ ಸುತ್ತ ಸುತ್ತುತ್ತಿದ್ದಾರೆ. ಇನ್ನೂ ಕೆಲವರು ಗಿಲ್ಲಿಯನ್ನು ಎದುರು ಹಾಕಿಕೊಳ್ಳುತ್ತಿದ್ದಾರೆ. ಸ್ಪಂದನಾ ಇಷ್ಟು ದಿನ ಗಿಲ್ಲಿ ಜೊತೆ ಚೆನ್ನಾಗಿಯೇ ಇದ್ದು, ಈಗ ಅವರ ವಿರುದ್ಧವೇ ಮಸಲತ್ತು ಮಾಡುತ್ತಿದ್ದಾರೆ.

ಈ ಮೊದಲು ಸ್ಪಂದನಾ ಅವರು ರಕ್ಷಿತಾ ಶೆಟ್ಟಿ ಜೊತೆ ಒಳ್ಳೆಯ ರೀತಿಯಲ್ಲಿ ಇದ್ದರು. ಆದರೆ, ಇತ್ತೀಚೆಗೆ ಸ್ಪಂದನಾ ಅವರು ರಕ್ಷಿತಾ ಬಗ್ಗೆ ಅಸಮಧಾನ ಹೊರಹಾಕಿದ್ದರು. ‘ರಕ್ಷಿತಾ ಮುಗ್ಧೆ ಅಲ್ಲ. ಅವಳು ಪ್ಲ್ಯಾನ್ ಮಾಡಿಕೊಂಡು ಆಡುತ್ತಿದ್ದಾಳೆ’ ಎಂದು ಹೇಳಿದ್ದರು. ರಕ್ಷಿತಾ ಬೆನ್ನ ಹಿಂದೆ ನಿಂತು ಅನೇಕ ಬಾರಿ ಅವರು ಈ ರೀತಿಯ ಮಾತನ್ನು ಹೇಳಿದ್ದಾರೆ.

ಈಗ ಗಿಲ್ಲಿ ಬಗ್ಗೆ ಮಾತನಾಡುತ್ತಿದ್ದಾರೆ. ಧನುಷ್ ಜೊತೆ ಸ್ಪಂದನಾ ಮಾತುಕತೆ ನಡೆಸಿದ್ದಾರೆ. ‘ಎಲ್ಲರೂ ಗಿಲ್ಲಿಯನ್ನು ಅವಾಯ್ಡ್ ಮಾಡಿದರೆ ಅವನು ದಾರಿಗೆ ಬರ್ತಾನೆ’ ಎಂದು ಧನುಷ್ ಹೇಳಿದರು. ‘ಏನೇ ಆದರೂ ಕಾವ್ಯಾ ಅವನನ್ನು ದೂರ ತಳ್ಳಲ್ಲ’ ಎಂದು ಸ್ಪಂದನಾ ಹೇಳಿದರು. ‘ಕಾವ್ಯಾಗೂ ಲಾಭ ಇದೆ’ ಎಂದು ಧನು ಹೇಳಿದರು. ಆಗ ಸ್ಪಂದನಾ ಅವರು, ‘ಇದು ಕಾವ್ಯಾಗೂ ಗೊತ್ತು ಎನಿಸುತ್ತದೆ’ ಎಂದಿದ್ದಾರೆ.

ಇದನ್ನೂ ಓದಿ: ರೇಜಿಗೆ ಹುಟ್ಟಿಸಿದ ಅಶ್ವಿನಿ ಗೌಡ-ಜಾನ್ವಿ; ಅಸಮಾಧಾನ ಹೊರಹಾಕಿದ ಬಿಗ್ ಬಾಸ್

ಸ್ಪಂದನಾ ಅವರು ಈ ರೀತಿ ಬದಲಾಗುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ‘ಗಿಲ್ಲಿ ಇಲ್ಲ ಎಂದಿದ್ರೆ ನೀವು ಇಲ್ಲಿವರೆಗೆ ಬರುತ್ತಲೇ ಇರುತ್ತಿರಲಿಲ್ಲ, ಏರಿದ ಏಣಿಯನ್ನು ಒದೆಯಬೇಡಿ’ ಎಂದು ಅನೇಕರು ಕಿವಿಮಾತು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:55 am, Thu, 20 November 25

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ