AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮುಗಿದ ಬಳಿಕ ಆ ಜಾಗ ತುಂಬಲು ಬರುತ್ತಿವೆ ಹೊಸ ಧಾರಾವಾಹಿ ಹಾಗೂ ರಿಯಾಲಿಟಿ ಶೋ

ಬಿಗ್ ಬಾಸ್ ಮುಗಿದ ಬಳಿಕ ಮುಂದೇನು ಎನ್ನುವ ಪ್ರಶ್ನೆ ವೀಕ್ಷಕರಲ್ಲಿ ಮೂಡಿತ್ತು. ಇದಕ್ಕೆ ಉತ್ತರ ಸಿಕ್ಕಿದೆ. ಎರಡು ಹೊಸ ಧಾರಾವಾಹಿ ಹಾಗೂ ಒಂದು ರಿಯಾಲಿಟಿ ಶೋ ಪ್ರಸಾರ ಆಗಲು ರೆಡಿ ಆಗಿದೆ.

ಬಿಗ್ ಬಾಸ್ ಮುಗಿದ ಬಳಿಕ ಆ ಜಾಗ ತುಂಬಲು ಬರುತ್ತಿವೆ ಹೊಸ ಧಾರಾವಾಹಿ ಹಾಗೂ ರಿಯಾಲಿಟಿ ಶೋ
ಸೃಜನ್​-ಅಮೂಲ್ಯ
ರಾಜೇಶ್ ದುಗ್ಗುಮನೆ
|

Updated on:Jan 20, 2024 | 11:55 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ (BBK 10) ಪೂರ್ಣಗೊಳ್ಳಲು ಇನ್ನು ಕೆಲವೇ ದಿನಗಳು ಬಾಕಿ ಇವೆ. ಜನವರಿ 27 ಹಾಗೂ 28ರಂದು ಬಿಗ್ ಬಾಸ್ ಫಿನಾಲೆ ನಡೆಯಲಿದೆ. ಈಗಿರುವ ಏಳು ಮಂದಿಯ ಪೈಕಿ ಒಬ್ಬರು ಕಪ್ ಎತ್ತಲಿದ್ದಾರೆ. ಅವರು ಯಾರು ಎನ್ನುವ ಕುತೂಹಲಕ್ಕೆ ಜನವರಿ 28ರಂದು ಉತ್ತರ ಸಿಗಲಿದೆ. ಬಿಗ್ ಬಾಸ್ ಮುಗಿದ ಬಳಿಕ ಮುಂದೇನು ಎನ್ನುವ ಪ್ರಶ್ನೆ ವೀಕ್ಷಕರಲ್ಲಿ ಮೂಡಿತ್ತು. ಇದಕ್ಕೆ ಉತ್ತರ ಸಿಕ್ಕಿದೆ. ಎರಡು ಹೊಸ ಧಾರಾವಾಹಿ ಹಾಗೂ ಒಂದು ರಿಯಾಲಿಟಿ ಶೋ ಪ್ರಸಾರ ಆಗಲು ರೆಡಿ ಆಗಿದೆ.

ಶ್ರೀಗೌರಿ

‘ಶ್ರೀಗೌರಿ’ ಧಾರಾವಾಹಿ ಡಿಸೆಂಬರ್ 28ರಂದು ಪ್ರಸಾರ ಆರಂಭಿಸಲಿದೆ. ರಾತ್ರಿ 8:30ಕ್ಕೆ ಈ ಧಾರಾವಾಹಿ ಪ್ರಸಾರ ಕಾಣಲಿದೆ. ‘ಬಿಗ್ ಬಾಸ್ ಒಟಿಟಿ’ ಮೂಲಕ ಜನಪ್ರಿಯತೆ ಪಡೆದ ಅಮೂಲ್ಯ ಗೌಡ ಈ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಅವರು ಶ್ರೀಗೌರಿ ಪಾತ್ರ ಮಾಡುತ್ತಿದ್ದಾರೆ. ‘ಯಶೋದೆ’ ಧಾರಾವಾಹಿಯಲ್ಲಿ ನಟಿಸಿ ನಂತರ ಚಿತ್ರರಂಗದಿಂದ ದೂರವೇ ಇದ್ದ ಕಾರ್ತಿಕ್ ಅವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಸುನಿಲ್ ಪುರಾಣಿಕ್ ಅವರು ಕಥಾ ನಾಯಕಿಯ ತಂದೆ ಪಾತ್ರದಲ್ಲಿ ನಟಿಸುತ್ತಿದ್ದಾರೆ. ರಘು ವೈನ್ ಸ್ಟೋರ್ ಕೂಡ ಒಂದು ಪಾತ್ರ ಮಾಡುತ್ತಿದ್ದಾರೆ. ಈ ಮೊದಲು ರಾತ್ರಿ 8.30ಕ್ಕೆ ‘ಅಂತರಪಟ’ ಪ್ರಸಾರ ಆಗುತ್ತಿತ್ತು. ಅದರ ಪ್ರಸಾರ ಸಮಯ 10 ಗಂಟೆಗೆ ಮುಂದಕ್ಕೆ ಹೋಗಲಿದೆ.

ಕರಿಮಣಿ

‘ರಾಮಾಚಾರಿ’ ಧಾರಾವಾಹಿ ಸದ್ಯ ರಾತ್ರಿ 9 ಗಂಟೆಗೆ ಪ್ರಸಾರ ಕಾಣುತ್ತಿದೆ. ಅದೇ ಸಮಯದಲ್ಲಿ ಧಾರಾವಾಹಿ ಮುಂದುವರಿಯಲಿದೆ. ‘ಕರಿಮಣಿ’ ಹೆಸರಿನ ಧಾರಾವಾಹಿ ಕೂಡ ಪ್ರಸಾರ ಆರಂಭಿಸಲಿದೆ. ಈ ಧಾರಾವಾಹಿ ರಾತ್ರಿ 9:30ಕ್ಕೆ ಪ್ರಸಾರ ಕಾಣಲಿದೆ.  

ಇದನ್ನೂ ಓದಿ: ಬಿಗ್ ಬಾಸ್ ಮನೆಗೆ ಎಲಿಮಿನೇಟ್ ಆದ ಸ್ಪರ್ಧಿಗಳ ರೀ ಎಂಟ್ರಿ; ನಮ್ರತಾಗೆ ಕೈಮುಗಿದ ಸ್ನೇಹಿತ್

‘ನನ್ನಮ್ಮ ಸೂಪರ್ ಸ್ಟಾರ್ 3’

‘ನಮ್ಮಮ್ಮ ಸೂಪರ್ ಸ್ಟಾರ್’ ಈ ಮೊದಲು ಎರಡು ಸೀಸನ್ ಪ್ರಸಾರ ಕಂಡು ಯಶಸ್ವಿ ಆಗಿದೆ. ಅಮ್ಮ-ಮಕ್ಕಳ ರಿಯಾಲಿಟಿ ಶೋ ಇದು. ಈಗ ಮೂರನೇ ಸೀಸನ್ ಬರುತ್ತಿದೆ. ಸೃಜನ್ ಲೋಕೇಶ್, ಅನು ಪ್ರಭಾಕರ್, ತಾರಾ ಇದರ ಜಡ್ಜ್ ಸ್ಥಾನದಲ್ಲಿದ್ದಾರೆ. ಫೆಬ್ರವರಿ 3ರಿಂದ ಶನಿವಾರ ಹಾಗೂ ಭಾನುವಾರ ರಾತ್ರಿ 7.30ಕ್ಕೆ ಈ ರಿಯಾಲಿಟಿ ಶೋ ಪ್ರಸಾರ ಕಾಣಲಿದೆ.

Published On - 11:44 am, Sat, 20 January 24

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್