AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೃಜನ್ ಲೋಕೇಶ್​ ಡ್ಯಾನ್ಸ್​ ನೋಡಿ ಹೊಟ್ಟೆ ಹುಣ್ಣಾಗುವಂತೆ ನಕ್ಕ ಫ್ಯಾನ್ಸ್​; ಈ ವಿಚಿತ್ರ ನೃತ್ಯದ ಹೆಸರೇನು?

ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಜಾ ರಾಣಿ’ ರಿಯಾಲಿಟಿ ಶೋ ಇತ್ತೀಚೆಗೆ ಪೂರ್ಣಗೊಂಡಿತ್ತು. ಇದಾದ ಬೆನ್ನಲ್ಲೇ ಕಲರ್ಸ್​ ಕನ್ನಡ ವಾಹಿನಿ ಹೊಸ ರಿಯಾಲಿಟಿ ಶೋ ಒಂದಿಗೆ ಬಂದಿದೆ.

ಸೃಜನ್ ಲೋಕೇಶ್​ ಡ್ಯಾನ್ಸ್​ ನೋಡಿ ಹೊಟ್ಟೆ ಹುಣ್ಣಾಗುವಂತೆ ನಕ್ಕ ಫ್ಯಾನ್ಸ್​; ಈ ವಿಚಿತ್ರ ನೃತ್ಯದ ಹೆಸರೇನು?
ಸೃಜನ್​ ಲೋಕೇಶ್​
TV9 Web
| Edited By: |

Updated on: Dec 12, 2021 | 7:00 AM

Share

ಸೃಜನ್​ ಲೋಕೇಶ್​ ಅವರು ಇದ್ದಲ್ಲಿ ನಗು ಇರುತ್ತದೆ. ಅವರು ಯಾವುದೇ ಕಾರ್ಯಕ್ರಮದ ಜಡ್ಜ್​ ಆಗಲಿ. ಎಲ್ಲರನ್ನೂ ನಗಿಸುವ ಕೆಲಸವನ್ನು ಮಾಡುತ್ತಾರೆ. ‘ಮಜಾ ಟಾಕೀಸ್​’ ಮೂಲಕ ಸಾಕಷ್ಟು ಮನರಂಜನೆಯನ್ನು ಅವರು ನೀಡಿದ್ದಾರೆ. ಈಗ ಸೃಜನ್​ ಬೇರೆ ಬೇರೆ ಕಿರುತೆರೆ ಕಾರ್ಯಕ್ರಮಗಳಿಗೆ ಜಡ್ಜ್​ ಆಗಿ ಬರುತ್ತಿದ್ದಾರೆ. ಈ ಬಾರಿ ಅವರು ‘ನನ್ನಮ್ಮ ಸೂಪರ್ ಸ್ಟಾರ್​’ ಕಾರ್ಯಕ್ರಮಕ್ಕೆ ಬಂದಿದ್ದಾರೆ. ಇಲ್ಲಿಯೂ ಅವರು ನಗುವಿನ ಹೊಳೆ ಹರಿಸುವುದನ್ನು ಮುಂದುವರಿಸಿದ್ದಾರೆ. ಈ ಬಾರಿ ಅವರು ವಿಚಿತ್ರ ಡ್ಯಾನ್ಸ್​ ಒಂದನ್ನು ಮಾಡಿದ್ದಾರೆ. ಇದನ್ನು ನೋಡಿ ಅಭಿಮಾನಿಗಳು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಜಾ ರಾಣಿ’ ರಿಯಾಲಿಟಿ ಶೋ ಇತ್ತೀಚೆಗೆ ಪೂರ್ಣಗೊಂಡಿತ್ತು. ಇದಾದ ಬೆನ್ನಲ್ಲೇ ಕಲರ್ಸ್​ ಕನ್ನಡ ವಾಹಿನಿ ಹೊಸ ರಿಯಾಲಿಟಿ ಶೋನೊಂದಿಗೆ ಬಂದಿದೆ. ಅದುವೇ ‘ನನ್ನಮ್ಮ ಸೂಪರ್ ಸ್ಟಾರ್’. ನಟಿ ತಾರಾ ಅನುರಾಧ, ಸೃಜನ್ ಲೋಕೇಶ್‌ ಮತ್ತು ಅನು ಪ್ರಭಾಕರ್ ತೀರ್ಪುಗಾರರಾಗಿ ಕಾಣಿಸಿಕೊಂಡಿದ್ದಾರೆ. ನವೆಂಬರ್ 27ರಂದು ಈ ಶೋ ಆರಂಭವಾಗಿದೆ. ಸೃಜನ್​ ಲೋಕೇಶ್​ ಅವರು ಇಲ್ಲಿಯೂ ನಗೆ ಚಟಾಕಿ ಹಾರಿಸುತ್ತಿದ್ದಾರೆ.

ಅನುಪಮಾ ಗೌಡ ಅವರು ಈ ಶೋ ನಡೆಸಿಕೊಡುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ತಾರಾ ಹಾಗೂ ಅನು ಪ್ರಭಾಕರ್​ ಅವರು ಡ್ಯಾನ್ಸ್​ ಮಾಡಿದ್ದಾರೆ. ವೇದಿಕೆಯ ಮೇಲೆ ಅವರ ಡ್ಯಾನ್ಸ್​ ನೋಡಿ ಎಲ್ಲರೂ ಖುಷಿಪಟ್ಟರು. ಇದಾದ ಬೆನ್ನಲ್ಲೇ ಸೃಜನ್​ ಲೋಕೇಶ್​ ಅವರ ಬಳಿ ಡ್ಯಾನ್ಸ್​ ಮಾಡೋಕೆ ಹೇಳಲಾಯಿತು. ಅವರು ಕುಳಿತಲ್ಲಿಯೇ ಡ್ಯಾನ್ಸ್​ ಮಾಡುವುದಾಗಿ ಹೇಳಿದರು. ಅಷ್ಟೇ ಅಲ್ಲ ಚಿತ್ರವಿಚಿತ್ರವಾಗಿ ಅವರು ಸ್ಟೆಪ್​ ಹಾಕಿದರು. ಇದನ್ನು ನೋಡಿ ಅಭಿಮಾನಿಗಳು ನಕ್ಕಿದ್ದಾರೆ.

ಈ ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇದಕ್ಕೆ ಹಲವರು ನಗುವ ಎಮೋಜಿ ಹಾಕಿದ್ದಾರೆ. ಈ ಕಾರ್ಯಕ್ರಮ ಶನಿವಾರ ಮತ್ತು ಭಾನುವಾರ ರಾತ್ರಿ 7.30ಕ್ಕೆ ಪ್ರಸಾರವಾಗಲಿದೆ. ಸ್ಪರ್ಧಿಗಳಾಗಿ ಕಿರುತೆರೆ ನಟಿಯರು ಮತ್ತು ಅವರ ಮಕ್ಕಳು ಕಾಣಿಸಿಕೊಳ್ಳುತ್ತಿದ್ದಾರೆ. ಮಾಸ್ಟರ್ ಆನಂದ್ ಪುತ್ರಿಯ ತುಂಟ ಮಾತುಗಳು ಈಗಾಗಲೇ ಹಲವರ ಗಮನ ಸೆಳೆದಿದೆ.

ಇದನ್ನೂ ಓದಿ: ‘ಸೃಜನ್ ಲೋಕೇಶ್​​ ಹೆದರುತ್ತಾರೆ, ಅದಕ್ಕೆ ಹೆಂಡತಿ ಎದುರು ಜಾಸ್ತಿ ಮಾತನಾಡಲ್ಲ’; ಅಚ್ಚರಿ ವಿಚಾರ ಬಿಚ್ಚಿಟ್ಟ ಅನುಪಮಾ ಗೌಡ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ