AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೃಜನ್ ಲೋಕೇಶ್​ ಡ್ಯಾನ್ಸ್​ ನೋಡಿ ಹೊಟ್ಟೆ ಹುಣ್ಣಾಗುವಂತೆ ನಕ್ಕ ಫ್ಯಾನ್ಸ್​; ಈ ವಿಚಿತ್ರ ನೃತ್ಯದ ಹೆಸರೇನು?

ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಜಾ ರಾಣಿ’ ರಿಯಾಲಿಟಿ ಶೋ ಇತ್ತೀಚೆಗೆ ಪೂರ್ಣಗೊಂಡಿತ್ತು. ಇದಾದ ಬೆನ್ನಲ್ಲೇ ಕಲರ್ಸ್​ ಕನ್ನಡ ವಾಹಿನಿ ಹೊಸ ರಿಯಾಲಿಟಿ ಶೋ ಒಂದಿಗೆ ಬಂದಿದೆ.

ಸೃಜನ್ ಲೋಕೇಶ್​ ಡ್ಯಾನ್ಸ್​ ನೋಡಿ ಹೊಟ್ಟೆ ಹುಣ್ಣಾಗುವಂತೆ ನಕ್ಕ ಫ್ಯಾನ್ಸ್​; ಈ ವಿಚಿತ್ರ ನೃತ್ಯದ ಹೆಸರೇನು?
ಸೃಜನ್​ ಲೋಕೇಶ್​
TV9 Web
| Edited By: |

Updated on: Dec 12, 2021 | 7:00 AM

Share

ಸೃಜನ್​ ಲೋಕೇಶ್​ ಅವರು ಇದ್ದಲ್ಲಿ ನಗು ಇರುತ್ತದೆ. ಅವರು ಯಾವುದೇ ಕಾರ್ಯಕ್ರಮದ ಜಡ್ಜ್​ ಆಗಲಿ. ಎಲ್ಲರನ್ನೂ ನಗಿಸುವ ಕೆಲಸವನ್ನು ಮಾಡುತ್ತಾರೆ. ‘ಮಜಾ ಟಾಕೀಸ್​’ ಮೂಲಕ ಸಾಕಷ್ಟು ಮನರಂಜನೆಯನ್ನು ಅವರು ನೀಡಿದ್ದಾರೆ. ಈಗ ಸೃಜನ್​ ಬೇರೆ ಬೇರೆ ಕಿರುತೆರೆ ಕಾರ್ಯಕ್ರಮಗಳಿಗೆ ಜಡ್ಜ್​ ಆಗಿ ಬರುತ್ತಿದ್ದಾರೆ. ಈ ಬಾರಿ ಅವರು ‘ನನ್ನಮ್ಮ ಸೂಪರ್ ಸ್ಟಾರ್​’ ಕಾರ್ಯಕ್ರಮಕ್ಕೆ ಬಂದಿದ್ದಾರೆ. ಇಲ್ಲಿಯೂ ಅವರು ನಗುವಿನ ಹೊಳೆ ಹರಿಸುವುದನ್ನು ಮುಂದುವರಿಸಿದ್ದಾರೆ. ಈ ಬಾರಿ ಅವರು ವಿಚಿತ್ರ ಡ್ಯಾನ್ಸ್​ ಒಂದನ್ನು ಮಾಡಿದ್ದಾರೆ. ಇದನ್ನು ನೋಡಿ ಅಭಿಮಾನಿಗಳು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಜಾ ರಾಣಿ’ ರಿಯಾಲಿಟಿ ಶೋ ಇತ್ತೀಚೆಗೆ ಪೂರ್ಣಗೊಂಡಿತ್ತು. ಇದಾದ ಬೆನ್ನಲ್ಲೇ ಕಲರ್ಸ್​ ಕನ್ನಡ ವಾಹಿನಿ ಹೊಸ ರಿಯಾಲಿಟಿ ಶೋನೊಂದಿಗೆ ಬಂದಿದೆ. ಅದುವೇ ‘ನನ್ನಮ್ಮ ಸೂಪರ್ ಸ್ಟಾರ್’. ನಟಿ ತಾರಾ ಅನುರಾಧ, ಸೃಜನ್ ಲೋಕೇಶ್‌ ಮತ್ತು ಅನು ಪ್ರಭಾಕರ್ ತೀರ್ಪುಗಾರರಾಗಿ ಕಾಣಿಸಿಕೊಂಡಿದ್ದಾರೆ. ನವೆಂಬರ್ 27ರಂದು ಈ ಶೋ ಆರಂಭವಾಗಿದೆ. ಸೃಜನ್​ ಲೋಕೇಶ್​ ಅವರು ಇಲ್ಲಿಯೂ ನಗೆ ಚಟಾಕಿ ಹಾರಿಸುತ್ತಿದ್ದಾರೆ.

ಅನುಪಮಾ ಗೌಡ ಅವರು ಈ ಶೋ ನಡೆಸಿಕೊಡುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ತಾರಾ ಹಾಗೂ ಅನು ಪ್ರಭಾಕರ್​ ಅವರು ಡ್ಯಾನ್ಸ್​ ಮಾಡಿದ್ದಾರೆ. ವೇದಿಕೆಯ ಮೇಲೆ ಅವರ ಡ್ಯಾನ್ಸ್​ ನೋಡಿ ಎಲ್ಲರೂ ಖುಷಿಪಟ್ಟರು. ಇದಾದ ಬೆನ್ನಲ್ಲೇ ಸೃಜನ್​ ಲೋಕೇಶ್​ ಅವರ ಬಳಿ ಡ್ಯಾನ್ಸ್​ ಮಾಡೋಕೆ ಹೇಳಲಾಯಿತು. ಅವರು ಕುಳಿತಲ್ಲಿಯೇ ಡ್ಯಾನ್ಸ್​ ಮಾಡುವುದಾಗಿ ಹೇಳಿದರು. ಅಷ್ಟೇ ಅಲ್ಲ ಚಿತ್ರವಿಚಿತ್ರವಾಗಿ ಅವರು ಸ್ಟೆಪ್​ ಹಾಕಿದರು. ಇದನ್ನು ನೋಡಿ ಅಭಿಮಾನಿಗಳು ನಕ್ಕಿದ್ದಾರೆ.

ಈ ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇದಕ್ಕೆ ಹಲವರು ನಗುವ ಎಮೋಜಿ ಹಾಕಿದ್ದಾರೆ. ಈ ಕಾರ್ಯಕ್ರಮ ಶನಿವಾರ ಮತ್ತು ಭಾನುವಾರ ರಾತ್ರಿ 7.30ಕ್ಕೆ ಪ್ರಸಾರವಾಗಲಿದೆ. ಸ್ಪರ್ಧಿಗಳಾಗಿ ಕಿರುತೆರೆ ನಟಿಯರು ಮತ್ತು ಅವರ ಮಕ್ಕಳು ಕಾಣಿಸಿಕೊಳ್ಳುತ್ತಿದ್ದಾರೆ. ಮಾಸ್ಟರ್ ಆನಂದ್ ಪುತ್ರಿಯ ತುಂಟ ಮಾತುಗಳು ಈಗಾಗಲೇ ಹಲವರ ಗಮನ ಸೆಳೆದಿದೆ.

ಇದನ್ನೂ ಓದಿ: ‘ಸೃಜನ್ ಲೋಕೇಶ್​​ ಹೆದರುತ್ತಾರೆ, ಅದಕ್ಕೆ ಹೆಂಡತಿ ಎದುರು ಜಾಸ್ತಿ ಮಾತನಾಡಲ್ಲ’; ಅಚ್ಚರಿ ವಿಚಾರ ಬಿಚ್ಚಿಟ್ಟ ಅನುಪಮಾ ಗೌಡ

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ