AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ಮನೆಗೆ ಬಂತು ಖಾಲಿ ಕಾರು, ಹೊರ ಹೋಗಿದ್ದು ಯಾರು?

ಬಿಗ್​ಬಾಸ್ ಕನ್ನಡ ಸೀಸನ್ 11ರ ವೀಕೆಂಡ್ ಪಂಚಾಯಿತಿಗೆ ಈ ವಾರ ಸುದೀಪ್ ಬಂದಿಲ್ಲ. ಹಾಗಾಗಿ ಶನಿವಾರದ ಎಪಿಸೋಡ್​ಗೆ ನಿರ್ದೇಶಕ ಯೋಗರಾಜ್ ಭಟ್ ಮನೆಗೆ ಬಂದಿದ್ದರು. ಭಾನುವಾರದ ಎಪಿಸೋಡ್​ಗೆ ಹೊಸ ಅತಿಥಿ ಬಂದಿದ್ದು ತಮ್ಮೊಟ್ಟಿಗೆ ಕಾರುಗಳನ್ನು ಸಹ ಕರೆತಂದಿದ್ದಾರೆ.

ಬಿಗ್​ಬಾಸ್ ಮನೆಗೆ ಬಂತು ಖಾಲಿ ಕಾರು, ಹೊರ ಹೋಗಿದ್ದು ಯಾರು?
ಮಂಜುನಾಥ ಸಿ.
|

Updated on: Oct 27, 2024 | 8:15 AM

Share

ಬಿಗ್​ಬಾಸ್ ಕನ್ನಡ ಸೀಸನ್ 11ರ ವೀಕೆಂಡ್ ಪಂಚಾಯಿತಿಗೆ ಈ ಬಾರಿ ಸುದೀಪ್ ಬಂದಿಲ್ಲ. ಕಳೆದ ಶನಿವಾರ ಸುದೀಪ್ ಅವರ ತಾಯಿ ಸರೋಜಮ್ಮ ನಿಧನರಾದ ಕಾರಣ ಸುದೀಪ್ ಆ ನಂತರದ ತಮ್ಮ ಎಲ್ಲ ಚಿತ್ರೀಕರಣ, ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ. ಈ ವೀಕೆಂಡ್​ನ ವಾರದ ಪಂಚಾಯಿತಿಗೆ ಸಹ ಸುದೀಪ್ ಬಂದಿಲ್ಲ. ಹಾಗಾಗಿ ಬಿಗ್​ಬಾಸ್ ಆಯೋಜಕರು ಇಬ್ಬರು ಅತಿಥಿಗಳನ್ನು ಮನೆಯ ಒಳಕ್ಕೆ ಕಳಿಸಿದ್ದಾರೆ. ಶನಿವಾರದ ಎಪಿಸೋಡ್​ಗೆ ನಿರ್ದೇಶಕ ಯೋಗರಾಜ್ ಭಟ್ ಅವರು ಬಂದಿದ್ದರು. ಮನೆಯ ಸದಸ್ಯರ ಕೈಲಿ ಕೆಲವು ತಮಾಷೆಯ ಟಾಸ್ಕ್​ಗಳನ್ನು ಮಾಡಿದ್ದರು. ಕೆಲವರಿಗೆ ಬುದ್ಧಿವಾದ ಹೇಳಿದ್ದರು. ಭಾನುವಾರದ ಎಪಿಸೋಡ್​ಗೆ ಸೃಜನ್ ಬಂದಿದ್ದಾರೆ.

ಈ ಹಿಂದೆ ಸೃಜನ್ ಲೋಕೇಶ್ ಬಿಗ್​ಬಾಸ್​ ಸ್ಪರ್ಧಿಯಾಗಿ ಬಂದಿದ್ದರು. ಈ ಬಾರಿ ಅತಿಥಿಯಾಗಿ ಬಂದಿದ್ದಾರೆ. ಮನೆಗೆ ಬಂದಿರುವ ಸೃಜನ್ ಲೋಕೇಶ್ ಖಾಲಿ ಕೈನಲ್ಲಿ ಬಂದಿಲ್ಲ ತಮ್ಮೊಟ್ಟಿಗೆ ಎರಡು ಟಾಟಾ ಕರ್ವ್ ಕಾರುಗಳನ್ನು ಸಹ ತಂದಿದ್ದರು. ಮನೆಗೆ ಬಂದಿದ್ದ ಖಾಲಿ ಕಾರುಗಳು ಎಲಿಮಿನೇಟ್ ಆದ ಒಬ್ಬ ಸ್ಪರ್ಧಿಯನ್ನು ಮನೆಯಿಂದ ಹೊರಗೆ ಕರೆದುಕೊಂಡು ಹೋಗಿವೆ. ಆದರೆ ಆ ಸ್ಪರ್ಧಿ ಯಾರು?

ಬಿಗ್​ಬಾಸ್ ಮನೆಗೆ ಬಂದ ಸೃಜನ್ ಮೊದಲಿಗೆ ಸ್ಪರ್ಧಿಗಳಿಗೆ ವಿವಿಧ ಟಾಸ್ಕ್​ಗಳನ್ನು ನೀಡಿದ್ದಾರೆ. ಕೆಲವು ತಮಾಷೆಯ ಆಟಗಳನ್ನು ಆಡಿಸಿದ್ದಾರೆ. ಆ ನಂತರ ಮನೆಯಿಂದ ಯಾರು ಹೊರಗೆ ಹೋಗಬೇಕು ಮತ್ತು ಏಕೆ? ಕಾರಣ ನೀಡಿ ಎಂದು ಸ್ಪರ್ಧಿಗಳಲ್ಲಿ ಹೇಳಿದ್ದಾರೆ ಅದರಂತೆ ಐಶ್ವರ್ಯಾ ಸೇರಿದಂತೆ ಇನ್ನು ಕೆಲವರು ವಿಕ್ರಂ ಹೆಸರು ಹೇಳಿದ್ದಾರೆ. ಕೆಲವರು ಉಗ್ರಂ ಮಂಜು ಹೆಸರು ಹೇಳಿದ್ದಾರೆ. ಹೀಗೆ ಒಬ್ಬೊಬ್ಬರು ಒಬ್ಬರ ಹೆಸರು ಹೇಳಿದ್ದಾರೆ. ಕೊನೆಗೆ ಮತಗಳ ಆಧಾರದಲ್ಲಿ ಒಬ್ಬ ಸ್ಪರ್ಧಿಯನ್ನು ಇಂದು ಬಿಗ್​ಬಾಸ್ ಮನೆಯಿಂದ ಹೊರಗೆ ಹಾಕಲಾಗಿದೆ.

ಇದನ್ನೂ ಓದಿ:ಬಿಗ್​ಬಾಸ್ ಮನೆಗೆ ಕಾಲಿಟ್ಟ ಯೋಗರಾಜ್ ಭಟ್, ಮನೆಯಲ್ಲಿ ನಗುವೋ ನಗು

ಬಿಗ್​ಬಾಸ್ ನಲ್ಲಿ ಕಳೆದ ವಾರ ಯಾರೂ ಸಹ ಎಲಿಮಿನೇಟ್ ಆಗಿರಲಿಲ್ಲ. ಸಾಮಾನ್ಯವಾಗಿ ಭಾನುವಾರ ಸ್ಪರ್ಧಿಯನ್ನು ಎಲಿಮಿನೇಟ್ ಮಾಡಲಾಗುತ್ತದೆ. ಆದರೆ ಸುದೀಪ್ ಅವರು ಭಾನುವಾರದ ಎಪಿಸೋಡ್​ಗೆ ಬರಲಿಲ್ಲವಾದ್ದರಿಂದ ಯಾರೂ ಸಹ ಎಲಿಮಿನೇಟ್ ಆಗಿರಲಿಲ್ಲ. ಈ ವಾರವೂ ಸಹ ಸುದೀಪ್ ಅವರು ಬರಲಿಲ್ಲವಾದ್ದರಿಂದ ಈ ವಾರವೂ ಯಾರೂ ಎಲಿಮಿನೇಟ್ ಆಗಲ್ಲ ಎಂದು ಪ್ರೇಕ್ಷಕರು ನಿರೀಕ್ಷಿಸಿದ್ದರು. ಆದರೆ ಈ ವಾರ ಎಲಿಮಿನೇಷನ್ ನಡೆದಿದೆ. ಆದರೆ ಯಾರು ಎಲಿಮಿನೇಟ್ ಆಗಿದ್ದಾರೆ ಎಂದು ತಿಳಿಯಲು ರಾತ್ರಿ ಪ್ರಸಾರವಾಗುವ ಎಪಿಸೋಡ್ ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?