AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ಮನೆಗೆ ಬಂತು ಖಾಲಿ ಕಾರು, ಹೊರ ಹೋಗಿದ್ದು ಯಾರು?

ಬಿಗ್​ಬಾಸ್ ಕನ್ನಡ ಸೀಸನ್ 11ರ ವೀಕೆಂಡ್ ಪಂಚಾಯಿತಿಗೆ ಈ ವಾರ ಸುದೀಪ್ ಬಂದಿಲ್ಲ. ಹಾಗಾಗಿ ಶನಿವಾರದ ಎಪಿಸೋಡ್​ಗೆ ನಿರ್ದೇಶಕ ಯೋಗರಾಜ್ ಭಟ್ ಮನೆಗೆ ಬಂದಿದ್ದರು. ಭಾನುವಾರದ ಎಪಿಸೋಡ್​ಗೆ ಹೊಸ ಅತಿಥಿ ಬಂದಿದ್ದು ತಮ್ಮೊಟ್ಟಿಗೆ ಕಾರುಗಳನ್ನು ಸಹ ಕರೆತಂದಿದ್ದಾರೆ.

ಬಿಗ್​ಬಾಸ್ ಮನೆಗೆ ಬಂತು ಖಾಲಿ ಕಾರು, ಹೊರ ಹೋಗಿದ್ದು ಯಾರು?
Follow us
ಮಂಜುನಾಥ ಸಿ.
|

Updated on: Oct 27, 2024 | 8:15 AM

ಬಿಗ್​ಬಾಸ್ ಕನ್ನಡ ಸೀಸನ್ 11ರ ವೀಕೆಂಡ್ ಪಂಚಾಯಿತಿಗೆ ಈ ಬಾರಿ ಸುದೀಪ್ ಬಂದಿಲ್ಲ. ಕಳೆದ ಶನಿವಾರ ಸುದೀಪ್ ಅವರ ತಾಯಿ ಸರೋಜಮ್ಮ ನಿಧನರಾದ ಕಾರಣ ಸುದೀಪ್ ಆ ನಂತರದ ತಮ್ಮ ಎಲ್ಲ ಚಿತ್ರೀಕರಣ, ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ. ಈ ವೀಕೆಂಡ್​ನ ವಾರದ ಪಂಚಾಯಿತಿಗೆ ಸಹ ಸುದೀಪ್ ಬಂದಿಲ್ಲ. ಹಾಗಾಗಿ ಬಿಗ್​ಬಾಸ್ ಆಯೋಜಕರು ಇಬ್ಬರು ಅತಿಥಿಗಳನ್ನು ಮನೆಯ ಒಳಕ್ಕೆ ಕಳಿಸಿದ್ದಾರೆ. ಶನಿವಾರದ ಎಪಿಸೋಡ್​ಗೆ ನಿರ್ದೇಶಕ ಯೋಗರಾಜ್ ಭಟ್ ಅವರು ಬಂದಿದ್ದರು. ಮನೆಯ ಸದಸ್ಯರ ಕೈಲಿ ಕೆಲವು ತಮಾಷೆಯ ಟಾಸ್ಕ್​ಗಳನ್ನು ಮಾಡಿದ್ದರು. ಕೆಲವರಿಗೆ ಬುದ್ಧಿವಾದ ಹೇಳಿದ್ದರು. ಭಾನುವಾರದ ಎಪಿಸೋಡ್​ಗೆ ಸೃಜನ್ ಬಂದಿದ್ದಾರೆ.

ಈ ಹಿಂದೆ ಸೃಜನ್ ಲೋಕೇಶ್ ಬಿಗ್​ಬಾಸ್​ ಸ್ಪರ್ಧಿಯಾಗಿ ಬಂದಿದ್ದರು. ಈ ಬಾರಿ ಅತಿಥಿಯಾಗಿ ಬಂದಿದ್ದಾರೆ. ಮನೆಗೆ ಬಂದಿರುವ ಸೃಜನ್ ಲೋಕೇಶ್ ಖಾಲಿ ಕೈನಲ್ಲಿ ಬಂದಿಲ್ಲ ತಮ್ಮೊಟ್ಟಿಗೆ ಎರಡು ಟಾಟಾ ಕರ್ವ್ ಕಾರುಗಳನ್ನು ಸಹ ತಂದಿದ್ದರು. ಮನೆಗೆ ಬಂದಿದ್ದ ಖಾಲಿ ಕಾರುಗಳು ಎಲಿಮಿನೇಟ್ ಆದ ಒಬ್ಬ ಸ್ಪರ್ಧಿಯನ್ನು ಮನೆಯಿಂದ ಹೊರಗೆ ಕರೆದುಕೊಂಡು ಹೋಗಿವೆ. ಆದರೆ ಆ ಸ್ಪರ್ಧಿ ಯಾರು?

ಬಿಗ್​ಬಾಸ್ ಮನೆಗೆ ಬಂದ ಸೃಜನ್ ಮೊದಲಿಗೆ ಸ್ಪರ್ಧಿಗಳಿಗೆ ವಿವಿಧ ಟಾಸ್ಕ್​ಗಳನ್ನು ನೀಡಿದ್ದಾರೆ. ಕೆಲವು ತಮಾಷೆಯ ಆಟಗಳನ್ನು ಆಡಿಸಿದ್ದಾರೆ. ಆ ನಂತರ ಮನೆಯಿಂದ ಯಾರು ಹೊರಗೆ ಹೋಗಬೇಕು ಮತ್ತು ಏಕೆ? ಕಾರಣ ನೀಡಿ ಎಂದು ಸ್ಪರ್ಧಿಗಳಲ್ಲಿ ಹೇಳಿದ್ದಾರೆ ಅದರಂತೆ ಐಶ್ವರ್ಯಾ ಸೇರಿದಂತೆ ಇನ್ನು ಕೆಲವರು ವಿಕ್ರಂ ಹೆಸರು ಹೇಳಿದ್ದಾರೆ. ಕೆಲವರು ಉಗ್ರಂ ಮಂಜು ಹೆಸರು ಹೇಳಿದ್ದಾರೆ. ಹೀಗೆ ಒಬ್ಬೊಬ್ಬರು ಒಬ್ಬರ ಹೆಸರು ಹೇಳಿದ್ದಾರೆ. ಕೊನೆಗೆ ಮತಗಳ ಆಧಾರದಲ್ಲಿ ಒಬ್ಬ ಸ್ಪರ್ಧಿಯನ್ನು ಇಂದು ಬಿಗ್​ಬಾಸ್ ಮನೆಯಿಂದ ಹೊರಗೆ ಹಾಕಲಾಗಿದೆ.

ಇದನ್ನೂ ಓದಿ:ಬಿಗ್​ಬಾಸ್ ಮನೆಗೆ ಕಾಲಿಟ್ಟ ಯೋಗರಾಜ್ ಭಟ್, ಮನೆಯಲ್ಲಿ ನಗುವೋ ನಗು

ಬಿಗ್​ಬಾಸ್ ನಲ್ಲಿ ಕಳೆದ ವಾರ ಯಾರೂ ಸಹ ಎಲಿಮಿನೇಟ್ ಆಗಿರಲಿಲ್ಲ. ಸಾಮಾನ್ಯವಾಗಿ ಭಾನುವಾರ ಸ್ಪರ್ಧಿಯನ್ನು ಎಲಿಮಿನೇಟ್ ಮಾಡಲಾಗುತ್ತದೆ. ಆದರೆ ಸುದೀಪ್ ಅವರು ಭಾನುವಾರದ ಎಪಿಸೋಡ್​ಗೆ ಬರಲಿಲ್ಲವಾದ್ದರಿಂದ ಯಾರೂ ಸಹ ಎಲಿಮಿನೇಟ್ ಆಗಿರಲಿಲ್ಲ. ಈ ವಾರವೂ ಸಹ ಸುದೀಪ್ ಅವರು ಬರಲಿಲ್ಲವಾದ್ದರಿಂದ ಈ ವಾರವೂ ಯಾರೂ ಎಲಿಮಿನೇಟ್ ಆಗಲ್ಲ ಎಂದು ಪ್ರೇಕ್ಷಕರು ನಿರೀಕ್ಷಿಸಿದ್ದರು. ಆದರೆ ಈ ವಾರ ಎಲಿಮಿನೇಷನ್ ನಡೆದಿದೆ. ಆದರೆ ಯಾರು ಎಲಿಮಿನೇಟ್ ಆಗಿದ್ದಾರೆ ಎಂದು ತಿಳಿಯಲು ರಾತ್ರಿ ಪ್ರಸಾರವಾಗುವ ಎಪಿಸೋಡ್ ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ