AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ಮನೆಗೆ ಬಂತು ಖಾಲಿ ಕಾರು, ಹೊರ ಹೋಗಿದ್ದು ಯಾರು?

ಬಿಗ್​ಬಾಸ್ ಕನ್ನಡ ಸೀಸನ್ 11ರ ವೀಕೆಂಡ್ ಪಂಚಾಯಿತಿಗೆ ಈ ವಾರ ಸುದೀಪ್ ಬಂದಿಲ್ಲ. ಹಾಗಾಗಿ ಶನಿವಾರದ ಎಪಿಸೋಡ್​ಗೆ ನಿರ್ದೇಶಕ ಯೋಗರಾಜ್ ಭಟ್ ಮನೆಗೆ ಬಂದಿದ್ದರು. ಭಾನುವಾರದ ಎಪಿಸೋಡ್​ಗೆ ಹೊಸ ಅತಿಥಿ ಬಂದಿದ್ದು ತಮ್ಮೊಟ್ಟಿಗೆ ಕಾರುಗಳನ್ನು ಸಹ ಕರೆತಂದಿದ್ದಾರೆ.

ಬಿಗ್​ಬಾಸ್ ಮನೆಗೆ ಬಂತು ಖಾಲಿ ಕಾರು, ಹೊರ ಹೋಗಿದ್ದು ಯಾರು?
ಮಂಜುನಾಥ ಸಿ.
|

Updated on: Oct 27, 2024 | 8:15 AM

Share

ಬಿಗ್​ಬಾಸ್ ಕನ್ನಡ ಸೀಸನ್ 11ರ ವೀಕೆಂಡ್ ಪಂಚಾಯಿತಿಗೆ ಈ ಬಾರಿ ಸುದೀಪ್ ಬಂದಿಲ್ಲ. ಕಳೆದ ಶನಿವಾರ ಸುದೀಪ್ ಅವರ ತಾಯಿ ಸರೋಜಮ್ಮ ನಿಧನರಾದ ಕಾರಣ ಸುದೀಪ್ ಆ ನಂತರದ ತಮ್ಮ ಎಲ್ಲ ಚಿತ್ರೀಕರಣ, ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ. ಈ ವೀಕೆಂಡ್​ನ ವಾರದ ಪಂಚಾಯಿತಿಗೆ ಸಹ ಸುದೀಪ್ ಬಂದಿಲ್ಲ. ಹಾಗಾಗಿ ಬಿಗ್​ಬಾಸ್ ಆಯೋಜಕರು ಇಬ್ಬರು ಅತಿಥಿಗಳನ್ನು ಮನೆಯ ಒಳಕ್ಕೆ ಕಳಿಸಿದ್ದಾರೆ. ಶನಿವಾರದ ಎಪಿಸೋಡ್​ಗೆ ನಿರ್ದೇಶಕ ಯೋಗರಾಜ್ ಭಟ್ ಅವರು ಬಂದಿದ್ದರು. ಮನೆಯ ಸದಸ್ಯರ ಕೈಲಿ ಕೆಲವು ತಮಾಷೆಯ ಟಾಸ್ಕ್​ಗಳನ್ನು ಮಾಡಿದ್ದರು. ಕೆಲವರಿಗೆ ಬುದ್ಧಿವಾದ ಹೇಳಿದ್ದರು. ಭಾನುವಾರದ ಎಪಿಸೋಡ್​ಗೆ ಸೃಜನ್ ಬಂದಿದ್ದಾರೆ.

ಈ ಹಿಂದೆ ಸೃಜನ್ ಲೋಕೇಶ್ ಬಿಗ್​ಬಾಸ್​ ಸ್ಪರ್ಧಿಯಾಗಿ ಬಂದಿದ್ದರು. ಈ ಬಾರಿ ಅತಿಥಿಯಾಗಿ ಬಂದಿದ್ದಾರೆ. ಮನೆಗೆ ಬಂದಿರುವ ಸೃಜನ್ ಲೋಕೇಶ್ ಖಾಲಿ ಕೈನಲ್ಲಿ ಬಂದಿಲ್ಲ ತಮ್ಮೊಟ್ಟಿಗೆ ಎರಡು ಟಾಟಾ ಕರ್ವ್ ಕಾರುಗಳನ್ನು ಸಹ ತಂದಿದ್ದರು. ಮನೆಗೆ ಬಂದಿದ್ದ ಖಾಲಿ ಕಾರುಗಳು ಎಲಿಮಿನೇಟ್ ಆದ ಒಬ್ಬ ಸ್ಪರ್ಧಿಯನ್ನು ಮನೆಯಿಂದ ಹೊರಗೆ ಕರೆದುಕೊಂಡು ಹೋಗಿವೆ. ಆದರೆ ಆ ಸ್ಪರ್ಧಿ ಯಾರು?

ಬಿಗ್​ಬಾಸ್ ಮನೆಗೆ ಬಂದ ಸೃಜನ್ ಮೊದಲಿಗೆ ಸ್ಪರ್ಧಿಗಳಿಗೆ ವಿವಿಧ ಟಾಸ್ಕ್​ಗಳನ್ನು ನೀಡಿದ್ದಾರೆ. ಕೆಲವು ತಮಾಷೆಯ ಆಟಗಳನ್ನು ಆಡಿಸಿದ್ದಾರೆ. ಆ ನಂತರ ಮನೆಯಿಂದ ಯಾರು ಹೊರಗೆ ಹೋಗಬೇಕು ಮತ್ತು ಏಕೆ? ಕಾರಣ ನೀಡಿ ಎಂದು ಸ್ಪರ್ಧಿಗಳಲ್ಲಿ ಹೇಳಿದ್ದಾರೆ ಅದರಂತೆ ಐಶ್ವರ್ಯಾ ಸೇರಿದಂತೆ ಇನ್ನು ಕೆಲವರು ವಿಕ್ರಂ ಹೆಸರು ಹೇಳಿದ್ದಾರೆ. ಕೆಲವರು ಉಗ್ರಂ ಮಂಜು ಹೆಸರು ಹೇಳಿದ್ದಾರೆ. ಹೀಗೆ ಒಬ್ಬೊಬ್ಬರು ಒಬ್ಬರ ಹೆಸರು ಹೇಳಿದ್ದಾರೆ. ಕೊನೆಗೆ ಮತಗಳ ಆಧಾರದಲ್ಲಿ ಒಬ್ಬ ಸ್ಪರ್ಧಿಯನ್ನು ಇಂದು ಬಿಗ್​ಬಾಸ್ ಮನೆಯಿಂದ ಹೊರಗೆ ಹಾಕಲಾಗಿದೆ.

ಇದನ್ನೂ ಓದಿ:ಬಿಗ್​ಬಾಸ್ ಮನೆಗೆ ಕಾಲಿಟ್ಟ ಯೋಗರಾಜ್ ಭಟ್, ಮನೆಯಲ್ಲಿ ನಗುವೋ ನಗು

ಬಿಗ್​ಬಾಸ್ ನಲ್ಲಿ ಕಳೆದ ವಾರ ಯಾರೂ ಸಹ ಎಲಿಮಿನೇಟ್ ಆಗಿರಲಿಲ್ಲ. ಸಾಮಾನ್ಯವಾಗಿ ಭಾನುವಾರ ಸ್ಪರ್ಧಿಯನ್ನು ಎಲಿಮಿನೇಟ್ ಮಾಡಲಾಗುತ್ತದೆ. ಆದರೆ ಸುದೀಪ್ ಅವರು ಭಾನುವಾರದ ಎಪಿಸೋಡ್​ಗೆ ಬರಲಿಲ್ಲವಾದ್ದರಿಂದ ಯಾರೂ ಸಹ ಎಲಿಮಿನೇಟ್ ಆಗಿರಲಿಲ್ಲ. ಈ ವಾರವೂ ಸಹ ಸುದೀಪ್ ಅವರು ಬರಲಿಲ್ಲವಾದ್ದರಿಂದ ಈ ವಾರವೂ ಯಾರೂ ಎಲಿಮಿನೇಟ್ ಆಗಲ್ಲ ಎಂದು ಪ್ರೇಕ್ಷಕರು ನಿರೀಕ್ಷಿಸಿದ್ದರು. ಆದರೆ ಈ ವಾರ ಎಲಿಮಿನೇಷನ್ ನಡೆದಿದೆ. ಆದರೆ ಯಾರು ಎಲಿಮಿನೇಟ್ ಆಗಿದ್ದಾರೆ ಎಂದು ತಿಳಿಯಲು ರಾತ್ರಿ ಪ್ರಸಾರವಾಗುವ ಎಪಿಸೋಡ್ ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್