AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಜಾ ಟಾಕೀಸ್’ ಫ್ಯಾನ್ಸ್​ಗೆ ಗುಡ್ ನ್ಯೂಸ್; ಮತ್ತೆ ಬರ್ತಿದೆ ಸೃಜನ್ ಲೋಕೇಶ್ ಶೋ

‘ಮಜಾ ಟಾಕೀಸ್’ 2015ರಲ್ಲಿ ಆರಂಭಿಸಲಾಯಿತು. ಇನ್ನು ಕೆಲವೇ ದಿನಗಳಲ್ಲಿ ಈ ಶೋ ಆರಂಭ ಆಗಿ 10 ವರ್ಷ ತುಂಬಲಿದೆ. ಇದೇ ಖುಷಿಯಲ್ಲಿ ಸೃಜನ್ ಲೋಕೇಶ್ ಅವರು ಹೊಸ ಸೀಸನ್ ಆರಂಭಿಸೋ ಬಗ್ಗೆ ಘೋಷಣೆ ಮಾಡಿದ್ದಾರೆ. ಇದನ್ನು ಕೇಳಿ ಫ್ಯಾನ್ಸ್ ಖುಷಿ ಹೊರಹಾಕಿದ್ದಾರೆ. ವರಲಕ್ಷ್ಮಿ ಆಗಿ ಮಿಂಚಿದ್ದ ಅಪರ್ಣಾ ಅವರು ಈ ಬಾರಿ ಇರೋದಿಲ್ಲ ಎಂಬುದು ಬೇಸರದ ಸಂಗತಿ. 

‘ಮಜಾ ಟಾಕೀಸ್’ ಫ್ಯಾನ್ಸ್​ಗೆ ಗುಡ್ ನ್ಯೂಸ್; ಮತ್ತೆ ಬರ್ತಿದೆ ಸೃಜನ್ ಲೋಕೇಶ್ ಶೋ
‘ಮಜಾ ಟಾಕೀಸ್’ ಫ್ಯಾನ್ಸ್​ಗೆ ಗುಡ್ ನ್ಯೂಸ್; ಮತ್ತೆ ಬರ್ತಿದೆ ಸೃಜನ್ ಲೋಕೇಶ್ ಶೋ
 ಶ್ರೀಲಕ್ಷ್ಮೀ ಎಚ್
| Edited By: |

Updated on:Dec 12, 2024 | 10:21 AM

Share

ಸೃಜನ್ ಲೋಕೇಶ್ ಅವರು ‘ಮಜಾ ಟಾಕೀಸ್’ ಶೋ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು. ಈ ಶೋಗೆ ದೊಡ್ಡ ಅಭಿಮಾನಿ ಬಳಗ ಇದೆ. ಕಾರಣಾಂತರಗಳಿಂದ ಇದನ್ನು ನಿಲ್ಲಿಸಿದ್ದರು ಸೃಜನ್. ಈಗ ಅವರು ಮತ್ತೆ ನಗಿಸೋಕೆ ಬರುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಹೊಸ ಪ್ರೋಮೋ ಹಂಚಿಕೊಳ್ಳಲಾಗಿದೆ. ಇದನ್ನು ಕೇಳಿ ಫ್ಯಾನ್ಸ್ ಭರ್ಜರಿ ಖುಷಿಪಟ್ಟಿದ್ದಾರೆ. ಇದರ ಆರಂಭದ ದಿನಾಂಕಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ವರಲಕ್ಷ್ಮಿ ಆಗಿ ಮಿಂಚಿದ್ದ ಅಪರ್ಣಾ ಅವರು ಈ ಬಾರಿ ಇರೋದಿಲ್ಲ ಎಂಬುದು ಬೇಸರದ ಸಂಗತಿ.

‘ಮಜಾ ಟಾಕೀಸ್’ 2015ರಲ್ಲಿ ಆರಂಭಿಸಲಾಯಿತು. ಇನ್ನು ಕೆಲವೇ ದಿನಗಳಲ್ಲಿ ಈ ಶೋ ಆರಂಭ ಆಗಿ 10 ವರ್ಷ ತುಂಬಲಿದೆ. ಇದೇ ಖುಷಿಯಲ್ಲಿ ಸೃಜನ್ ಲೋಕೇಶ್ ಅವರು ಹೊಸ ಸೀಸನ್ ಆರಂಭಿಸೋ ಬಗ್ಗೆ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ‘ಈ ಶೋಗಾಗಿ ನಾವು ಕಾಯ್ತಾ ಇದ್ವಿ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

‘ಮಜಾ ಟಾಕೀಸ್’ ಶೋ ಅಭಿಮಾನಿಗಳ ಹೃದಯದಲ್ಲಿ ವಿಶೇಷ ಸ್ಥಾನ ಪಡೆದುಕೊಂಡಿದೆ. 2015ರಲ್ಲಿ ಆರಂಭ ಆದ ಈ ಶೋ 2017ರವರೆಗೆ ಇತ್ತು. 2018ರಲ್ಲಿ ‘ಮಜಾ ಟಾಕೀಸ್ ಸೂಪರ್ ಸೀಸನ್’ ಆರಂಭ ಆಯಿತು. 2020ರಲ್ಲಿ ಮತ್ತೆ ‘ಮಜಾ ಟಾಕೀಸ್’ ಹೆಸರಲ್ಲಿ ಶೋ ಶುರುವಾಯಿತು. ಈ ವೇಳೆ ಸೃಜನ್ ಅವರು ಈ ಶೋನಿಂದ ಬ್ರೇಕ್ ಪಡೆಯುವ ನಿರ್ಧಾರ ಮಾಡಿದರು.

ವಿವಿಧ ರೀತಿಯ ರಿಯಾಲಿಟಿ ಶೋಗಳ ಜಡ್ಜ್​ ಆಗಿ ಬ್ಯುಸಿ ಆದರು ಸೃಜನ್. ‘ರಾಜಾ ರಾಣಿ’, ‘ನನ್ನಮ್ಮ ಸೂಪರ್​ಸ್ಟಾರ್’, ‘ಗಿಚ್ಚಿ ಗಿಲಿಗಿಲಿ’, ‘ಫ್ಯಾಮಿಲಿ ಗ್ಯಾಂಗ್​ಸ್ಟರ್’ ರೀತಿಯ ಶೋಗಳಲ್ಲಿ ಜಡ್ಜ್​ ಆಗಿ ಕಾರ್ಯನಿರ್ವಹಿಸಿದರು ಸೃಜನ್. ಅವರ ಗಮನ ಸಂಪೂರ್ಣವಾಗಿ ಇದರ ಮೇಲೆ ಇತ್ತು. ಈಗ ಅವರು ನಿರೂಪಣೆಗೆ ಕಂಬ್ಯಾಕ್ ಮಾಡಿದ್ದಾರೆ.

ಇದನ್ನೂ ಓದಿ: ಮಜಾ ಟಾಕೀಸ್ ನಲ್ಲಿ ಕಮೆಡಿಯನ್ ಆಗಿ ಕೆಲಸ ಮಾಡುವ ಬಗ್ಗೆ ಅಪರ್ಣಾಗೆ ಅಳುಕಿತ್ತು: ಗ್ರೀಷ್ಮಾ ಸೃಜನ್

‘ಮಜಾ ಟಾಕೀಸ್’ ಎಂದಾಗ ನೆನಪಿಗೆ ಬರೋದು ಕುರಿ ಪ್ರತಾಪ್, ಇಂದ್ರಜಿತ್ ಲಂಕೇಶ್, ರೆಮೋ, ಶ್ವೇತಾ ಚಂಗಪ್ಪ. ಅವರು ಈ ಹೊಸ ಸೀಸನ್​ನಲ್ಲಿ ಇರ್ತಾರಾ ಎನ್ನುವ ಕುತೂಹಲ ಮೂಡಿದೆ. ಈ ಮೊದಲು ಅಪರ್ಣಾ ಅವರು ವರಲಕ್ಷ್ಮೀ ಹೆಸರಿನ ಪಾತ್ರ ಮಾಡುತ್ತಿದ್ದರು. ಅವರು ನಿಧನ ಹೊಂದಿರುವುದರಿಂದ ಅವರು ಮಿಸ್ ಆಗಲಿದ್ದಾರೆ.  ಅವರ ಬದಲಿಗೆ ಯಾರನ್ನು ಕರೆತರುತ್ತಾರೆ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:44 pm, Wed, 11 December 24

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ