Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇವನು ನನ್ನ ತಂದೆ ರೂಪ ಎಂದು ನಾನು ನಂಬಿದ್ದೇನೆ’; ಮಗ ಸುಕೃತ್​ ಬಗ್ಗೆ ಸೃಜನ್​ ಲೋಕೇಶ್​ ಮಾತು

‘ನನ್ನಮ್ಮ ಸೂಪರ್​ ಸ್ಟಾರ್​’ ವೇದಿಕೆ ಮೇಲೆ ಸುಕೃತ್​ ‘ತೇರಾ ಏರಿ ಅಂಬರದಾಗೆ..’ ಹಾಡಿಗೆ ಹೆಜ್ಜೆ ಹಾಕಿದನು. ಅವನು ಡ್ಯಾನ್ಸ್​ ಮಾಡಿದ ರೀತಿಗೆ ಸೃಜನ್​ ಲೋಕೇಶ್​ ಸಂತೋಷಪಟ್ಟಿದ್ದಾರೆ.

‘ಇವನು ನನ್ನ ತಂದೆ ರೂಪ ಎಂದು ನಾನು ನಂಬಿದ್ದೇನೆ’; ಮಗ ಸುಕೃತ್​ ಬಗ್ಗೆ ಸೃಜನ್​ ಲೋಕೇಶ್​ ಮಾತು
ಸೃಜನ್​ ಲೋಕೇಶ್, ಸುಕೃತ್​
Follow us
TV9 Web
| Updated By: ಮದನ್​ ಕುಮಾರ್​

Updated on:Feb 07, 2022 | 8:16 AM

ನಟ ಸೃಜನ್​ ಲೋಕೇಶ್ (Srujan Lokesh)​ ಅವರು ಕಿರುತೆರೆ ಲೋಕದಲ್ಲಿ ತುಂಬಾನೇ ಫೇಮಸ್​. ಅವರು ನಡೆಸಿಕೊಡುತ್ತಿದ್ದ ‘ಮಜಾ ಟಾಕೀಸ್​’ ಶೋ ಸಾಕಷ್ಟು ಖ್ಯಾತಿ ಗಳಿಸಿಕೊಂಡಿತ್ತು. ಈಗ ಅವರು ಕಲರ್ಸ್​​ ಕನ್ನಡದ ಶೋಗಳಿಗೆ ಜಡ್ಜ್​​ ಆಗಿ ಬರುತ್ತಿದ್ದಾರೆ. ಕಲರ್ಸ್​ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ನನ್ನಮ್ಮ ಸೂಪರ್​ ಸ್ಟಾರ್​’ (Nannamma Super Star) ಕಾರ್ಯಕ್ರಮಕ್ಕೆ ನಿರ್ಣಾಯಕರಾಗಿ ಕೆಲಸ ಮಾಡುತ್ತಿದ್ದಾರೆ. ಈ ಶೋಗೆ ಅನೇಕ ಸೆಲೆಬ್ರಿಟಿಗಳು ಹಾಗೂ ಅವರ ಮಕ್ಕಳು ಪಾಲ್ಗೊಳ್ಳುತ್ತಿದ್ದಾರೆ. ಈ ಶೋ ಕಿರುತೆರೆ ಪ್ರೇಕ್ಷಕರನ್ನು ಸೆಳೆಯೋಕೆ ಯಶಸ್ವಿಯಾಗಿದೆ. ಈಗ ಈ ವೇದಿಕೆ ಮೇಲೆ ಸೃಜನ್​ ಲೋಕೇಶ್​ ಮಗ ಸುಕೃತ್​ ಆಗಮಿಸಿದ್ದ. ಈ ವೇಳೆ ಸುಕೃತ್ (Sukruth) ಬಗ್ಗೆ​ ಸೃಜನ್​ ಅವರು ಸಾಕಷ್ಟು ವಿಚಾರಗಳನ್ನು ಹಂಚಿಕೊಂಡರು.

‘ನನ್ನಮ್ಮ ಸೂಪರ್​ ಸ್ಟಾರ್​’ ಕಾರ್ಯಕ್ರಮ ಕಿರುತೆರೆ ವೀಕ್ಷಕರಿಗೆ ಇಷ್ಟವಾಗಿದೆ. ಪ್ರತಿ ಬಾರಿ ನೀಡುವ ನಾನಾ ಟಾಸ್ಕ್​ಗಳು ಗಮನ ಸೆಳೆಯುತ್ತಿವೆ. ಅದರಲ್ಲೂ ಸೆಲೆಬ್ರಿಟಿ ಮಕ್ಕಳು ಮಾಡುವ ಕೀಟಲೆಗಳು ಒಂದೆರಡಲ್ಲ. ಅವರಾಡುವ ಚೂಟಿ ಮಾತುಗಳು ವೀಕ್ಷಕರಿಗೆ ಇಷ್ಟವಾಗುತ್ತಿದೆ. ಆದರೆ, ಈ ವಾರ ಈ ವೇದಿಕೆ ಹಲವು ಭಾವನಾತ್ಮಕ ವಿಚಾರಗಳಿಗೆ ಸಾಕ್ಷಿ ಆಯಿತು. ಸೃಜನ್​ ಹಾಗೂ ಸುಕೃತ್​ ನಡುವೆ ನಡೆದ ಸಂಭಾಷಣೆ ಕೇಳಿ ಪ್ರೇಕ್ಷಕರು ಖುಷಿಪಟ್ಟಿದ್ದಾರೆ. ಅಪ್ಪ-ಮಗನ ಸಂಬಂಧದ ಬಗ್ಗೆ ಕೇಳಿ ಖುಷಿಪಟ್ಟಿದ್ದಾರೆ.

‘ನನ್ನಮ್ಮ ಸೂಪರ್​ ಸ್ಟಾರ್​’ ವೇದಿಕೆ ಮೇಲೆ ಸುಕೃತ್​ ‘ತೇರಾ ಏರಿ ಅಂಬರದಾಗೆ..’ ಹಾಡಿಗೆ ಹೆಜ್ಜೆ ಹಾಕಿದನು. ಅವನು ಡ್ಯಾನ್ಸ್​ ಮಾಡಿದ ರೀತಿಗೆ ಸೃಜನ್​ ಲೋಕೇಶ್​ ಸಂತೋಷಪಟ್ಟಿದ್ದಾರೆ. ಇದು ಸುಕೃತ್​ ತಾತ ಲೋಕೇಶ್​ ಡ್ಯಾನ್ಸ್​ ಮಾಡಿದ್ದ ಹಾಡಾಗಿತ್ತು ಅನ್ನೋದು ವಿಶೇಷ. ಇದು ವೀಕ್ಷಕರಿಗೆ ಖುಷಿ ನೀಡಿದೆ.

ಈ ಡ್ಯಾನ್ಸ್​ ಬಳಿಕ ಮಾತನಾಡಿದ ಸೃಜನ್​ ಅವರು, ‘ಇವನು ಡ್ಯಾನ್ಸ್​ ಮಾಡಿದ್ದು ನಿಜಕ್ಕೂ ಸರ್​ಪ್ರೈಸಿಂಗ್​ ಆಗಿತ್ತು’ ಎಂದರು.  ಎಲ್ಲರೂ ಸುಕೃತ್​ ಡ್ಯಾನ್ಸ್​ಅನ್ನು ಕೊಂಡಾಡಿದರು. ‘ಸುಕೃತ್​ ಅಪ್ಪನ ಮಗ. ಇವನು ನನ್ನ ತಂದೆ ರೂಪ ಎಂದು ನಾನು ನಂಬಿದ್ದೇನೆ. ನಾನು ಮನೆಯಲ್ಲಿದ್ದಾಗ ದಿನಕ್ಕೆ ಒಮ್ಮೆ ಆದರೂ ಊಟ ಮಾಡಿಸುತ್ತೇನೆ. ಇಲ್ಲ ಎಂದರೆ ನನಗೆ ಸಮಾಧಾನ ಆಗೋದೆ ಇಲ್ಲ’ ಎಂದರು ಸೃಜನ್​. ಆ ಬಳಿಕ ಇಬ್ಬರೂ ‘ತೇರಾ ಏರಿ ಅಂಬರದಾಗೆ’ ಹಾಡಿಗೆ ಹೆಜ್ಜೆ ಹಾಕಿದರು.

ಇದನ್ನೂ ಓದಿ: ‘ದೇವರು ಇದ್ದಾನೋ ಇಲ್ಲವೋ?’: ಸಮನ್ವಿ ನಿಧನದ ಬಳಿಕ ಸೃಜನ್​ ಲೋಕೇಶ್​ ನೋವಿನ ನುಡಿ

ಮಾಸ್ಟರ್​ ಆನಂದ್​ ಮಗಳು ವಂಶಿಕಾ ಭರ್ಜರಿ ಶಾಪಿಂಗ್​; ವಿಡಿಯೋ ನೋಡಿ ಹೊಟ್ಟೆ ಹುಣ್ಣಾಗುವಂತೆ ನಕ್ಕ ಸೃಜನ್​ ಲೋಕೇಶ್​

Published On - 6:10 am, Mon, 7 February 22

ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ