AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋರಾತ್ರಿ ಬಿಗ್ ಬಾಸ್​ ಮನೆ ಅಸ್ತವ್ಯಸ್ತ; ಮಾಸ್ಕ್ ಧರಿಸಿದ ವ್ಯಕ್ತಿಗಳಿಂದ ವಸ್ತುಗಳಿಗೆ ಹಾನಿ

‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಡಿಫರೆಂಟ್​ ಎನಿಸಿಕೊಂಡಿದ್ದು ಸ್ವರ್ಗ ಮತ್ತು ನರಕ ಎಂಬ ಕಾನ್ಸೆಪ್ಟ್​ನಿಂದಾಗಿ. ಇಷ್ಟು ದಿನ ಅದೇ ಕಾನ್ಸೆಪ್ಟ್​ ಅಡಿಯಲ್ಲಿ ಟಾಸ್ಕ್​ಗಳು ನಡೆಯುತ್ತಿದ್ದವು. ಆದರೆ ಈಗ ರಾತ್ರೋರಾತ್ರಿ ನರಕದ ಗಡಿಯನ್ನು ಮುರಿಯಲಾಗಿದೆ. ನರಕದಲ್ಲಿ ಇದ್ದ ವಸ್ತುಗಳನ್ನು ಒಡೆದು ಹಾಕಲಾಗಿದೆ. ಬಿಗ್​ ಬಾಸ್​ ಮನೆಯಲ್ಲಿ ಏಕಾಏಕಿ ಈ ಬದಲಾವಣೆಗಳನ್ನು ಮಾಡಲಾಗಿದೆ.

ರಾತ್ರೋರಾತ್ರಿ ಬಿಗ್ ಬಾಸ್​ ಮನೆ ಅಸ್ತವ್ಯಸ್ತ; ಮಾಸ್ಕ್ ಧರಿಸಿದ ವ್ಯಕ್ತಿಗಳಿಂದ ವಸ್ತುಗಳಿಗೆ ಹಾನಿ
ಬಿಗ್ ಬಾಸ್​ ಕನ್ನಡ ಸೀಸನ್​ 11
ಮದನ್​ ಕುಮಾರ್​
|

Updated on: Oct 11, 2024 | 11:27 PM

Share

ದೊಡ್ಡದಾಗಿ ಸೈರನ್ ಕೂಗಿತು. ಅದನ್ನು ಕೇಳಿದಾಗ ಎಲ್ಲ ಸದಸ್ಯರಿಗೂ ಶಾಕ್ ಆಯಿತು. ಬಿಗ್​ ಬಾಸ್​ ಮನೆಯ ಒಳಗೆ ದೊಡ್ಡ ಕ್ರೇನ್​ ಬಂತು. ಅದರಿಂದ ಒಂದಷ್ಟು ಜನರು ಬಂದು ಮನೆಯೊಳಗಿನ ವಸ್ತುಗಳಿಗೆ ಹಾನಿ ಮಾಡಲು ಆರಂಭಿಸಿದರು. ಈ ಹಿಂದಿನ ಯಾವುದೇ ಸೀಸನ್​ಗಳಲ್ಲೂ ಈ ರೀತಿ ಆಗಿರಲಿಲ್ಲ. ಹಾಗಾಗಿ ಎಲ್ಲರಿಗೂ ಅಚ್ಚರಿ ಆಗಿದೆ. ಸ್ವರ್ಗ ಮತ್ತು ನರಕದ ನಡುವೆ ಇದ್ದ ಗೋಡೆಯನ್ನು ಒಡೆಯಲಾಯಿತು. ನರಕದ ಒಳಗಿನ ವಸ್ತುಗಳನ್ನು ಒಡೆಯಲಾಯಿತು. ಹಾಗಾದರೆ ಇನ್ಮೇಲೆ ಸ್ವರ್ಗ ಮತ್ತು ನರಕ ಎಂಬ ಕಾನ್ಸೆಪ್ಟ್​ ಇರುವುದಿಲ್ಲವಾ ಎಂಬ ಪ್ರಶ್ನೆ ಮೂಡಿತು.

ನೋಡನೋಡುತ್ತಿದ್ದಂತೆಯೇ ನರಕದ ಗೋಡೆಗಳನ್ನು ಮುರಿದು ಹಾಕಲಾಯಿತು. ಗೋಲ್ಡ್​ ಸುರೇಶ್​, ಐಶ್ವರ್ಯಾ ಮುಂತಾದವರು ಒಂದು ಕ್ಷಣ ಗಾಬರಿ ಆದರು. ಜಗದೀಶ್​ ಮಾತ್ರ ಎಲ್ಲವನ್ನೂ ಎಂಜಾಯ್​ ಮಾಡುತ್ತಿದ್ದರು. ಮುಂದೇನಾಗಬಹುದು ಎಂಬ ಟೆನ್ಷನ್​ ಬಹುತೇಕರಿಗೆ ಇತ್ತು. ಕಡೆಗೂ ಆಗಿದ್ದೇನು? ನರಕದ ಮನೆಯನ್ನೇ ನಾಶ ಮಾಡಲಾಯಿತು. ಬಳಿಕ ಆ ಬಗ್ಗೆ ಬಿಗ್​ ಬಾಸ್​ ವಿವರಿಸಿ ಹೇಳಿದರು.

ಇದನ್ನೂ ಓದಿ: ‘ಸುದೀಪ್​ ಮಾತಿಗೆ ಬೆಲೆ ಕೊಡ್ತೀನಿ, ಇನ್ಮೇಲೆ ಬದಲಾಗ್ತೀನಿ’: ಬಿಗ್​ ಬಾಸ್​ನಲ್ಲಿ ಜಗದೀಶ್ ನಿರ್ಧಾರ

ಇಷ್ಟು ದಿನ ಸ್ವರ್ಗ ಮತ್ತು ನರಕ ಎಂಬ ಕಾರಣದಿಂದಲೇ ಬಿಗ್​ ಬಾಸ್​ ಸ್ಪರ್ಧಿಗಳ ನಡುವೆ ಗ್ಯಾಪ್​ ಉಂಟಾಗಿತ್ತು. ನರಕದಿಂದ ಸ್ವರ್ಗಕ್ಕೆ ಹೋಗಬೇಕು ಎಂಬ ಕಾರಣದಿಂದಲೇ ಟಫ್​ ಪೈಪೋಟಿ ನೀಡಲಾಗುತ್ತಿತ್ತು. ಆದರೆ ಈಗ ಆ ಎಲ್ಲ ಜಂಜಾಟಕ್ಕೆ ಪೂರ್ಣ ವಿರಾಮ ಹಾಕಲಾಗಿದೆ. ಇನ್ಮುಂದೆ ಬಿಗ್ ಬಾಸ್ ಮನೆಯಲ್ಲಿ ಸ್ವರ್ಗ ಮತ್ತು ನರಕ ಎಂಬ ಕಾನ್ಸೆಪ್ಟ್​ ಇರುವುದಿಲ್ಲ. ಎಲ್ಲರೂ ಒಂದೇ ಕಡೆ ವಾಸಿಸಲಿದ್ದಾರೆ.

ಇದನ್ನೂ ಓದಿ: ‘ಸೋಲೋಕೆ ಬರ್ತೀರಿ, ನಾಚಿಕೆ ಆಗಬೇಕು’: ಬಿಗ್​ ಬಾಸ್​ ಸ್ಪರ್ಧಿಗಳಿಗೆ ಕ್ಲಾಸ್​ ತೆಗೆದುಕೊಂಡ ಜಗದೀಶ್

‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ರಿಯಾಲಿಟಿ ಶೋನಲ್ಲಿ ಎರಡನೇ ಕ್ಯಾಪ್ಟನ್​ ಆಗಿ ಶಿಶಿರ್​ ಆಯ್ಕೆ ಆಗಿದ್ದಾರೆ. ಇಷ್ಟು ದಿನಗಳ ಕಾಲ ನರಕದಲ್ಲಿ ಇದ್ದು ಕಷ್ಟ ಅನುಭವಿಸಿದ್ದ ಅವರು ಈಗ ನೇರವಾಗಿ ಕ್ಯಾಪ್ಟನ್​ ರೂಮ್​ಗೆ ಕಾಲಿಟ್ಟಿದ್ದಾರೆ. ಅವರಿಗೆ ಒಂದಷ್ಟು ಸವಲತ್ತುಗಳು ಸಿಗಲಿವೆ. ಕಳೆದ ವಾರ ಕ್ಯಾಪ್ಟನ್​ ಆಗಿದ್ದ ಹಂಸಾ ಅವರು ಸಿಕ್ಕಾಪಟ್ಟೆ ಕಿರಿಕಿರಿ ಅನುಭವಿಸಿದ್ದರು. ಈಗ ಶಿಶಿರ್​ ಅವರು ಯಾವ ರೀತಿ ತಮ್ಮ ಜವಾಬ್ದಾರಿ ನಿಭಾಯಿಸುತ್ತಾರೆ ಎಂಬುದನ್ನು ಕಾದುನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್