AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಸಹವಾಸ ಸಾಕಾಗಿದೆ’; ಸ್ಪರ್ಧಿಗಳಿಗೆ ನೇರವಾಗಿ ಹೇಳಿದ ಸುದೀಪ್

ಬಿಗ್ ಬಾಸ್ ಕನ್ನಡ ಸೀಸನ್ 11 ಫೈನಲ್ ಹಂತಕ್ಕೆ ಬಂದಿದೆ. ಈ ಸೀಸನ್ ನಲ್ಲಿ ಸುದೀಪ್ ಅವರು ಸ್ಪರ್ಧಿಗಳ ವರ್ತನೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಅನೇಕರು ಈ ಸೀಸನ್ ಅನ್ನು ‘ಕೆಟ್ಟ ಸೀಸನ್’ ಎಂದು ಟೀಕಿಸಿದ್ದಾರೆ. ಸುದೀಪ್ ಅವರು ಬಿಗ್ ಬಾಸ್ ನಿಂದ ನಿರ್ಗಮಿಸುವ ಬಗ್ಗೆ ಘೋಷಿಸಿದ್ದಾರೆ ಆದರೆ ಕಲರ್ಸ್ ಕನ್ನಡ ಇನ್ನೂ ಅದಕ್ಕೆ ಒಪ್ಪಿಗೆ ನೀಡಿಲ್ಲ.

‘ನಿಮ್ಮ ಸಹವಾಸ ಸಾಕಾಗಿದೆ’; ಸ್ಪರ್ಧಿಗಳಿಗೆ ನೇರವಾಗಿ ಹೇಳಿದ ಸುದೀಪ್
ರಜತ್-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Jan 20, 2025 | 7:32 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ ಕೊನೆಯ ಹಂತಕ್ಕೆ ಬಂದಿದೆ. ಇನ್ನೊಂದು ವಾರದಲ್ಲಿ ಬಿಗ್ ಬಾಸ್ ಫಿನಾಲೆ ನಡೆಯಲಿದೆ. ಸದ್ಯ ದೊಡ್ಮನೆಯಲ್ಲಿ ಆರು ಸ್ಪರ್ಧಿಗಳು ಇದ್ದು, ಈ ವಾರಾಂತ್ಯದಲ್ಲಿ ಫಿನಾಲೆ ನಡೆಯಲಿದೆ. ಈ ಸೀಸನ್​ನಲ್ಲಿ ಉತ್ತಮ ಟಿಆರ್​ಪಿ ಬಂದಿದೆ ನಿಜ. ಆದರೆ, ಸ್ಪರ್ಧಿಗಳು ನಡೆದುಕೊಂಡ ರೀತಿಗೆ ಸುದೀಪ್ ಬೇಸರಗೊಂಡಿದ್ದಾರೆ. ಇದನ್ನು ಅವರು ಅನೇಕ ಬಾರಿ ಹೇಳಿಕೊಂಡಿದ್ದೂ ಇದೆ. ‘ಅತ್ಯಂತ ಕೆಟ್ಟ ಸೀಸನ್’ ಎಂದು ಅನೇಕರು ಟೀಕೆ ಮಾಡಿದ್ದೂ ಇದೆ. ಈಗ ಸ್ಪರ್ಧಿಗಳಿಗೆ ಸುದೀಪ್ ಅವರು ಈ ಬಗ್ಗೆ ನೇರವಾಗಿ ಹೇಳಿದ್ದಾರೆ.

ಭಾನುವಾರದ ಎಪಿಸೋಡ್​ನಲ್ಲಿ ಸುದೀಪ್ ಫನ್ ಮೂಡ್​ನಲ್ಲಿ ಇರುತ್ತಾರೆ. ಏನೇ ಹೇಳಿದರೂ ಅದನ್ನು ಫನ್ ಆಗಿ ತೆಗೆದುಕೊಳ್ಳುತ್ತಾರೆ. ಅದೇ ರೀತಿ ಯಾರು ಹೊರ ಹೋಗುತ್ತಾರೆ ಎಂದು ಕೇಳುತ್ತಾ ಬರಲಾಯಿತು. ಆಗ ಎಲ್ಲರೂ ಫನ್ ಆಗಿ ಉತ್ತರ ಕೊಟ್ಟರು. ರಜತ್ ಅವರು ಸುದೀಪ್​ನ ಹೊಗಳಿದರು. ಇದಕ್ಕೆ ಸುದೀಪ್ ಅವರು ನೇರ ಮಾತುಗಳಲ್ಲಿ ಕೌಂಟರ್ ಕೊಟ್ಟಿದ್ದಾರೆ.

‘ಯಾವ ಸೀಸನ್​ನಲ್ಲೂ ಇಲ್ಲದಿರೋ ಕಳೆ ನಿಮಗೆ ಈ ಸೀಸನ್​ನಲ್ಲಿ ಬಂದಿದೆ’ ಎಂದು ರಜತ್ ಅವರು ಸುದೀಪ್ ಬಳಿ ಹೇಳಿದರು. ಇದಕ್ಕೆ ಉತ್ತರಿಸಿದ ಸುದೀಪ್ ಅವರು, ‘ಯಾವ ಸೀಸನ್​ನಲ್ಲೂ ಇಲ್ಲದಿರೋ ಕಳೆ ಈಗ ಯಾಕೆ ಬಂತು ಎಂದರೆ, ಈ ಸೀಸನ್ ಇನ್ನೊಂದು ವಾರ ಇದೆಯಲ್ಲ. ಅದಕ್ಕೆ ಕಳೆ ಬಂದಿದೆ. ನಿಮ್ಮ ಸಹವಾಸ ಸಾಕಾಗಿದೆ’ ಎಂದು ಸುದೀಪ್ ಹೇಳಿದ್ದಾರೆ.

ಇದನ್ನೂ ಓದಿ: ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್

ಈಗಾಗಲೇ ಸುದೀಪ್ ಅವರು ಬಿಗ್ ಬಾಸ್ ತೊರೆಯುವ ನಿರ್ಧಾರ ಮಾಡಿಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಘೋಷಣೆ ಕೂಡ ಮಾಡಿದ್ದಾರೆ. ಆದರೆ, ಕಲರ್ಸ್ ಕನ್ನಡ ಕಡೆಯಿಂದ ಇದಕ್ಕೆ ಒಪ್ಪಿಗೆ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ಅವರು ಈ ಬಗ್ಗೆ ಯೋಚಿಸೋದಾಗಿ ಹೇಳಿದ್ದಾರೆ. ಅವರು ಮನಸ್ಸು ಬದಲಿಸಲಿ ಎಂದು ಫ್ಯಾನ್ಸ್ ಕೋರುತ್ತಾ ಇದ್ದಾರೆ. ಆ ಬಗ್ಗೆ ಸುದೀಪ್ ಫಿನಾಲೆ ದಿನ ಘೋಷಣೆ ಮಾಡುವ ಸಾಧ್ಯತೆ ಇದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ