AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಸಹವಾಸ ಸಾಕಾಗಿದೆ’; ಸ್ಪರ್ಧಿಗಳಿಗೆ ನೇರವಾಗಿ ಹೇಳಿದ ಸುದೀಪ್

ಬಿಗ್ ಬಾಸ್ ಕನ್ನಡ ಸೀಸನ್ 11 ಫೈನಲ್ ಹಂತಕ್ಕೆ ಬಂದಿದೆ. ಈ ಸೀಸನ್ ನಲ್ಲಿ ಸುದೀಪ್ ಅವರು ಸ್ಪರ್ಧಿಗಳ ವರ್ತನೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಅನೇಕರು ಈ ಸೀಸನ್ ಅನ್ನು ‘ಕೆಟ್ಟ ಸೀಸನ್’ ಎಂದು ಟೀಕಿಸಿದ್ದಾರೆ. ಸುದೀಪ್ ಅವರು ಬಿಗ್ ಬಾಸ್ ನಿಂದ ನಿರ್ಗಮಿಸುವ ಬಗ್ಗೆ ಘೋಷಿಸಿದ್ದಾರೆ ಆದರೆ ಕಲರ್ಸ್ ಕನ್ನಡ ಇನ್ನೂ ಅದಕ್ಕೆ ಒಪ್ಪಿಗೆ ನೀಡಿಲ್ಲ.

‘ನಿಮ್ಮ ಸಹವಾಸ ಸಾಕಾಗಿದೆ’; ಸ್ಪರ್ಧಿಗಳಿಗೆ ನೇರವಾಗಿ ಹೇಳಿದ ಸುದೀಪ್
ರಜತ್-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Jan 20, 2025 | 7:32 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ ಕೊನೆಯ ಹಂತಕ್ಕೆ ಬಂದಿದೆ. ಇನ್ನೊಂದು ವಾರದಲ್ಲಿ ಬಿಗ್ ಬಾಸ್ ಫಿನಾಲೆ ನಡೆಯಲಿದೆ. ಸದ್ಯ ದೊಡ್ಮನೆಯಲ್ಲಿ ಆರು ಸ್ಪರ್ಧಿಗಳು ಇದ್ದು, ಈ ವಾರಾಂತ್ಯದಲ್ಲಿ ಫಿನಾಲೆ ನಡೆಯಲಿದೆ. ಈ ಸೀಸನ್​ನಲ್ಲಿ ಉತ್ತಮ ಟಿಆರ್​ಪಿ ಬಂದಿದೆ ನಿಜ. ಆದರೆ, ಸ್ಪರ್ಧಿಗಳು ನಡೆದುಕೊಂಡ ರೀತಿಗೆ ಸುದೀಪ್ ಬೇಸರಗೊಂಡಿದ್ದಾರೆ. ಇದನ್ನು ಅವರು ಅನೇಕ ಬಾರಿ ಹೇಳಿಕೊಂಡಿದ್ದೂ ಇದೆ. ‘ಅತ್ಯಂತ ಕೆಟ್ಟ ಸೀಸನ್’ ಎಂದು ಅನೇಕರು ಟೀಕೆ ಮಾಡಿದ್ದೂ ಇದೆ. ಈಗ ಸ್ಪರ್ಧಿಗಳಿಗೆ ಸುದೀಪ್ ಅವರು ಈ ಬಗ್ಗೆ ನೇರವಾಗಿ ಹೇಳಿದ್ದಾರೆ.

ಭಾನುವಾರದ ಎಪಿಸೋಡ್​ನಲ್ಲಿ ಸುದೀಪ್ ಫನ್ ಮೂಡ್​ನಲ್ಲಿ ಇರುತ್ತಾರೆ. ಏನೇ ಹೇಳಿದರೂ ಅದನ್ನು ಫನ್ ಆಗಿ ತೆಗೆದುಕೊಳ್ಳುತ್ತಾರೆ. ಅದೇ ರೀತಿ ಯಾರು ಹೊರ ಹೋಗುತ್ತಾರೆ ಎಂದು ಕೇಳುತ್ತಾ ಬರಲಾಯಿತು. ಆಗ ಎಲ್ಲರೂ ಫನ್ ಆಗಿ ಉತ್ತರ ಕೊಟ್ಟರು. ರಜತ್ ಅವರು ಸುದೀಪ್​ನ ಹೊಗಳಿದರು. ಇದಕ್ಕೆ ಸುದೀಪ್ ಅವರು ನೇರ ಮಾತುಗಳಲ್ಲಿ ಕೌಂಟರ್ ಕೊಟ್ಟಿದ್ದಾರೆ.

‘ಯಾವ ಸೀಸನ್​ನಲ್ಲೂ ಇಲ್ಲದಿರೋ ಕಳೆ ನಿಮಗೆ ಈ ಸೀಸನ್​ನಲ್ಲಿ ಬಂದಿದೆ’ ಎಂದು ರಜತ್ ಅವರು ಸುದೀಪ್ ಬಳಿ ಹೇಳಿದರು. ಇದಕ್ಕೆ ಉತ್ತರಿಸಿದ ಸುದೀಪ್ ಅವರು, ‘ಯಾವ ಸೀಸನ್​ನಲ್ಲೂ ಇಲ್ಲದಿರೋ ಕಳೆ ಈಗ ಯಾಕೆ ಬಂತು ಎಂದರೆ, ಈ ಸೀಸನ್ ಇನ್ನೊಂದು ವಾರ ಇದೆಯಲ್ಲ. ಅದಕ್ಕೆ ಕಳೆ ಬಂದಿದೆ. ನಿಮ್ಮ ಸಹವಾಸ ಸಾಕಾಗಿದೆ’ ಎಂದು ಸುದೀಪ್ ಹೇಳಿದ್ದಾರೆ.

ಇದನ್ನೂ ಓದಿ: ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್

ಈಗಾಗಲೇ ಸುದೀಪ್ ಅವರು ಬಿಗ್ ಬಾಸ್ ತೊರೆಯುವ ನಿರ್ಧಾರ ಮಾಡಿಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಘೋಷಣೆ ಕೂಡ ಮಾಡಿದ್ದಾರೆ. ಆದರೆ, ಕಲರ್ಸ್ ಕನ್ನಡ ಕಡೆಯಿಂದ ಇದಕ್ಕೆ ಒಪ್ಪಿಗೆ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ಅವರು ಈ ಬಗ್ಗೆ ಯೋಚಿಸೋದಾಗಿ ಹೇಳಿದ್ದಾರೆ. ಅವರು ಮನಸ್ಸು ಬದಲಿಸಲಿ ಎಂದು ಫ್ಯಾನ್ಸ್ ಕೋರುತ್ತಾ ಇದ್ದಾರೆ. ಆ ಬಗ್ಗೆ ಸುದೀಪ್ ಫಿನಾಲೆ ದಿನ ಘೋಷಣೆ ಮಾಡುವ ಸಾಧ್ಯತೆ ಇದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ