AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಸಹವಾಸ ಸಾಕಾಗಿದೆ’; ಸ್ಪರ್ಧಿಗಳಿಗೆ ನೇರವಾಗಿ ಹೇಳಿದ ಸುದೀಪ್

ಬಿಗ್ ಬಾಸ್ ಕನ್ನಡ ಸೀಸನ್ 11 ಫೈನಲ್ ಹಂತಕ್ಕೆ ಬಂದಿದೆ. ಈ ಸೀಸನ್ ನಲ್ಲಿ ಸುದೀಪ್ ಅವರು ಸ್ಪರ್ಧಿಗಳ ವರ್ತನೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಅನೇಕರು ಈ ಸೀಸನ್ ಅನ್ನು ‘ಕೆಟ್ಟ ಸೀಸನ್’ ಎಂದು ಟೀಕಿಸಿದ್ದಾರೆ. ಸುದೀಪ್ ಅವರು ಬಿಗ್ ಬಾಸ್ ನಿಂದ ನಿರ್ಗಮಿಸುವ ಬಗ್ಗೆ ಘೋಷಿಸಿದ್ದಾರೆ ಆದರೆ ಕಲರ್ಸ್ ಕನ್ನಡ ಇನ್ನೂ ಅದಕ್ಕೆ ಒಪ್ಪಿಗೆ ನೀಡಿಲ್ಲ.

‘ನಿಮ್ಮ ಸಹವಾಸ ಸಾಕಾಗಿದೆ’; ಸ್ಪರ್ಧಿಗಳಿಗೆ ನೇರವಾಗಿ ಹೇಳಿದ ಸುದೀಪ್
ರಜತ್-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Jan 20, 2025 | 7:32 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ ಕೊನೆಯ ಹಂತಕ್ಕೆ ಬಂದಿದೆ. ಇನ್ನೊಂದು ವಾರದಲ್ಲಿ ಬಿಗ್ ಬಾಸ್ ಫಿನಾಲೆ ನಡೆಯಲಿದೆ. ಸದ್ಯ ದೊಡ್ಮನೆಯಲ್ಲಿ ಆರು ಸ್ಪರ್ಧಿಗಳು ಇದ್ದು, ಈ ವಾರಾಂತ್ಯದಲ್ಲಿ ಫಿನಾಲೆ ನಡೆಯಲಿದೆ. ಈ ಸೀಸನ್​ನಲ್ಲಿ ಉತ್ತಮ ಟಿಆರ್​ಪಿ ಬಂದಿದೆ ನಿಜ. ಆದರೆ, ಸ್ಪರ್ಧಿಗಳು ನಡೆದುಕೊಂಡ ರೀತಿಗೆ ಸುದೀಪ್ ಬೇಸರಗೊಂಡಿದ್ದಾರೆ. ಇದನ್ನು ಅವರು ಅನೇಕ ಬಾರಿ ಹೇಳಿಕೊಂಡಿದ್ದೂ ಇದೆ. ‘ಅತ್ಯಂತ ಕೆಟ್ಟ ಸೀಸನ್’ ಎಂದು ಅನೇಕರು ಟೀಕೆ ಮಾಡಿದ್ದೂ ಇದೆ. ಈಗ ಸ್ಪರ್ಧಿಗಳಿಗೆ ಸುದೀಪ್ ಅವರು ಈ ಬಗ್ಗೆ ನೇರವಾಗಿ ಹೇಳಿದ್ದಾರೆ.

ಭಾನುವಾರದ ಎಪಿಸೋಡ್​ನಲ್ಲಿ ಸುದೀಪ್ ಫನ್ ಮೂಡ್​ನಲ್ಲಿ ಇರುತ್ತಾರೆ. ಏನೇ ಹೇಳಿದರೂ ಅದನ್ನು ಫನ್ ಆಗಿ ತೆಗೆದುಕೊಳ್ಳುತ್ತಾರೆ. ಅದೇ ರೀತಿ ಯಾರು ಹೊರ ಹೋಗುತ್ತಾರೆ ಎಂದು ಕೇಳುತ್ತಾ ಬರಲಾಯಿತು. ಆಗ ಎಲ್ಲರೂ ಫನ್ ಆಗಿ ಉತ್ತರ ಕೊಟ್ಟರು. ರಜತ್ ಅವರು ಸುದೀಪ್​ನ ಹೊಗಳಿದರು. ಇದಕ್ಕೆ ಸುದೀಪ್ ಅವರು ನೇರ ಮಾತುಗಳಲ್ಲಿ ಕೌಂಟರ್ ಕೊಟ್ಟಿದ್ದಾರೆ.

‘ಯಾವ ಸೀಸನ್​ನಲ್ಲೂ ಇಲ್ಲದಿರೋ ಕಳೆ ನಿಮಗೆ ಈ ಸೀಸನ್​ನಲ್ಲಿ ಬಂದಿದೆ’ ಎಂದು ರಜತ್ ಅವರು ಸುದೀಪ್ ಬಳಿ ಹೇಳಿದರು. ಇದಕ್ಕೆ ಉತ್ತರಿಸಿದ ಸುದೀಪ್ ಅವರು, ‘ಯಾವ ಸೀಸನ್​ನಲ್ಲೂ ಇಲ್ಲದಿರೋ ಕಳೆ ಈಗ ಯಾಕೆ ಬಂತು ಎಂದರೆ, ಈ ಸೀಸನ್ ಇನ್ನೊಂದು ವಾರ ಇದೆಯಲ್ಲ. ಅದಕ್ಕೆ ಕಳೆ ಬಂದಿದೆ. ನಿಮ್ಮ ಸಹವಾಸ ಸಾಕಾಗಿದೆ’ ಎಂದು ಸುದೀಪ್ ಹೇಳಿದ್ದಾರೆ.

ಇದನ್ನೂ ಓದಿ: ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್

ಈಗಾಗಲೇ ಸುದೀಪ್ ಅವರು ಬಿಗ್ ಬಾಸ್ ತೊರೆಯುವ ನಿರ್ಧಾರ ಮಾಡಿಯಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಘೋಷಣೆ ಕೂಡ ಮಾಡಿದ್ದಾರೆ. ಆದರೆ, ಕಲರ್ಸ್ ಕನ್ನಡ ಕಡೆಯಿಂದ ಇದಕ್ಕೆ ಒಪ್ಪಿಗೆ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ಅವರು ಈ ಬಗ್ಗೆ ಯೋಚಿಸೋದಾಗಿ ಹೇಳಿದ್ದಾರೆ. ಅವರು ಮನಸ್ಸು ಬದಲಿಸಲಿ ಎಂದು ಫ್ಯಾನ್ಸ್ ಕೋರುತ್ತಾ ಇದ್ದಾರೆ. ಆ ಬಗ್ಗೆ ಸುದೀಪ್ ಫಿನಾಲೆ ದಿನ ಘೋಷಣೆ ಮಾಡುವ ಸಾಧ್ಯತೆ ಇದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ