AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮಿಬ್ಬರನ್ನು ಹೊರಗಿಟ್ಟರೆ ಈ ಸೀಸನ್ ಅಪೂರ್ಣ’: ದೊಡ್ಡ ಸೂಚನೆ ಕೊಟ್ರಾ ಸುದೀಪ್?

ಈವರೆಗೆ ಯಾವ ಸೀಸನ್​ನಲ್ಲಿಯೂ ಸುದೀಪ್​ ಅವರು ಸ್ಪರ್ಧಿಗಳ ಇಡೀ ಜರ್ನಿಯನ್ನು ಪರಿಗಣಿಸಿ ‘ಕಿಚ್ಚನ ಚಪ್ಪಾಳೆ’ ನೀಡಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ಸಂಗೀತಾ ಶೃಂಗೇರಿ ಹಾಗೂ ವಿನಯ್​ ಗೌಡ ಅವರು ಇಡೀ ಜರ್ನಿಗೆ ಚಪ್ಪಾಳೆ ಪಡೆದಿದ್ದಾರೆ. ಹಾಗಾಗಿ ಇದು ವಿನ್ನರ್​ ಯಾರಾಗುತ್ತಾರೆ ಎಂಬುದರ ಮುನ್ಸೂಚನೆ ಇರಬಹುದೇ ಎಂದು ಪ್ರೇಕ್ಷಕರು ಊಹಿಸುತ್ತಿದ್ದಾರೆ.

‘ನಿಮ್ಮಿಬ್ಬರನ್ನು ಹೊರಗಿಟ್ಟರೆ ಈ ಸೀಸನ್ ಅಪೂರ್ಣ': ದೊಡ್ಡ ಸೂಚನೆ ಕೊಟ್ರಾ ಸುದೀಪ್?
ವಿನಯ್​ ಗೌಡ, ಕಿಚ್ಚ ಸುದೀಪ್​, ಸಂಗೀತಾ ಶೃಂಗೇರಿ
ಮದನ್​ ಕುಮಾರ್​
|

Updated on: Jan 21, 2024 | 9:39 AM

Share

ಈ ಬಾರಿ ಬಿಗ್​ ಬಾಸ್​ (BBK 10) ಗೆಲ್ಲುವುದು ಯಾರು? ಕಿರುತೆರೆ ಪ್ರೇಕ್ಷಕರ ಮನಸ್ಸಿನಲ್ಲಿ ಈ ಪ್ರಶ್ನೆ ಕೊರೆಯುತ್ತಿದೆ. ‘ಬಿಗ್​ ಬಾಸ್​ ಕನ್ನಡ ಸೀಸನ್ 10’ ಶೋನ ಫಿನಾಲೆ ಸಂಚಿಕೆ ಶೀಘ್ರದಲ್ಲೇ ಪ್ರಸಾರ ಆಗಲಿದೆ. ಅಂತಿಮ ಹಂತಕ್ಕೆ ಈ ಕಾರ್ಯಕ್ರಮ ತಲುಪಿದೆ. ಜನವರಿ 20ರಂದು ಕಿಚ್ಚ ಸುದೀಪ್ (Kichcha Sudeep) ಅವರು ಈ ಆವೃತ್ತಿಯ ಕೊನೆಯ ಪಂಚಾಯ್ತಿ ನಡೆಸಿದ್ದಾರೆ. ಈ ಕೊನೇ ವಾರದಲ್ಲಿ ಸಂಗೀತಾ ಶೃಂಗೇರಿ ಮತ್ತು ವಿನಯ್​ ಗೌಡ (Vinay Gowda) ಅವರಿಗೆ ಕಿಚ್ಚನ ಚಪ್ಪಾಳೆ ಸಿಕ್ಕಿದೆ. ಈ ಗೌರವ ಸಿಕ್ಕಿದ್ದಕ್ಕೆ ಇಬ್ಬರೂ ಖುಷಿಯಾಗಿದ್ದಾರೆ. ಚಪ್ಪಾಳೆ ನೀಡಿದ ಬಳಿಕ ಸುದೀಪ್​ ಅವರು ಆಡಿದ ಮಾತುಗಳು ಕೌತುಕಕ್ಕೆ ಕಾರಣ ಆಗಿವೆ.

ಪ್ರತಿ ವೀಕೆಂಡ್​ನಲ್ಲಿ ಆಯಾ ವಾರದ ಪರ್ಫಾರ್ಮೆನ್ಸ್​ ಆಧರಿಸಿ ಸುದೀಪ್​ ಅವರು ‘ಕಿಚ್ಚನ ಚಪ್ಪಾಳೆ’ ನೀಡುತ್ತಾರೆ. ಒಮ್ಮೆಯಾದರೂ ಸುದೀಪ್​ ಅವರಿಂದ ಚಪ್ಪಾಳೆ ಪಡೆಯಬೇಕು ಎಂಬುದು ಸ್ಪರ್ಧಿಗಳ ಆಸೆ ಆಗಿರುತ್ತದೆ. ಕೊನೇ ವಾರದಲ್ಲಿ ಸುದೀಪ್​ ಅವರು ಇಬ್ಬರಿಗೆ ಚಪ್ಪಾಳೆ ನೀಡಿರುವುದು ವಿಶೇಷ. ಅದಕ್ಕಿಂತಲೂ ಅಚ್ಚರಿ ಏನೆಂದರೆ, ಅವರು ಈ ಬಾರಿ ಚಪ್ಪಾಳೆ ಕೊಟ್ಟಿರುವುದು ಒಂದು ವಾರದ ಆಟವನ್ನು ಪರಿಗಣಿಸಿ ಅಲ್ಲ. ಬದಲಿಗೆ, ಇಡೀ ಸೀಸನ್​ನಲ್ಲಿ ಸಂಗೀತಾ ಶೃಂಗೇರಿ ಮತ್ತು ವಿನಯ್​ ಗೌಡ ಅವರ ಪರ್ಫಾರ್ಮೆನ್ಸ್​ ಅನ್ನು ಗಮನದಲ್ಲಿ ಇಟ್ಟುಕೊಂಡು ಸುದೀಪ್​ ಅವರು ಈ ಚಪ್ಪಾಳೆ ನೀಡಿದ್ದಾರೆ.

ಚಪ್ಪಾಳೆ ನೀಡಿ ಕಿಚ್ಚ ಹೇಳಿದ್ದೇನು?

‘ಈ ಇಡೀ ಸೀಸನ್​ನಲ್ಲಿ ಕೆಲವು ವಿಚಾರಗಳನ್ನು ನೋಡಿದ ಬಳಿಕ ಈ ಚಪ್ಪಾಳೆ ನೀಡುತ್ತಿದ್ದೇನೆ. ಈ ಜರ್ನಿಯಲ್ಲಿ ಕೊಡುಗೆ ಎಂಬುದು ಬಹಳ ಮುಖ್ಯ. ಸರಿ ಮಾಡಿದ್ದಾರೆ, ತಪ್ಪು ಮಾಡಿದ್ದಾರೆ. ಬೈಯ್ಯಿಸಿಕೊಂಡಿದ್ದಾರೆ, ಅತ್ತಿದ್ದಾರೆ. ಇವರನ್ನು ಮನೆಯಿಂದ ಹೊರಗೆ ಇಟ್ಟರೆ ಈ ಸೀಸನ್​ನ ಬೆಲೆ ಎಷ್ಟು ಎಂಬ ಪ್ರಶ್ನೆ ಬರುತ್ತದೆ. ಹಾಗಂತ ಯಾವುದೇ ವ್ಯಕ್ತಿ ಇಲ್ಲ ಎಂದರೆ ಒಂದು ಸೀಸನ್​ ನಡೆಯಲ್ಲ ಅಂತೇನೂ ಇಲ್ಲ. ಯಾರೇ ಇಲ್ಲದಿದ್ದರೂ ಸೀಸನ್​ ನಡೆಯುತ್ತದೆ. ಆದರೂ ಇವರನ್ನು ಹೊರಗಿಟ್ಟರೆ ಈ ಸೀಸನ್​ ಅಪೂರ್ಣ ಎನಿಸಿಕೊಳ್ಳುತ್ತದೆ. ಈ ಕೊನೆಯ ವಾರದಲ್ಲಿ ವಿನಯ್​ ಮತ್ತು ಸಂಗೀತಾಗೆ ನಾನು ಚಪ್ಪಾಳೆ ಕೊಡುತ್ತೇನೆ’ ಎಂದು ಸುದೀಪ್​ ಹೇಳಿದ್ದಾರೆ.

ಇದನ್ನೂ ಓದಿ: ‘ನನ್ನಿಂದ ತನಿಷಾನ ದೂರ ಮಾಡಿದ ಪಾಪಿ ಇವನು’: ಕಾರ್ತಿಕ್​ ಕಡೆ ಕೈ ತೋರಿಸಿದ ವರ್ತೂರು

‘ನಿಮ್ಮಿಬ್ಬರಿಂದ ಈ ಶೋ ಬಹಳ ಭಿನ್ನ ಎನಿಸಿಕೊಂಡಿದೆ. ಸರಿ-ತಪ್ಪು ಎಂಬ ಅಭಿಪ್ರಾಯ ಹೇಳಿದ್ದೀರಿ, ಜಗಳ ಆಡಿದ್ದೀರಿ, ಒಳ್ಳೆಯವರು ಆಗಿದ್ದೀರಿ, ಕೆಟ್ಟವರೂ ಆಗಿದ್ದೀರಿ. ಕಡೆಗೂ ಈ 7 ಜನರಲ್ಲಿ ಸ್ಥಾನ ಪಡೆದುಕೊಂಡಿದ್ದೀರಿ. ಅದ್ಭುತವಾದ ಕೊಡುಗೆ ನೀಡಿದ್ದೀರಿ’ ಎಂದು ಸುದೀಪ್​ ಅವರು ಹೊಗಳಿದ್ದಾರೆ. ಇಡೀ ಸೀಸನ್​ನ ಆಟವನ್ನು ಪರಿಗಣಿಸಿ ಸುದೀಪ್​ ಅವರು ಇಷ್ಟೆಲ್ಲ ಹೊಗಳಿದ್ದಾರೆ ಎಂದರೆ ಅದು ದೊಡ್ಡ ಸೂಚನೆ ಆಗಿರಬಹುದು ಎಂದು ಕಿರುತೆರೆ ಪ್ರೇಕ್ಷಕರು ಅಂದಾಜಿಸುತ್ತಿದ್ದಾರೆ. ಫಿನಾಲೆ ವೇದಿಕೆಯಲ್ಲಿ ವಿನಯ್​ ಗೌಡ ಮತ್ತು ಸಂಗೀತಾ ಶೃಂಗೇರಿ ಅವರು ಕಿಚ್ಚನ ಅಕ್ಕ-ಪಕ್ಕ ನಿಲ್ಲಬಹುದೇ ಎಂಬ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು