AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮಿಬ್ಬರನ್ನು ಹೊರಗಿಟ್ಟರೆ ಈ ಸೀಸನ್ ಅಪೂರ್ಣ’: ದೊಡ್ಡ ಸೂಚನೆ ಕೊಟ್ರಾ ಸುದೀಪ್?

ಈವರೆಗೆ ಯಾವ ಸೀಸನ್​ನಲ್ಲಿಯೂ ಸುದೀಪ್​ ಅವರು ಸ್ಪರ್ಧಿಗಳ ಇಡೀ ಜರ್ನಿಯನ್ನು ಪರಿಗಣಿಸಿ ‘ಕಿಚ್ಚನ ಚಪ್ಪಾಳೆ’ ನೀಡಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ಸಂಗೀತಾ ಶೃಂಗೇರಿ ಹಾಗೂ ವಿನಯ್​ ಗೌಡ ಅವರು ಇಡೀ ಜರ್ನಿಗೆ ಚಪ್ಪಾಳೆ ಪಡೆದಿದ್ದಾರೆ. ಹಾಗಾಗಿ ಇದು ವಿನ್ನರ್​ ಯಾರಾಗುತ್ತಾರೆ ಎಂಬುದರ ಮುನ್ಸೂಚನೆ ಇರಬಹುದೇ ಎಂದು ಪ್ರೇಕ್ಷಕರು ಊಹಿಸುತ್ತಿದ್ದಾರೆ.

‘ನಿಮ್ಮಿಬ್ಬರನ್ನು ಹೊರಗಿಟ್ಟರೆ ಈ ಸೀಸನ್ ಅಪೂರ್ಣ': ದೊಡ್ಡ ಸೂಚನೆ ಕೊಟ್ರಾ ಸುದೀಪ್?
ವಿನಯ್​ ಗೌಡ, ಕಿಚ್ಚ ಸುದೀಪ್​, ಸಂಗೀತಾ ಶೃಂಗೇರಿ
ಮದನ್​ ಕುಮಾರ್​
|

Updated on: Jan 21, 2024 | 9:39 AM

Share

ಈ ಬಾರಿ ಬಿಗ್​ ಬಾಸ್​ (BBK 10) ಗೆಲ್ಲುವುದು ಯಾರು? ಕಿರುತೆರೆ ಪ್ರೇಕ್ಷಕರ ಮನಸ್ಸಿನಲ್ಲಿ ಈ ಪ್ರಶ್ನೆ ಕೊರೆಯುತ್ತಿದೆ. ‘ಬಿಗ್​ ಬಾಸ್​ ಕನ್ನಡ ಸೀಸನ್ 10’ ಶೋನ ಫಿನಾಲೆ ಸಂಚಿಕೆ ಶೀಘ್ರದಲ್ಲೇ ಪ್ರಸಾರ ಆಗಲಿದೆ. ಅಂತಿಮ ಹಂತಕ್ಕೆ ಈ ಕಾರ್ಯಕ್ರಮ ತಲುಪಿದೆ. ಜನವರಿ 20ರಂದು ಕಿಚ್ಚ ಸುದೀಪ್ (Kichcha Sudeep) ಅವರು ಈ ಆವೃತ್ತಿಯ ಕೊನೆಯ ಪಂಚಾಯ್ತಿ ನಡೆಸಿದ್ದಾರೆ. ಈ ಕೊನೇ ವಾರದಲ್ಲಿ ಸಂಗೀತಾ ಶೃಂಗೇರಿ ಮತ್ತು ವಿನಯ್​ ಗೌಡ (Vinay Gowda) ಅವರಿಗೆ ಕಿಚ್ಚನ ಚಪ್ಪಾಳೆ ಸಿಕ್ಕಿದೆ. ಈ ಗೌರವ ಸಿಕ್ಕಿದ್ದಕ್ಕೆ ಇಬ್ಬರೂ ಖುಷಿಯಾಗಿದ್ದಾರೆ. ಚಪ್ಪಾಳೆ ನೀಡಿದ ಬಳಿಕ ಸುದೀಪ್​ ಅವರು ಆಡಿದ ಮಾತುಗಳು ಕೌತುಕಕ್ಕೆ ಕಾರಣ ಆಗಿವೆ.

ಪ್ರತಿ ವೀಕೆಂಡ್​ನಲ್ಲಿ ಆಯಾ ವಾರದ ಪರ್ಫಾರ್ಮೆನ್ಸ್​ ಆಧರಿಸಿ ಸುದೀಪ್​ ಅವರು ‘ಕಿಚ್ಚನ ಚಪ್ಪಾಳೆ’ ನೀಡುತ್ತಾರೆ. ಒಮ್ಮೆಯಾದರೂ ಸುದೀಪ್​ ಅವರಿಂದ ಚಪ್ಪಾಳೆ ಪಡೆಯಬೇಕು ಎಂಬುದು ಸ್ಪರ್ಧಿಗಳ ಆಸೆ ಆಗಿರುತ್ತದೆ. ಕೊನೇ ವಾರದಲ್ಲಿ ಸುದೀಪ್​ ಅವರು ಇಬ್ಬರಿಗೆ ಚಪ್ಪಾಳೆ ನೀಡಿರುವುದು ವಿಶೇಷ. ಅದಕ್ಕಿಂತಲೂ ಅಚ್ಚರಿ ಏನೆಂದರೆ, ಅವರು ಈ ಬಾರಿ ಚಪ್ಪಾಳೆ ಕೊಟ್ಟಿರುವುದು ಒಂದು ವಾರದ ಆಟವನ್ನು ಪರಿಗಣಿಸಿ ಅಲ್ಲ. ಬದಲಿಗೆ, ಇಡೀ ಸೀಸನ್​ನಲ್ಲಿ ಸಂಗೀತಾ ಶೃಂಗೇರಿ ಮತ್ತು ವಿನಯ್​ ಗೌಡ ಅವರ ಪರ್ಫಾರ್ಮೆನ್ಸ್​ ಅನ್ನು ಗಮನದಲ್ಲಿ ಇಟ್ಟುಕೊಂಡು ಸುದೀಪ್​ ಅವರು ಈ ಚಪ್ಪಾಳೆ ನೀಡಿದ್ದಾರೆ.

ಚಪ್ಪಾಳೆ ನೀಡಿ ಕಿಚ್ಚ ಹೇಳಿದ್ದೇನು?

‘ಈ ಇಡೀ ಸೀಸನ್​ನಲ್ಲಿ ಕೆಲವು ವಿಚಾರಗಳನ್ನು ನೋಡಿದ ಬಳಿಕ ಈ ಚಪ್ಪಾಳೆ ನೀಡುತ್ತಿದ್ದೇನೆ. ಈ ಜರ್ನಿಯಲ್ಲಿ ಕೊಡುಗೆ ಎಂಬುದು ಬಹಳ ಮುಖ್ಯ. ಸರಿ ಮಾಡಿದ್ದಾರೆ, ತಪ್ಪು ಮಾಡಿದ್ದಾರೆ. ಬೈಯ್ಯಿಸಿಕೊಂಡಿದ್ದಾರೆ, ಅತ್ತಿದ್ದಾರೆ. ಇವರನ್ನು ಮನೆಯಿಂದ ಹೊರಗೆ ಇಟ್ಟರೆ ಈ ಸೀಸನ್​ನ ಬೆಲೆ ಎಷ್ಟು ಎಂಬ ಪ್ರಶ್ನೆ ಬರುತ್ತದೆ. ಹಾಗಂತ ಯಾವುದೇ ವ್ಯಕ್ತಿ ಇಲ್ಲ ಎಂದರೆ ಒಂದು ಸೀಸನ್​ ನಡೆಯಲ್ಲ ಅಂತೇನೂ ಇಲ್ಲ. ಯಾರೇ ಇಲ್ಲದಿದ್ದರೂ ಸೀಸನ್​ ನಡೆಯುತ್ತದೆ. ಆದರೂ ಇವರನ್ನು ಹೊರಗಿಟ್ಟರೆ ಈ ಸೀಸನ್​ ಅಪೂರ್ಣ ಎನಿಸಿಕೊಳ್ಳುತ್ತದೆ. ಈ ಕೊನೆಯ ವಾರದಲ್ಲಿ ವಿನಯ್​ ಮತ್ತು ಸಂಗೀತಾಗೆ ನಾನು ಚಪ್ಪಾಳೆ ಕೊಡುತ್ತೇನೆ’ ಎಂದು ಸುದೀಪ್​ ಹೇಳಿದ್ದಾರೆ.

ಇದನ್ನೂ ಓದಿ: ‘ನನ್ನಿಂದ ತನಿಷಾನ ದೂರ ಮಾಡಿದ ಪಾಪಿ ಇವನು’: ಕಾರ್ತಿಕ್​ ಕಡೆ ಕೈ ತೋರಿಸಿದ ವರ್ತೂರು

‘ನಿಮ್ಮಿಬ್ಬರಿಂದ ಈ ಶೋ ಬಹಳ ಭಿನ್ನ ಎನಿಸಿಕೊಂಡಿದೆ. ಸರಿ-ತಪ್ಪು ಎಂಬ ಅಭಿಪ್ರಾಯ ಹೇಳಿದ್ದೀರಿ, ಜಗಳ ಆಡಿದ್ದೀರಿ, ಒಳ್ಳೆಯವರು ಆಗಿದ್ದೀರಿ, ಕೆಟ್ಟವರೂ ಆಗಿದ್ದೀರಿ. ಕಡೆಗೂ ಈ 7 ಜನರಲ್ಲಿ ಸ್ಥಾನ ಪಡೆದುಕೊಂಡಿದ್ದೀರಿ. ಅದ್ಭುತವಾದ ಕೊಡುಗೆ ನೀಡಿದ್ದೀರಿ’ ಎಂದು ಸುದೀಪ್​ ಅವರು ಹೊಗಳಿದ್ದಾರೆ. ಇಡೀ ಸೀಸನ್​ನ ಆಟವನ್ನು ಪರಿಗಣಿಸಿ ಸುದೀಪ್​ ಅವರು ಇಷ್ಟೆಲ್ಲ ಹೊಗಳಿದ್ದಾರೆ ಎಂದರೆ ಅದು ದೊಡ್ಡ ಸೂಚನೆ ಆಗಿರಬಹುದು ಎಂದು ಕಿರುತೆರೆ ಪ್ರೇಕ್ಷಕರು ಅಂದಾಜಿಸುತ್ತಿದ್ದಾರೆ. ಫಿನಾಲೆ ವೇದಿಕೆಯಲ್ಲಿ ವಿನಯ್​ ಗೌಡ ಮತ್ತು ಸಂಗೀತಾ ಶೃಂಗೇರಿ ಅವರು ಕಿಚ್ಚನ ಅಕ್ಕ-ಪಕ್ಕ ನಿಲ್ಲಬಹುದೇ ಎಂಬ ಕೌತುಕ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ