AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯ ಮಂದಿಗೂ ಗೊತ್ತಾಯ್ತು ಸುದೀಪ್ ತಾಯಿ ನಿಧನದ ಸುದ್ದಿ

ಕಿಚ್ಚ ಸುದೀಪ್​ ಅವರ ತಾಯಿ ಸರೋಜಾ ಸಂಜೀವ್ ಅವರು ಅಕ್ಟೋಬರ್​ 20ರಂದು ನಿಧನರಾದರು. ಆ ವಿಷಯ ಇಷ್ಟು ದಿನಗಳ ಕಾಲ ಬಿಗ್ ಬಾಸ್​ ಮನೆಯ ಸ್ಪರ್ಧಿಗಳಿಗೆ ತಿಳಿದಿರಲಿಲ್ಲ. ಈಗ ನಿರ್ದೇಶಕ ಯೋಗರಾಜ್ ಭಟ್ ಅವರು ಬಿಗ್ ಬಾಸ್​ ಮನೆಗೆ ಹೋಗಿ ಆ ಶಾಕಿಂಗ್ ಸುದ್ದಿಯನ್ನು ಮುಟ್ಟಿಸಿದ್ದಾರೆ. ಸುದೀಪ್ ತಾಯಿ ಇನ್ನಿಲ್ಲ ಎಂಬ ವಿಷಯ ತಿಳಿದು ಎಲ್ಲರೂ ಕಣ್ಣೀರು ಹಾಕಿದ್ದಾರೆ.

ಬಿಗ್ ಬಾಸ್ ಮನೆಯ ಮಂದಿಗೂ ಗೊತ್ತಾಯ್ತು ಸುದೀಪ್ ತಾಯಿ ನಿಧನದ ಸುದ್ದಿ
ಬಿಗ್​ ಬಾಸ್ ಕನ್ನಡ ಸೀಸನ್​ 11
ಮದನ್​ ಕುಮಾರ್​
|

Updated on: Oct 27, 2024 | 10:28 PM

Share

ಸುದೀಪ್​ ಅವರು ‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಶೋನ ನಿರೂಪಣೆ ಮಾಡುತ್ತಾ ಇರುವಾಗಲೇ ಅವರ ತಾಯಿ ಸರೋಜಾ ಸಂಜೀವ್ ಅವರ ಆರೋಗ್ಯದಲ್ಲಿ ಏರುಪೇರು ಆಗಿತ್ತು. ತಾಯಿಯ ಆರೋಗ್ಯ ಸಮಸ್ಯೆ ಗಂಭೀರವಾಗಿದೆ ಎಂಬುದು ಅವರಿಗೆ ಗೊತ್ತಾಗಿತ್ತು. ಹಾಗಿದ್ದರೂ ಕೂಡ ಅಂದಿನ ಶೋ ಮುಗಿಸಿಕೊಟ್ಟು ಅವರು ತಾಯಿಯನ್ನು ನೋಡಲು ತೆರಳಿದ್ದರು. ಅಷ್ಟರಲ್ಲಾಗಲೇ ಅವರ ತಾಯಿ ನಿಧನರಾಗಿದ್ದರು. ಈ ವಿಷಯದಿಂದ ಇಡೀ ಕರುನಾಡಿನ ಜನತೆಗೆ ಕಣ್ಣೀರು ಬಂತು. ಆದರೆ ಬಿಗ್ ಬಾಸ್ ಮನೆಯ ಸದಸ್ಯರಿಗೆ ಈ ಸುದ್ದಿಯೇ ಗೊತ್ತಿರಲಿಲ್ಲ. ಈಗ ಯೋಗರಾಜ್ ಭಟ್ ಅವರು ದೊಡ್ಮನೆಗೆ ಹೋಗಿ ಸುದ್ದಿ ತಿಳಿಸಿದ್ದಾರೆ.

ಕಳೆದ ಭಾನುವಾರ ಸುದೀಪ್​ ಅವರು ಬಿಗ್ ಬಾಸ್ ಸಂಚಿಕೆಯ ಶೂಟಿಂಗ್ ಮಾಡಿರಲಿಲ್ಲ. ಆದರೆ ಅದಕ್ಕೆ ಕಾರಣ ಏನು ಎಂಬುದು ಬಿಗ್ ಬಾಸ್ ಮನೆಯೊಳಗೆ ಇರುವ ಯಾರಿಗೂ ತಿಳಿದಿರಲಿಲ್ಲ. ಒಬ್ಬೊಬ್ಬರು ಒಂದೊಂದು ರೀತಿ ಊಹಿಸಿಕೊಂಡಿದ್ದರು. ಆದರೆ ಸುದೀಪ್ ಅವರ ತಾಯಿ ನಿಧನರಾಗಿದ್ದಾರೆ ಎಂಬುದನ್ನಂತೂ ಯಾರೂ ಊಹಿಸಿರಲಿಲ್ಲ. ಈಗ ಯೋಗರಾಜ್ ಭಟ್ ಅವರು ಎಲ್ಲವನ್ನೂ ಬಹಿರಂಗಪಡಿಸಿದ್ದಾರೆ.

‘ಶನಿವಾರ ಸುದೀಪ್ ಅವರ ತಾಯಿ ವಿಪರೀತ ಸೀರಿಯಸ್ ಆಗಿ ಐಸಿಯುನಲ್ಲಿ ಇದ್ದರು. ಈ ವಿಷಯ ಕೇಳಿದ ಮೇಲೂ ಕೂಡ ಅವರು ತಮ್ಮ ಬಿಗ್ ಬಾಸ್​ನ ಕರ್ತವ್ಯವನ್ನು ಪೂರ್ಣಗೊಳಿಸಿದರು. ವಾರದ ಪಂಚಾಯ್ತಿಯನ್ನು ಅವರು ಅರ್ಥಕ್ಕೆ ನಿಲ್ಲಿಸಲಿಲ್ಲ. ಶನಿವಾರದ ಶೂಟಿಂಗ್ ಮುಗಿಸಿ ರಾತ್ರಿ ಮನೆಗೆ ಹೋಗಿ ಅವರು ಬಿಗ್ ಬಾಸ್​ ಟೀಮ್​ಗೆ ‘ನನ್ನ ತಾಯಿಯನ್ನು ಕಳೆದುಕೊಂಡೆ’ ಅಂತ ಸಂದೇಶ ಕಳಿಸಿದ್ದರು’ ಎಂದು ಶಾಕಿಂಗ್ ಸುದ್ದಿಯನ್ನು ಯೋಗರಾಜ್ ಭಟ್ ತಿಳಿಸಿದಾಗ ಬಿಗ್ ಬಾಸ್​ ಮನೆಯ ಎಲ್ಲ ಸದಸ್ಯರೂ ಕಣ್ಣೀರು ಹಾಕಿದರು.

ಇದನ್ನೂ ಓದಿ: ಬಿಗ್ ಬಾಸ್ ತೊರೆಯಲು ಸುದೀಪ್ ನಿರ್ಧಾರ: ಇದೇ ಕೊನೆಯ ಸೀಸನ್; ಅಧಿಕೃತ ಘೋಷಣೆ

‘ಒಂದು ಕಡೆ ಕರ್ತವ್ಯ, ಇನ್ನೊಂದು ಕಡೆ ತಾಯಿ. ತುಂಬ ಆಸೆಪಟ್ಟಿದ್ದರು. ಒಂದು ವೇಳೆ ಕೊನೆಯ ಗಳಿಗೆಯಲ್ಲಿ ಮಗನ ಕೈ ಹಿಡಿದುಕೊಂಡು ಆ ತಾಯಿ ಏನು ಮಾತನಾಡುತ್ತಿತ್ತೋ ಗೊತ್ತಿಲ್ಲ. ಸುದೀಪ್ ಅವರು ತುಂಬ ಸೂಕ್ಷ್ಮ ವ್ಯಕ್ತಿ. ಅವರಿಗೆ ಬಹಳ ಎಮೋಷನ್ಸ್​ ಇದೆ. ಅವರ ದೊಡ್ಡತನವನ್ನು ಕಲ್ಪನೆ ಕೂಡ ಮಾಡೋಕೆ ಆಗಲ್ಲ. ಅಂದು ನಿಮ್ಮ ಗಲಾಟೆಗಳನ್ನೆಲ್ಲ ಅಟೆಂಡ್​​ ಮಾಡದೇ ಇದ್ದಿದ್ದರೆ ಕೊನೆಯ ಒಂದು ಅಥವಾ ಎರಡು ಗಂಟೆ ಅವರು ತಾಯಿಯ ಜೊತೆ ಇರಬಹುದಿತ್ತು’ ಎಂದರು ಯೋಗರಾಜ್ ಭಟ್​. ಈ ಎಲ್ಲ ವಿಷಯ ತಿಳಿದ ಬಳಿಕ ಉಗ್ರಂ ಮಂಜು, ಅನುಷಾ ರೈ, ಗೌತಮಿ ಜಾದವ್ ಸೇರಿದಂತೆ ಎಲ್ಲರೂ ಕಣ್ಣೀರು ಹಾಕಿದರು. ಸುದೀಪ್ ಅವರ ತಾಯಿಯ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬಿಗ್ ಬಾಸ್ ಮನೆಯಲ್ಲಿ ಮೌನಾಚರಣೆ ಮಾಡಲಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ