AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಿತ್ತೋದ್ ಕೆಲಸ ಮಾಡಿಲ್ಲ, ನನ್ನಿಂದ ಕೆಲವರ ಹೊಟ್ಟೆಪಾಡು ನಡೆಯುತ್ತಿದೆ’; ಸುದೀಪ್

ಬಿಗ್ ಬಾಸ್ ಕನ್ನಡದಲ್ಲಿ ಧ್ರುವಂತ್‌ಗೆ ಕಿಚ್ಚ ಸುದೀಪ್ ಅವರ 'ಕಿಚ್ಚನ ಚಪ್ಪಾಳೆ' ಗಿಲ್ಲಿ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಗಿಲ್ಲಿ ಹೆಚ್ಚು ಮನರಂಜನೆ ನೀಡಿದ್ದಾರೆ ಎಂದು ವಾದಿಸಿದ್ದಾರೆ. ಸುದೀಪ್ ಅಭಿಮಾನಿಗಳು, ಟ್ರೋಲ್‌ಗಳ ಕುರಿತು ಸುದೀಪ್ ಹಿಂದಿನ ಮಾತಿನ ವಿಡಿಯೋ ವೈರಲ್ ಮಾಡುವ ಮೂಲಕ ಅವರ ನಿಲುವನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆ ನಡೆಯುತ್ತಿದೆ.

‘ಕಿತ್ತೋದ್ ಕೆಲಸ ಮಾಡಿಲ್ಲ, ನನ್ನಿಂದ ಕೆಲವರ ಹೊಟ್ಟೆಪಾಡು ನಡೆಯುತ್ತಿದೆ’; ಸುದೀಪ್
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on:Jan 13, 2026 | 10:24 AM

Share

ಯಾವುದೇ ಕೆಲಸ ಮಾಡಿದರೂ ಅದಕ್ಕೆ ಪರ-ವಿರೋಧ ಚರ್ಚೆ ಇದ್ದೇ ಇರುತ್ತದೆ. ಕಿಚ್ಚ ಸುದೀಪ್ (Kichcha Sudeep) ವಿಷಯದಲ್ಲಿ ಅನೇಕ ಬಾರಿ ಹೀಗೆಯೇ ಆಗಿದೆ. ಅವರು ಈ ಸೀಸನ್ ಚಪ್ಪಾಳೆಯನ್ನು ಧ್ರುವಂತ್​​ಗೆ ನೀಡಿದ್ದರು. ಇದನ್ನು ಅನೇಕರು ಟೀಕೆ ಮಾಡಿದ್ದರು. ಆದರೆ, ಈ ಬೆನ್ನಲ್ಲೆ ಸುದೀಪ್ ಅಭಿಮಾನಿಗಳು ಸಿಟ್ಟಿಗೆದ್ದಿದ್ದಾರೆ. ಸುದೀಪ್ ಅವರು 10ನೇ ಸೀಸನ್​ ಅಲ್ಲಿ ಹೇಳಿದ ಮಾತನ್ನು ನೆನಪಿಸಿಕೊಂಡಿದ್ದಾರೆ. ಆ ವಿಡಿಯೋ ವೈರಲ್ ಮಾಡಲಾಗುತ್ತಿದೆ.

ಧ್ರುವಂತ್ ಅವರಿಗೆ ಇಡೀ ಸೀಸನ್​​ನ ಕಿಚ್ಚನ ಚಪ್ಪಾಳೆ ಸಿಕ್ಕಿದ್ದು ಅನೇಕರ ಕೋಪಕ್ಕೆ ಕಾರಣ ಆಗಿದೆ. ‘ಧ್ರುವಂತ್ ಸಾಕಷ್ಟು ಮನರಂಜನೆ ನೀಡಿದ್ದಾರೆ. ಅವರ ವಿಟಿ ವಿಶೇಷವಾಗಿ ಇರುತ್ತದೆ’ ಎಂದು ಸುದೀಪ್ ಬಿಗ್ ಬಾಸ್ ವೇದಿಕೆ ಮೇಲೆ ಹೇಳಿದ್ದರು. ಇದು ಗಿಲ್ಲಿ ಫ್ಯಾನ್ಸ್​​ನ ಕೆರಳಿಸಿದೆ. ‘ಸೀಸನ್ ಆರಂಭದಿಂದಲೂ ಗಿಲ್ಲಿ ಮನರಂಜನೆ ನೀಡುತ್ತಾ ಬಂದವರು. ಧ್ರುವಂತ್​ಗೆ ಹೋಲಿಸಿದರೆ ಗಿಲ್ಲಿ ತುಂಬಾನೇ ಬೆಟರ್’ ಎಂದು ಗಿಲ್ಲಿ ಫ್ಯಾನ್ಸ್ ವಾದ ಮುಂದಿಡುತ್ತಿದ್ದಾರೆ. ಸುದೀಪ್ ಅವರನ್ನು ಟೀಕಿಸುವ ಕೆಲಸ ಕೂಡ ಆಗಿದೆ. ಈ ವಿಷಯದಲ್ಲಿ ಸುದೀಪ್ ಅಭಿಮಾನಿಗಳು ಸುಮ್ಮನೆ ಕೂತಿಲ್ಲ. ಹಳೆಯ ವಿಡಿಯೋನ ವೈರಲ್ ಮಾಡುತ್ತಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 10’ರ ಸಂದರ್ಭದಲ್ಲಿ ಸುದೀಪ್ ಅವರನ್ನು ಸೋಶಿಯಲ್ ಮೀಡಿಯದಲ್ಲಿ ಟೀಕಿಸಲಾಯಿತು. ಈ ಟೀಕೆಯ ಸಂದರ್ಭದಲ್ಲಿ ಸುದೀಪ್ ಒಂದು ಮಾತನ್ನು ಹೇಳಿದ್ದರು. ‘ನನಗಾಗೇ ದುಡ್ಡು ಕೊಟ್ಟು ಸೃಷ್ಟಿಸಿದ ಟ್ರೋಲ್ ಪೇಜ್​​ಗಳಿವೆ. ನಾನು ಗುಡ್ ಮಾರ್ನಿಂಗ್ ಎಂದರೆ ನಿನ್ನ ಗುಡ್ ಮಾರ್ನಿಂಗ್ ಯಾರಿಗೆ ಬೇಕು ಎನ್ನುತ್ತಾರೆ. ಅವರು ನನ್ನ ಬಗ್ಗೆ ಮಾತನಾಡುತ್ತಾರೆ. ನಾನು ಮಜಾ ತೆಗೆದಿಕೊಳ್ಳುತ್ತೇನೆ. ಕಿತ್ತೋದ್ ಕೆಲಸ ನಾನಂತೂ ಮಾಡಿಲ್ಲ. ಅವರ ಟ್ರೋಲ್ ಬಗ್ಗೆ ನಂಗೆ ಬೇಸರ ಇಲ್ಲ. ಏಕೆಂದರೆ ನನ್ನಿಂದ ಅವರ ಹೊಟ್ಟೆ ಪಾಡು ನಡೆಯುತ್ತಿದೆ’ ಎಂದು ಕಿಚ್ಚ ಹೇಳಿದ್ದರು.

ಇದನ್ನೂ ಓದಿ: ಕಿಚ್ಚ ಸುದೀಪ್ ಮಾತಿಗೂ ಬೆಲೆ ಕೊಡದ ಗಿಲ್ಲಿ; ಅಸಮಾಧಾನ ಹೊರಹಾಕಿದ ಬಿಗ್ ಬಾಸ್

ಕಿಚ್ಚ ಸುದೀಪ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪರ-ವಿರೋಧ ಚರ್ಚೆ ನಡೆದಿದೆ. ಕೆಲವೊಮ್ಮೆ ಸೋಶಿಯಲ್ ಮೀಡಿಯಾದಲ್ಲಿ ಆಗುವ ಚರ್ಚೆ ಬಗ್ಗೆ ಸುದೀಪ್ ಅವರು ಮಾತನಾಡಿದ್ದು ಇದೆ. ಈ ವಾರ ಆ ಬಗ್ಗೆ ಮಾತನಾಡುತ್ತಾರಾ ಎಂಬ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:23 am, Tue, 13 January 26

ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ರೆಸಾರ್ಟ್​​ಗಾಗಿ ವೈದ್ಯನಿಂದ 2 ಎಕ್ರೆ ಪ್ರದೇಶದಲ್ಲಿದ್ದ ಮರಗಳ ಮಾರಣಹೋಮ!
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ಮಹಿಳೆ ಅಕ್ರಮ ಸಂಬಂಧ ಪ್ರಕರಣದ ಬಗ್ಗೆ ಬಿಗ್​​​ ಅಪ್ಡೇಟ್​​ ನೀಡಿದ ಪೊಲೀಸರು
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ