AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರ ಮಾಂಗಲ್ಯ ಮಾಡಿಕೊಂಡ ಸುಹಾನಾ; ನಿತೀನ್ ಜೊತೆ ಹೊಸ ಬಾಳಿಗೆ ಕಾಲಿಟ್ಟ ಸಿಂಗರ್

ಸರಿಗಮಪ ಖ್ಯಾತಿಯ ಸುಹಾನಾ ಸೈಯದ್ ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ವಿವಾಹಕ್ಕೆ ಎಲ್ಲರೂ ಅಭಿನಂದಿಸಿದ್ದಾರೆ. ‘ಶ್ರೀಕೃಷ್ಣನೇ ಶ್ರೀನಿವಾಸನೇ’ ಭಜನೆಯಿಂದ ಟೀಕೆಗೊಳಗಾಗಿದ್ದ ಸುಹಾನಾ, 16 ವರ್ಷಗಳ ಪ್ರೀತಿಯ ಬಳಿಕ ಈಗ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಸುಹಾನಾ ಅವರು ಮಂತ್ರ ಮಾಂಗಲ್ಯ ಮಾಡಿಕೊಂಡಿದ್ದಾರೆ ಅನ್ನೋದು ವಿಶೇಷ.

ಮಂತ್ರ ಮಾಂಗಲ್ಯ ಮಾಡಿಕೊಂಡ ಸುಹಾನಾ; ನಿತೀನ್ ಜೊತೆ ಹೊಸ ಬಾಳಿಗೆ ಕಾಲಿಟ್ಟ ಸಿಂಗರ್
ನಿತೀನ್-ಸುಹಾನಾ
ರಾಜೇಶ್ ದುಗ್ಗುಮನೆ
|

Updated on:Oct 17, 2025 | 7:43 PM

Share

ಜೀ ಕನ್ನಡದ ‘ಸರಿಗಮಪ’ ಶೋ ಮೂಲಕ ಫೇಮಸ್ ಆದ ಸುಹಾನಾ ಸೈಯದ್ ಅವರು ಈಗ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ರಂಗಭೂಮಿ ಕಲಾವಿದ ನಿತೀನ್ ಶಿವಾಂಶ್ ಜೊತೆ ಈ ಮದುವೆ ನೆರವೇರಿದೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಾ ಇದ್ದಾರೆ. ಅವರು ಮಂತ್ರ ಮಾಂಗಲ್ಯ ಮಾಡಿಕೊಂಡಿದ್ದಾರೆ.

ಸುಹಾನಾ ಅವರು ‘ಸರಿಗಮಪ’ ಶೋಗೆ ತೆರಳಿ ಮಿಂಚಿದರು. ಆ ಬಳಿಕ ‘ಶ್ರೀಕೃಷ್ಣನೇ ಶ್ರೀನಿವಾಸನೇ’ ಭಜನೆ ಹೇಳಿದ್ದರಿಂದ ಅವರು ಸಾಕಷ್ಟು ಟೀಕೆಗಳನ್ನು ಎದುರಿಸಿದರು. ಮುಸ್ಲಿಂ ಧರ್ಮದ ಅನೇಕರು ಅವರ ಈ ಕೆಲಸವನ್ನು ಖಂಡಿಸಿದರು. ಈಗ ಅವರು ಗೆಳೆಯ ನಿತೀನ್ ಜೊತೆ ವಿವಾಹ ಆಗಿದ್ದಾರೆ. ಅವರ ಮಂತ್ರ ಮಾಂಗಲ್ಯ ಮಾಡಿಸಿಕೊಳ್ಳುತ್ತಿರುವ ವಿಡಿಯೋ ಗಮನ ಸೆಳೆದಿದೆ.

ಇದನ್ನೂ ಓದಿ
Image
ಒಂದೇ ದಿನ ಒಟಿಟಿಗೆ ಕಾಲಿಟ್ಟ ಕನ್ನಡದ ಎರಡು ಹಿಟ್ ಚಿತ್ರಗಳು; ಮಿಸ್ ಮಾಡಬೇಡಿ
Image
ಅಶ್ವಿನಿಯ ಚಮಚ ಆದ ಜಾನ್ವಿ; ಹೇಳಿದಂತೆ ಕುಣೀತಾರೆ ತಕತೈ, ತಕತೈ
Image
ರಕ್ಷಿತಾ ಗುಂಡಿಗೆ ಮೆಚ್ಚಲೇಬೇಕು; ಅಶ್ವಿನಿ-ಜಾನ್ವಿ ಕೂಗಾಡಿದರೂ ಜಗಲ್ಲೂ ಇಲ್ಲ
Image
ಆಲಿಯಾ ಹೊಸ ಮನೆಯಲ್ಲಿ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿದ ಗಣಪತಿ ಮೂರ್ತಿ

ಸುಹಾನಾ ಹಾಗೂ ನಿತೀನ್ 16 ವರ್ಷಗಳ ಹಿಂದೆ ಪರಿಚಯ ಆದರು. ಆ ಬಳಿಕ ಇವರ ಮಧ್ಯೆ ಪ್ರೀತಿ ಮೂಡಿತು. ಈ ಮೊದಲು ಸೋಶೀಯಲ್ ಮೀಡಿಯಾದಲ್ಲಿ ಸುಹಾನಾ ಈ ಬಗ್ಗೆ ಮಾಹಿತಿ ನೀಡಿದ್ದರು. ‘ಪ್ರತಿ ಜೀವವೂ ಪ್ರೀತಿಗಾಗಿ ಹುಡುಕಾಡುತ್ತದೆ. ಪ್ರತಿ ಹೃದಯವು ಪ್ರೀತಿಗಾಗಿ ಹಾತೊರೆಯುತ್ತದೆ. ಪ್ರೀತಿಗೆ ಯಾವುದೇ ಮಿತಿಯಿಲ್ಲ. ಅದು ದೂರ, ಅನುಮಾನಗಳು ಮತ್ತು ಭಯಗಳನ್ನು ಮೀರಿದ ಪ್ರಯಾಣ. ಆ ಅಪರಿಮಿತ ಪ್ರೀತಿಗೆ ನಾವು ಸಾಕ್ಷಿಗಳಾಗಿ ನಿಲ್ಲುತ್ತೇವೆ. ಇಂದು, ನಾವು ನಮ್ಮ ರಹಸ್ಯವನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳುತ್ತಾ ಇದ್ದೇವೆ. ನಿಮ್ಮ ಆಶೀರ್ವಾದವನ್ನು ಕೋರುತ್ತೇವೆ’ ಎಂದು ಸುಹಾನಾ ಬರೆದುಕೊಂಡಿದ್ದರು.

ಇದನ್ನೂ ಓದಿ: ಶಾರುಖ್ ಖಾನ್ ಪುತ್ರಿ ಸುಹಾನಾ ಧರಿಸಿರುವ ಈ ಉಡುಗೆಯ ಬೆಲೆ ಎಷ್ಟು ಲಕ್ಷ ಗೊತ್ತೆ?

ಸುಹಾನಾ ಹಾಗೂ ನಿತೀನ್ ದಂಪತಿಗೆ ಎಲ್ಲರೂ ಶುಭಕೋರುತ್ತಿದ್ದಾರೆ. ಅವರ ದಾಂಪತ್ಯ ಜೀವನ ಸುಖಕರವಾಗಿರಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:49 pm, Fri, 17 October 25

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ