AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರ ಮಾಂಗಲ್ಯ ಮಾಡಿಕೊಂಡ ಸುಹಾನಾ; ನಿತೀನ್ ಜೊತೆ ಹೊಸ ಬಾಳಿಗೆ ಕಾಲಿಟ್ಟ ಸಿಂಗರ್

ಸರಿಗಮಪ ಖ್ಯಾತಿಯ ಸುಹಾನಾ ಸೈಯದ್ ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ವಿವಾಹಕ್ಕೆ ಎಲ್ಲರೂ ಅಭಿನಂದಿಸಿದ್ದಾರೆ. ‘ಶ್ರೀಕೃಷ್ಣನೇ ಶ್ರೀನಿವಾಸನೇ’ ಭಜನೆಯಿಂದ ಟೀಕೆಗೊಳಗಾಗಿದ್ದ ಸುಹಾನಾ, 16 ವರ್ಷಗಳ ಪ್ರೀತಿಯ ಬಳಿಕ ಈಗ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಸುಹಾನಾ ಅವರು ಮಂತ್ರ ಮಾಂಗಲ್ಯ ಮಾಡಿಕೊಂಡಿದ್ದಾರೆ ಅನ್ನೋದು ವಿಶೇಷ.

ಮಂತ್ರ ಮಾಂಗಲ್ಯ ಮಾಡಿಕೊಂಡ ಸುಹಾನಾ; ನಿತೀನ್ ಜೊತೆ ಹೊಸ ಬಾಳಿಗೆ ಕಾಲಿಟ್ಟ ಸಿಂಗರ್
ನಿತೀನ್-ಸುಹಾನಾ
ರಾಜೇಶ್ ದುಗ್ಗುಮನೆ
|

Updated on:Oct 17, 2025 | 7:43 PM

Share

ಜೀ ಕನ್ನಡದ ‘ಸರಿಗಮಪ’ ಶೋ ಮೂಲಕ ಫೇಮಸ್ ಆದ ಸುಹಾನಾ ಸೈಯದ್ ಅವರು ಈಗ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ರಂಗಭೂಮಿ ಕಲಾವಿದ ನಿತೀನ್ ಶಿವಾಂಶ್ ಜೊತೆ ಈ ಮದುವೆ ನೆರವೇರಿದೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಾ ಇದ್ದಾರೆ. ಅವರು ಮಂತ್ರ ಮಾಂಗಲ್ಯ ಮಾಡಿಕೊಂಡಿದ್ದಾರೆ.

ಸುಹಾನಾ ಅವರು ‘ಸರಿಗಮಪ’ ಶೋಗೆ ತೆರಳಿ ಮಿಂಚಿದರು. ಆ ಬಳಿಕ ‘ಶ್ರೀಕೃಷ್ಣನೇ ಶ್ರೀನಿವಾಸನೇ’ ಭಜನೆ ಹೇಳಿದ್ದರಿಂದ ಅವರು ಸಾಕಷ್ಟು ಟೀಕೆಗಳನ್ನು ಎದುರಿಸಿದರು. ಮುಸ್ಲಿಂ ಧರ್ಮದ ಅನೇಕರು ಅವರ ಈ ಕೆಲಸವನ್ನು ಖಂಡಿಸಿದರು. ಈಗ ಅವರು ಗೆಳೆಯ ನಿತೀನ್ ಜೊತೆ ವಿವಾಹ ಆಗಿದ್ದಾರೆ. ಅವರ ಮಂತ್ರ ಮಾಂಗಲ್ಯ ಮಾಡಿಸಿಕೊಳ್ಳುತ್ತಿರುವ ವಿಡಿಯೋ ಗಮನ ಸೆಳೆದಿದೆ.

ಇದನ್ನೂ ಓದಿ
Image
ಒಂದೇ ದಿನ ಒಟಿಟಿಗೆ ಕಾಲಿಟ್ಟ ಕನ್ನಡದ ಎರಡು ಹಿಟ್ ಚಿತ್ರಗಳು; ಮಿಸ್ ಮಾಡಬೇಡಿ
Image
ಅಶ್ವಿನಿಯ ಚಮಚ ಆದ ಜಾನ್ವಿ; ಹೇಳಿದಂತೆ ಕುಣೀತಾರೆ ತಕತೈ, ತಕತೈ
Image
ರಕ್ಷಿತಾ ಗುಂಡಿಗೆ ಮೆಚ್ಚಲೇಬೇಕು; ಅಶ್ವಿನಿ-ಜಾನ್ವಿ ಕೂಗಾಡಿದರೂ ಜಗಲ್ಲೂ ಇಲ್ಲ
Image
ಆಲಿಯಾ ಹೊಸ ಮನೆಯಲ್ಲಿ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿದ ಗಣಪತಿ ಮೂರ್ತಿ

ಸುಹಾನಾ ಹಾಗೂ ನಿತೀನ್ 16 ವರ್ಷಗಳ ಹಿಂದೆ ಪರಿಚಯ ಆದರು. ಆ ಬಳಿಕ ಇವರ ಮಧ್ಯೆ ಪ್ರೀತಿ ಮೂಡಿತು. ಈ ಮೊದಲು ಸೋಶೀಯಲ್ ಮೀಡಿಯಾದಲ್ಲಿ ಸುಹಾನಾ ಈ ಬಗ್ಗೆ ಮಾಹಿತಿ ನೀಡಿದ್ದರು. ‘ಪ್ರತಿ ಜೀವವೂ ಪ್ರೀತಿಗಾಗಿ ಹುಡುಕಾಡುತ್ತದೆ. ಪ್ರತಿ ಹೃದಯವು ಪ್ರೀತಿಗಾಗಿ ಹಾತೊರೆಯುತ್ತದೆ. ಪ್ರೀತಿಗೆ ಯಾವುದೇ ಮಿತಿಯಿಲ್ಲ. ಅದು ದೂರ, ಅನುಮಾನಗಳು ಮತ್ತು ಭಯಗಳನ್ನು ಮೀರಿದ ಪ್ರಯಾಣ. ಆ ಅಪರಿಮಿತ ಪ್ರೀತಿಗೆ ನಾವು ಸಾಕ್ಷಿಗಳಾಗಿ ನಿಲ್ಲುತ್ತೇವೆ. ಇಂದು, ನಾವು ನಮ್ಮ ರಹಸ್ಯವನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳುತ್ತಾ ಇದ್ದೇವೆ. ನಿಮ್ಮ ಆಶೀರ್ವಾದವನ್ನು ಕೋರುತ್ತೇವೆ’ ಎಂದು ಸುಹಾನಾ ಬರೆದುಕೊಂಡಿದ್ದರು.

ಇದನ್ನೂ ಓದಿ: ಶಾರುಖ್ ಖಾನ್ ಪುತ್ರಿ ಸುಹಾನಾ ಧರಿಸಿರುವ ಈ ಉಡುಗೆಯ ಬೆಲೆ ಎಷ್ಟು ಲಕ್ಷ ಗೊತ್ತೆ?

ಸುಹಾನಾ ಹಾಗೂ ನಿತೀನ್ ದಂಪತಿಗೆ ಎಲ್ಲರೂ ಶುಭಕೋರುತ್ತಿದ್ದಾರೆ. ಅವರ ದಾಂಪತ್ಯ ಜೀವನ ಸುಖಕರವಾಗಿರಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:49 pm, Fri, 17 October 25

Follow Us
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು
ನೇಪಾಳದ ಪ್ರವಾಹದಿಂದ ಪಾರಾದ ಕನ್ನಡಗನ ಜೊತೆ ಸಿಎಂ ವಿಡಿಯೋ ಕಾಲ್, ಹೇಳಿದ್ದೇನು