
ಜೀ ಕನ್ನಡದ ‘ಸರಿಗಮಪ’ ಶೋ ಮೂಲಕ ಫೇಮಸ್ ಆದ ಸುಹಾನಾ ಸೈಯದ್ ಅವರು ಈಗ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ರಂಗಭೂಮಿ ಕಲಾವಿದ ನಿತೀನ್ ಶಿವಾಂಶ್ ಜೊತೆ ಈ ಮದುವೆ ನೆರವೇರಿದೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಾ ಇದ್ದಾರೆ. ಅವರು ಮಂತ್ರ ಮಾಂಗಲ್ಯ ಮಾಡಿಕೊಂಡಿದ್ದಾರೆ.
ಸುಹಾನಾ ಅವರು ‘ಸರಿಗಮಪ’ ಶೋಗೆ ತೆರಳಿ ಮಿಂಚಿದರು. ಆ ಬಳಿಕ ‘ಶ್ರೀಕೃಷ್ಣನೇ ಶ್ರೀನಿವಾಸನೇ’ ಭಜನೆ ಹೇಳಿದ್ದರಿಂದ ಅವರು ಸಾಕಷ್ಟು ಟೀಕೆಗಳನ್ನು ಎದುರಿಸಿದರು. ಮುಸ್ಲಿಂ ಧರ್ಮದ ಅನೇಕರು ಅವರ ಈ ಕೆಲಸವನ್ನು ಖಂಡಿಸಿದರು. ಈಗ ಅವರು ಗೆಳೆಯ ನಿತೀನ್ ಜೊತೆ ವಿವಾಹ ಆಗಿದ್ದಾರೆ. ಅವರ ಮಂತ್ರ ಮಾಂಗಲ್ಯ ಮಾಡಿಸಿಕೊಳ್ಳುತ್ತಿರುವ ವಿಡಿಯೋ ಗಮನ ಸೆಳೆದಿದೆ.
ಸುಹಾನಾ ಹಾಗೂ ನಿತೀನ್ 16 ವರ್ಷಗಳ ಹಿಂದೆ ಪರಿಚಯ ಆದರು. ಆ ಬಳಿಕ ಇವರ ಮಧ್ಯೆ ಪ್ರೀತಿ ಮೂಡಿತು. ಈ ಮೊದಲು ಸೋಶೀಯಲ್ ಮೀಡಿಯಾದಲ್ಲಿ ಸುಹಾನಾ ಈ ಬಗ್ಗೆ ಮಾಹಿತಿ ನೀಡಿದ್ದರು. ‘ಪ್ರತಿ ಜೀವವೂ ಪ್ರೀತಿಗಾಗಿ ಹುಡುಕಾಡುತ್ತದೆ. ಪ್ರತಿ ಹೃದಯವು ಪ್ರೀತಿಗಾಗಿ ಹಾತೊರೆಯುತ್ತದೆ. ಪ್ರೀತಿಗೆ ಯಾವುದೇ ಮಿತಿಯಿಲ್ಲ. ಅದು ದೂರ, ಅನುಮಾನಗಳು ಮತ್ತು ಭಯಗಳನ್ನು ಮೀರಿದ ಪ್ರಯಾಣ. ಆ ಅಪರಿಮಿತ ಪ್ರೀತಿಗೆ ನಾವು ಸಾಕ್ಷಿಗಳಾಗಿ ನಿಲ್ಲುತ್ತೇವೆ. ಇಂದು, ನಾವು ನಮ್ಮ ರಹಸ್ಯವನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳುತ್ತಾ ಇದ್ದೇವೆ. ನಿಮ್ಮ ಆಶೀರ್ವಾದವನ್ನು ಕೋರುತ್ತೇವೆ’ ಎಂದು ಸುಹಾನಾ ಬರೆದುಕೊಂಡಿದ್ದರು.
ಇದನ್ನೂ ಓದಿ: ಶಾರುಖ್ ಖಾನ್ ಪುತ್ರಿ ಸುಹಾನಾ ಧರಿಸಿರುವ ಈ ಉಡುಗೆಯ ಬೆಲೆ ಎಷ್ಟು ಲಕ್ಷ ಗೊತ್ತೆ?
ಸುಹಾನಾ ಹಾಗೂ ನಿತೀನ್ ದಂಪತಿಗೆ ಎಲ್ಲರೂ ಶುಭಕೋರುತ್ತಿದ್ದಾರೆ. ಅವರ ದಾಂಪತ್ಯ ಜೀವನ ಸುಖಕರವಾಗಿರಲಿ ಎಂದು ಎಲ್ಲರೂ ಹಾರೈಸುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 2:49 pm, Fri, 17 October 25