AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲೇ ಕಳಸ್ರಯ್ಯ ಇವಳನ್ನ’; ಸುಕೃತಾ ಮೇಲೆ ರವಿಚಂದ್ರನ್ ಸಿಟ್ಟಾಗಿದ್ದೇಕೆ?

‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2 ರಲ್ಲಿ ಸುಕೃತಾ ಅವರ ಆಧುನಿಕ ಸಂಬಂಧಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಅವರು ‘ಪೂಕಿ’ ಎಂಬ ಪದ ಬಳಸಿದ್ದಕ್ಕೆ ರವಿಚಂದ್ರನ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುಕೃತಾ ಅವರ ಹೇಳಿಕೆಗಳು ಮತ್ತು ರವಿಚಂದ್ರನ್ ಅವರ ಪ್ರತಿಕ್ರಿಯೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

‘ಲೇ ಕಳಸ್ರಯ್ಯ ಇವಳನ್ನ’; ಸುಕೃತಾ ಮೇಲೆ ರವಿಚಂದ್ರನ್ ಸಿಟ್ಟಾಗಿದ್ದೇಕೆ?
ಸುಕೃತಾ-ರವಿಚಂದ್ರನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Apr 01, 2025 | 7:49 AM

Share

ನಟಿ ಸುಕೃತಾ ನಾಗ್ (Sukrutha Nag) ಅವರು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದವರು. ಅವರಿಗೆ ಕಿರುತೆರೆಯಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರು ಮೊದಲು ನಟಿಸಿದ್ದು ‘ಅಗ್ನಿಸಾಕ್ಷಿ’ ಧಾರಾವಾಹಿಯಲ್ಲಿ. ಆ ಬಳಿಕ ಅವರು ‘ಲಕ್ಷಣ’ ಧಾರಾವಾಹಿಯಲ್ಲಿ ನಟಿಸಿದರು. ಈಗ ಸುಕೃತಾ ಅವರು ರವಿಚಂದ್ರನ್, ರಚಿತಾ ರಾಮ್ ಜಡ್ಜ್ ಆಗಿರೋ ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ನಲ್ಲಿ ಸ್ಪರ್ಧಿಸಿದ್ದಾರೆ. ಅವರ ಮಾತುಗಳನ್ನು ಕೇಳಿ ರವಿಚಂದ್ರನ್ ಅವರು ಹುಸಿಗೋಪ ಮಾಡಿಕೊಂಡಿದ್ದಾರೆ. ಆ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸುಕೃತಾ ಅವರು ಜೆನ್​-ಜಿ ಅಲ್ಲ. ಆದಾಗ್ಯೂ ಜೆನ್​-ಜಿ ಗಳಿಗೆ ಇರೋ ಜ್ಞಾನ ಅವರಲ್ಲಿ ಇದೆ. ಅವರು ಆಧುನಿಕ ರಿಲೇಶನ್​ಶಿಪ್​ಗಳ ಬಗ್ಗೆ ಸರಿಯಾಗಿ ತಿಳಿದುಕೊಂಡಿದ್ದಾರೆ. ಇದನ್ನು ಅವರು ‘ಭರ್ಜರಿ ಬ್ಯಾಚುಲರ್ಸ್ 2’ ವೇದಿಕೆ ಮೇಲೆ ಹೇಳಿಕೊಳ್ಳುತ್ತಿದ್ದಾರೆ. ಈ ಮೊದಲು ಸಿಚ್ಯುವೇಶನ್​ಶಿಪ್, ಬೆಂಚಿಂಗ್ ರೀತಿಯ ರಿಲೇಶನ್​ಶಿಪ್​ಗಳ ಅರ್ಥವನ್ನು ಹೇಳಿ ಸುಕೃತಾ ಅವರು ರವಿಚಂದ್ರನ್ ಅವರ ತಲೆ ತಿಂದಿದ್ದರು. ಈಗ ಪೂಕಿ ಮ್ಯಾನ್ ಎಂದು ಹೇಳಿ ಅದರ ವಿವರಣೆ ನೀಡಿದ್ದಾರೆ.

ಇದನ್ನೂ ಓದಿ
Image
‘ನಿಂದು ಒಂದೇ ವರ್ಷಕ್ಕೆ ಡಿವೋರ್ಸ್ ಕಣೋ’; ವಿವಾಹದ ಬಳಿಕ ಅಜಯ್ ಕೇಳಿದ ಮಾತಿದು
Image
ಸಿಕಂದರ್ ಗಳಿಕೆಯಲ್ಲಿ ಏರಿಕೆ; ಆದರೂ ನಿಂತಿಲ್ಲ ಸಲ್ಮಾನ್ ಖಾನ್ ಸಿನಿಮಾ ಪರದಾಟ
Image
ಸಿತಾರಾ ಘಟ್ಟಮನೇನಿ ಸಿನಿಮಾ ರಂಗಕ್ಕೆ ಕಾಲಿಡೋದು ಯಾವಾಗ? ಉತ್ತರಿಸಿದ ತಾಯಿ
Image
ಚಿತ್ರರಂಗದ ಕರಾಳ ಮುಖ ತೆರೆದಿಟ್ಟ ಅಜಯ್ ರಾವ್; ಎದುರಿಸುವ ಸಮಸ್ಯೆಗಳೇನು?

ಬುಲೆಟ್ ಪ್ರಕಾಶ್ ಮಗ ರಕ್ಷಕ್ ಬುಲೆಟ್​ನ ಪೂಕಿ ಗಯ್ ಎಂದು ಕರೆದಿದ್ದಾರೆ ಸುಕೃತಾ. ಪೂಕಿ ಎಂಬ ಶಬ್ದವನ್ನೇ ಕೇಳದಿದ್ದ ರವಿಚಂದ್ರನ್, ‘ಇದೇನೋ ಪೂಕಿ ಅನ್ನೋ ಶಬ್ದನ ತೆಗೆದುಕೊಂಡು ಬಂದಳು’ ಎಂದು ಹೇಳಿದರು. ‘ಪೂಕಿ ಎಲ್ಲರಿಗೂ ಇಷ್ಟ’ ಎಂದು ಸುಕೃತಾ ವಿವರಿಸಿದರು.

View this post on Instagram

A post shared by @trending__reels__65

‘ಪೂಕಿ ವರ್ಷನ್ ನನಗೆ ಬೇಡ. ಇರೋ ವರ್ಷನ್ ಸಾಕು. ನಿನ್ನ ವರ್ಷನ್​ಗೆ ಬರೋದಿಲ್ಲ. ಲೇ ಕಳಸ್ರಯ್ಯ ಇವಳನ್ನ. ಇಲ್ದಿರೋ ವರ್ಷನ್ ಮಾಡ್ತಾಳೆ. ಜಂಟಲ್​ಮೆನ್ ಎಂದು ಹೇಳಬಹುದಲ್ಲ. ಪೂಕಿ ವರ್ಷನ್ ಅಂದ್ರೆ ಏನು’ ಎಂದು ತಲೆಕೆರೆದುಕೊಂಡರು ರವಿಚಂದ್ರನ್ ಅವರು. ಕ್ಯೂಟ್ ಆಗಿರುವ ವಿಚಾರಗಳನ್ನು ವಿವರಿಸಲು ಬಳಕೆ ಮಾಡುವ ಶಬ್ದವೇ ಪೂಕಿ. ಈ ಮೂಲಕ ರಕ್ಷಕ್ ಅವರು ಸುಂದರವಾಗಿದ್ದಾರೆ ಎಂಬುದು ಸುಕೃತಾ ಅಭಿಪ್ರಾಯ.

ಇದನ್ನೂ ಓದಿ: ರಿಯಾಲಿಟಿ ಶೋ ವಿವಾದ: ಚಾಮುಂಡೇಶ್ವರಿ ಭಕ್ತರಿಗೆ ಕ್ಷಮೆ ಕೇಳಿದ ರಕ್ಷಕ್ ಬುಲೆಟ್

ಇತ್ತೀಚೆಗೆ ರಕ್ಷಕ್ ಬುಲೆಟ್ ವಿವಾದ ಮಾಡಿಕೊಂಡಿದ್ದರು. ಅವರು ಚಾಮುಂಡೇಶ್ವರಿಗೆ ಅವಮಾನ ಮಾಡಿದ ಆರೋಪವನ್ನು ಎದುರಿಸಿದ್ದರು. ಆ ಬಳಿಕ ಅವರು ಕ್ಷಮೆ ಕೇಳಿ ಈ ಪ್ರಕರಣಕ್ಕೆ ಅಂತ್ಯ ಹಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು