AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಗೆಲ್ಲೋದು ಗಿಲ್ಲಿ ನಟ: ಖಚಿತವಾಗಿ ಹೇಳಿದ ಸೂರಜ್ ಸಿಂಗ್

ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಸೂರಜ್ ಸಿಂಗ್ ಅವರು ಈ ವಾರ ಎಲಿಮಿನೇಟ್ ಆದರು. ಟಾಪ್ 5 ಸ್ಪರ್ಧಿಗಳು ಯಾರು? ಬಿಗ್ ಬಾಸ್ ಟ್ರೋಫಿ ಗೆಲ್ಲುವುದು ಯಾರು ಎಂಬ ಪ್ರಶ್ನೆಗೆ ಸೂರಜ್ ಅವರು ಉತ್ತರ ನೀಡಿದ್ದಾರೆ. ಎಲ್ಲರ ಅಭಿಪ್ರಾಯದಿಂದ ಗಿಲ್ಲಿಯೇ ಬಿಗ್ ಬಾಸ್ ಗೆಲ್ಲುವುದು ಎಂಬ ನಂಚಿಕೆ ಸೂರಜ್ ಸಿಂಗ್ ಅವರಿಗೆ ಇದೆ.

ಬಿಗ್ ಬಾಸ್ ಗೆಲ್ಲೋದು ಗಿಲ್ಲಿ ನಟ: ಖಚಿತವಾಗಿ ಹೇಳಿದ ಸೂರಜ್ ಸಿಂಗ್
Gilli Nata, Suraj Singh
ಮದನ್​ ಕುಮಾರ್​
|

Updated on: Dec 29, 2025 | 3:32 PM

Share

ಇನ್ನೇನು ಕೆಲವೇ ದಿನಗಳಲ್ಲಿ ‘ಬಿಗ್​ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಫಿನಾಲೆ ಬರಲಿದೆ. ಈಗಾಗಲೇ ಆಟ ಕೊನೆಯ ಹಂತವನ್ನು ತಲುಪುತ್ತಿದೆ. 14ನೇ ವಾರಕ್ಕೆ ಸ್ಪರ್ಧಿಗಳು ಕಾಲಿಟ್ಟಿದ್ದಾರೆ. 13ನೇ ವಾರದಲ್ಲಿ ಸೂರಜ್ ಸಿಂಗ್ (Suraj Singh) ಮತ್ತು ಮಾಳು ನಿಪನಾಳ ಅವರು ಎಲಿಮಿನೇಟ್ ಆಗಿದ್ದಾರೆ. ಡಬಲ್ ಎಮಿಲಿನೇಷನ್​ನಿಂದ ಬಿಗ್ ಬಾಸ್ ಮನೆಗೆ ಶಾಕ್ ಆಗಿದೆ. ಸ್ಪಂದನಾ ಔಟ್ ಆಗಬಹುದು ಎಂದು ಹಲವರು ಭಾವಿಸಿದ್ದರು. ಆದರೆ ಸೂರಜ್ ಔಟ್ ಆದರು. ಎಲಿಮಿನೇಟ್ ಆಗಿ ಹೊರಬಂದ ಸೂರಜ್ ಸಿಂಗ್ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಗಿಲ್ಲಿ ನಟ (Gilli Nata) ಬಿಗ್ ಬಾಸ್ ವಿನ್ ಆಗೋದು ಖಚಿತ ಎಂದು ಸೂರಜ್ ಹೇಳಿದ್ದಾರೆ.

‘ಟಾಪ್ 5 ಸ್ಥಾನದಲ್ಲಿ ಯಾರೆಲ್ಲ ಇರುತ್ತಾರೆ ಎಂಬುದನ್ನು ಮೊದಲು ಹೇಳಿಬಿಡುತ್ತೇನೆ. ಗಿಲ್ಲಿ, ಅಶ್ವಿನಿ ಗೌಡ, ರಾಶಿಕಾ ಶೆಟ್ಟಿ, ಮ್ಯೂಟೆಂಟ್ ರಘು, ರಕ್ಷಿತಾ ಶೆಟ್ಟಿ ಅವರು ಟಾಪ್ 5 ಸ್ಥಾನದಲ್ಲಿ ಇರುತ್ತಾರೆ. ಯಾರು ಗೆಲ್ಲುತ್ತಾರೆ ಅಂತ ಕೇಳಿದರೆ ಶೇಕಡ 100ರಷ್ಟು ಗಿಲ್ಲಿಯೇ ಗೆಲ್ಲುವುದು. ಯಾರು ಗೆಲ್ಲಬೇಕು ಎಂಬುದಕ್ಕೆ 2 ಹೆಸರು ಇದೆ- ಅಶ್ವಿನಿ ಗೌಡ ಮತ್ತು ರಾಶಿಕಾ’ ಎಂದು ಸೂರಜ್ ಸಿಂಗ್ ಉತ್ತರಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ರಘು ಅವರು ಸೈಲೆಂಟ್ ಆಗಿದ್ದಾರೆ. ಅದಕ್ಕೆ ಕಾರಣ ಏನು ಎಂಬುದನ್ನು ಕೂಡ ಸೂರಜ್ ಸಿಂಗ್ ವಿವರಿಸಿದ್ದಾರೆ. ‘ವಾರಾಂತ್ಯದಲ್ಲಿ ಕಿಚ್ಚ ಸುದೀಪ್ ಅವರು ಒಂದು ಹಿಂಟ್ ನೀಡುತ್ತಾರೆ. ಅದನ್ನು ರಘು ಅವರು ಡಿಕೋಡ್ ಮಾಡಲು ಶುರು ಮಾಡುತ್ತಾರೆ. ಎಲ್ಲರ ಬಳಿ ಸಲಹೆ ಕೇಳುತ್ತಾರೆ. ಆ ಯೋಚನೆ ಮಾಡುತ್ತಾ ಮಾಡುತ್ತಾ ಸೈಲೆಂಟ್ ಆಗುತ್ತಾರೆ. ಚರ್ಚೆ ಮಾಡಿದಾಗಲೇ ಅಭಿಪ್ರಾಯಗಳು ಜಾಸ್ತಿ ಬರುವುದು’ ಎಂದಿದ್ದಾರೆ ಸೂರಜ್.

ಗಿಲ್ಲಿ ನಟ ಅವರು ಮೊದಲ ದಿನದಿಂದಲೂ ವೀಕ್ಷಕರನ್ನು ರಂಜಿಸುತ್ತಿದ್ದಾರೆ. ಅವರ ಕಾಮಿಡಿ ಎಲ್ಲರಿಗೂ ಇಷ್ಟ ಆಗುತ್ತಿದೆ. ಮೊದಲೆಲ್ಲ ಗಿಲ್ಲಿ ವಿರುದ್​ಧ ತಿರುಗಿ ಬೀಳುತ್ತಿದ್ದ ಸ್ಪರ್ಧಿಗಳು ಕೂಡ ಈಗ ಗಿಲ್ಲಿಯ ಕಾಮಿಡಿಯನ್ನು ಎಂಜಾಯ್ ಮಾಡಲು ಆರಂಭಿಸಿದ್ದಾರೆ. ಸ್ಪರ್ಧಿಗಳ ಕುಟುಂಬದವರಿಗೂ ಗಿಲ್ಲಿಯ ಆಟ ಇಷ್ಟ ಆಗಿದೆ. ಹಾಗಾಗಿ ಗಿಲ್ಲಿ ಗೆಲ್ಲುವುದು ಖಚಿತ ಎಂದು ಎಲ್ಲರೂ ಮಾತನಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಕಾವ್ಯಾ ಅಪ್ಪ-ಅಮ್ಮನಿಗೂ ಇಷ್ಟವಾದ ಗಿಲ್ಲಿ ನಟ; ಸಿಕ್ತು ವಿಶೇಷ ಉಡುಗೊರೆ

ಕಾವ್ಯಾ ಶೈವ ಅವರು ಗಿಲ್ಲಿ ಜೊತೆ ಕ್ಲೋಸ್ ಆಗಿದ್ದಾರೆ. ಹಾಗಾಗಿ ವೀಕ್ಷಕರ ವೋಟ್ ಹಂಚಿಹೋಗಬಹುದು ಎಂಬ ಅಭಿಪ್ರಾಯ ಹಲವರಿಗೆ ಇತ್ತು. ಆದರೆ ಕಳೆದ ವಾರ ಕಾವ್ಯಾ ಫ್ಯಾಮಿಲಿಯವರು ಬಿಗ್ ಬಾಸ್ ಮನೆಯೊಳಗೆ ಬಂದು ಗಿಲ್ಲಿ ಬಗ್ಗೆ ಮಾತನಾಡಿದ್ದರಿಂದ ಕಾವ್ಯಾಗೆ ನೆಗೆಟಿವ್ ಆಗಿದೆ. ಅದರಿಂದ ಗಿಲ್ಲಿಗೆ ಪ್ಲಸ್ ಆಗುವ ಸಾಧ್ಯತೆ ಹೆಚ್ಚಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್