AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rani Abbakka: ದೂರದರ್ಶನದಲ್ಲಿ ನೋಡಿ ಉಲ್ಲಾಳದ ರಾಣಿ ಅಬ್ಬಕ್ಕನ ಸಾಹಸದ ಕಥೆ; ಭಾನುವಾರ ರಾತ್ರಿ 9ಕ್ಕೆ ‘ಸ್ವರಾಜ್​’

DD National | Swaraj: ಪ್ರತಿ ಭಾನುವಾರ ರಾತ್ರಿ 9ರಿಂದ 10 ಗಂಟೆಯವರೆಗೆ ಈ ಧಾರಾವಾಹಿ ದೂರದರ್ಶನದಲ್ಲಿ ಪ್ರಸಾರ ಕಾಣಲಿದೆ. ಈ ವಾರ ರಾಣಿ ಅಬ್ಬಕ್ಕನ ಸಂಚಿಕೆ ಬಿತ್ತರ ಆಗಲಿದೆ.

Rani Abbakka: ದೂರದರ್ಶನದಲ್ಲಿ ನೋಡಿ ಉಲ್ಲಾಳದ ರಾಣಿ ಅಬ್ಬಕ್ಕನ ಸಾಹಸದ ಕಥೆ; ಭಾನುವಾರ ರಾತ್ರಿ 9ಕ್ಕೆ ‘ಸ್ವರಾಜ್​’
‘ಸ್ವರಾಜ್’​ ಸೀರಿಯಲ್​ ಪೋಸ್ಟರ್​
TV9 Web
| Updated By: ಮದನ್​ ಕುಮಾರ್​|

Updated on: Aug 26, 2022 | 11:22 AM

Share

ಭಾರತಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷ ಕಳೆದಿದೆ. ಈ ವರ್ಷ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಆಚರಿಸಲಾಗಿದೆ. ಎಲ್ಲೆಲ್ಲೂ ತ್ರಿವರ್ಣ ಧ್ವಜ ರಾರಾಜಿಸಿದೆ. ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಯುವಂತಿಲ್ಲ. ಅವರ ತ್ಯಾಗ, ಬಲಿದಾನಗಳಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಭಾರತಕ್ಕೆ ಸ್ವಾತಂತ್ರ್ಯ ಸಿಗಲು ಹೋರಾಟ ನಡೆಸಿದ ಎಲ್ಲ ಮಹಾನ್​ ವೀರರ ಬಗ್ಗೆ ‘ದೂರದರ್ಶನ’ (Doordarshan) ವಾಹಿನಿ ಸೀರಿಯಲ್​ ಪ್ರಸಾರ ಮಾಡುತ್ತಿದೆ. ಇದಕ್ಕೆ ‘ಸ್ವರಾಜ್​: ಭಾರತ್​ ಕೆ ಸ್ವಾತಂತ್ರತಾ ಸಂಗ್ರಾಮ್​ ಕಿ ಸಮಗ್ರ ಗಾಥಾ’ ಎಂದು ಶೀರ್ಷಿಕೆ ಇಡಲಾಗಿದೆ. ಪ್ರತಿ ಭಾನುವಾರ ರಾತ್ರಿ 9 ಗಂಟೆಗೆ ಈ ಸಂಚಿಕೆಗಳು ಪ್ರಸಾರ ಆಗಲಿವೆ. ಈ ವಾರ (ಆಗಸ್ಟ್​ 28) ಕರುನಾಡಿನ ಉಲ್ಲಾಳದ ರಾಣಿ ಅಬ್ಬಕ್ಕ (Rani Abbakka) ಮೆರೆದ ಸಾಹಸದ ಕಥೆ ಬಿತ್ತರವಾಗಲಿದೆ. ಪೋರ್ಚುಗೀಸರ ವಿರುದ್ಧ ಹೋರಾಡಿದ ವೀರ ಮಹಿಳೆಯ ಕಹಾನಿಯನ್ನು ‘ಸ್ವರಾಜ್​’ (Swaraj) ಸೀರಿಸ್​ ತೆರೆದಿಡಲಿದೆ. ಇದನ್ನು ನೋಡಲು ದೇಶದ ಜನತೆ ಕಾದಿದ್ದಾರೆ.

‘ಪ್ರಸಾರ ಭಾರತಿ’ ಅಧಿಕೃತ ಟ್ವಿಟರ್​ ಖಾತೆ ಮೂಲಕ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಭಾರತದ ಮೂಲೆ ಮೂಲೆಗಳಿಂದಲೂ ಅನೇಕ ರಾಜ ಮನೆತನಗಳು ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಡಿವೆ. ಲೆಕ್ಕವಿಲ್ಲದಷ್ಟು ವೀರ ಸೇನಾನಿಗಳು ರಣರಂಗದಲ್ಲಿ ಮಡಿದಿದ್ದಾರೆ. ಅಂಥ ಎಲ್ಲರಿಗೂ ‘ಸ್ವರಾಜ್​: ಭಾರತ್​ ಕೆ ಸ್ವಾತಂತ್ರತಾ ಸಂಗ್ರಾಮ್​ ಕಿ ಸಮಗ್ರ ಗಾಥಾ’ ಮೂಲಕ ನಮನ ಸಲ್ಲಿಸಲಾಗುತ್ತಿದೆ.

ಇದನ್ನೂ ಓದಿ
Image
ಅಕ್ಷಯ್​ ಕುಮಾರ್ ಸಿನಿಮಾ ಬ್ಯಾನ್​ ಮಾಡಿದ ಮೂರು ಪ್ರಮುಖ ರಾಷ್ಟ್ರಗಳು; ಬಾಕ್ಸ್​ ಆಫೀಸ್​ ಕಲೆಕ್ಷನ್​ಗೆ ಹೊಡೆತ
Image
ತಾವು ನಟಿಸಿದ ಸಿನಿಮಾದ ಕ್ಲೈಮ್ಯಾಕ್ಸ್​ ನೋಡಿ ವಿಮಾನದಲ್ಲೇ ಅತ್ತ ಕಿಯಾರಾ ಅಡ್ವಾಣಿ
Image
ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೆ 5 ಅತ್ಯುತ್ತಮ ದೇಶಭಕ್ತಿ ಸಿನಿಮಾ: ಯಾವ ಓಟಿಟಿಯಲ್ಲಿ ವೀಕ್ಷಣೆಗೆ ಲಭ್ಯ?
Image
Kannada Patriotic Movies: ದೇಶದ ಸ್ವಾತಂತ್ರ್ಯದ ಕುರಿತು ಮೈ ನವಿರೇಳಿಸುವ ಕನ್ನಡದ ದೇಶಭಕ್ತಿ ಸಿನಿಮಾಗಳು

ಆಗಸ್ಟ್​ 14ರಂದು ‘ಸ್ವರಾಜ್​’ ಸರಣಿಯ ಪ್ರದರ್ಶನ ಆರಂಭ ಆಗಿದೆ. 75 ಎಪಿಸೋಡ್​ಗಳಲ್ಲಿ ಈ ಸರಣಿ ಪ್ರಸಾರ ಕಾಣಲಿದೆ. ಸ್ವಾತಂತ್ರ್ಯ ಹೋರಾಟದ ಬಗ್ಗೆ, ದೇಶದ ಇತಿಹಾಸದ ಬಗ್ಗೆ ಜಗತ್ತಿಗೆ ತಿಳಿಯದ ಅನೇಕ ಮಾಹಿತಿಗಳು ಈ ಸರಣಿಯಲ್ಲಿ ಇರಲಿವೆ. ಪ್ರತಿ ಭಾನುವಾರ ರಾತ್ರಿ 9ರಿಂದ 10 ಗಂಟೆಯವರೆಗೆ ಈ ಧಾರಾವಾಹಿ ದೂರದರ್ಶನದಲ್ಲಿ ಪ್ರಸಾರ ಕಾಣಲಿದೆ.

ಕೆಲವೇ ದಿನಗಳ ಹಿಂದೆ ‘ಸ್ವರಾಜ್​: ಭಾರತ್​ ಕೆ ಸ್ವಾತಂತ್ರತಾ ಸಂಗ್ರಾಮ್​ ಕಿ ಸಮಗ್ರ ಗಾಥಾ’ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು. ರಾಣಿ ಅಬ್ಬಕ್ಕ ಹಾಗೂ ಶಿವಪ್ಪ ನಾಯಕನ ಸಂಚಿಕೆಗಳನ್ನು ಬಿತ್ತರ ಮಾಡಲಾಗಿತ್ತು. ವಿಶೇಷ ಪ್ರದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಸೇರಿದಂತೆ ಹಲವು ಸಚಿವರು ಉಪಸ್ಥಿತರಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ