AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rani Abbakka: ದೂರದರ್ಶನದಲ್ಲಿ ನೋಡಿ ಉಲ್ಲಾಳದ ರಾಣಿ ಅಬ್ಬಕ್ಕನ ಸಾಹಸದ ಕಥೆ; ಭಾನುವಾರ ರಾತ್ರಿ 9ಕ್ಕೆ ‘ಸ್ವರಾಜ್​’

DD National | Swaraj: ಪ್ರತಿ ಭಾನುವಾರ ರಾತ್ರಿ 9ರಿಂದ 10 ಗಂಟೆಯವರೆಗೆ ಈ ಧಾರಾವಾಹಿ ದೂರದರ್ಶನದಲ್ಲಿ ಪ್ರಸಾರ ಕಾಣಲಿದೆ. ಈ ವಾರ ರಾಣಿ ಅಬ್ಬಕ್ಕನ ಸಂಚಿಕೆ ಬಿತ್ತರ ಆಗಲಿದೆ.

Rani Abbakka: ದೂರದರ್ಶನದಲ್ಲಿ ನೋಡಿ ಉಲ್ಲಾಳದ ರಾಣಿ ಅಬ್ಬಕ್ಕನ ಸಾಹಸದ ಕಥೆ; ಭಾನುವಾರ ರಾತ್ರಿ 9ಕ್ಕೆ ‘ಸ್ವರಾಜ್​’
‘ಸ್ವರಾಜ್’​ ಸೀರಿಯಲ್​ ಪೋಸ್ಟರ್​
TV9 Web
| Edited By: |

Updated on: Aug 26, 2022 | 11:22 AM

Share

ಭಾರತಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷ ಕಳೆದಿದೆ. ಈ ವರ್ಷ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಆಚರಿಸಲಾಗಿದೆ. ಎಲ್ಲೆಲ್ಲೂ ತ್ರಿವರ್ಣ ಧ್ವಜ ರಾರಾಜಿಸಿದೆ. ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಮರೆಯುವಂತಿಲ್ಲ. ಅವರ ತ್ಯಾಗ, ಬಲಿದಾನಗಳಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಭಾರತಕ್ಕೆ ಸ್ವಾತಂತ್ರ್ಯ ಸಿಗಲು ಹೋರಾಟ ನಡೆಸಿದ ಎಲ್ಲ ಮಹಾನ್​ ವೀರರ ಬಗ್ಗೆ ‘ದೂರದರ್ಶನ’ (Doordarshan) ವಾಹಿನಿ ಸೀರಿಯಲ್​ ಪ್ರಸಾರ ಮಾಡುತ್ತಿದೆ. ಇದಕ್ಕೆ ‘ಸ್ವರಾಜ್​: ಭಾರತ್​ ಕೆ ಸ್ವಾತಂತ್ರತಾ ಸಂಗ್ರಾಮ್​ ಕಿ ಸಮಗ್ರ ಗಾಥಾ’ ಎಂದು ಶೀರ್ಷಿಕೆ ಇಡಲಾಗಿದೆ. ಪ್ರತಿ ಭಾನುವಾರ ರಾತ್ರಿ 9 ಗಂಟೆಗೆ ಈ ಸಂಚಿಕೆಗಳು ಪ್ರಸಾರ ಆಗಲಿವೆ. ಈ ವಾರ (ಆಗಸ್ಟ್​ 28) ಕರುನಾಡಿನ ಉಲ್ಲಾಳದ ರಾಣಿ ಅಬ್ಬಕ್ಕ (Rani Abbakka) ಮೆರೆದ ಸಾಹಸದ ಕಥೆ ಬಿತ್ತರವಾಗಲಿದೆ. ಪೋರ್ಚುಗೀಸರ ವಿರುದ್ಧ ಹೋರಾಡಿದ ವೀರ ಮಹಿಳೆಯ ಕಹಾನಿಯನ್ನು ‘ಸ್ವರಾಜ್​’ (Swaraj) ಸೀರಿಸ್​ ತೆರೆದಿಡಲಿದೆ. ಇದನ್ನು ನೋಡಲು ದೇಶದ ಜನತೆ ಕಾದಿದ್ದಾರೆ.

‘ಪ್ರಸಾರ ಭಾರತಿ’ ಅಧಿಕೃತ ಟ್ವಿಟರ್​ ಖಾತೆ ಮೂಲಕ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಭಾರತದ ಮೂಲೆ ಮೂಲೆಗಳಿಂದಲೂ ಅನೇಕ ರಾಜ ಮನೆತನಗಳು ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಡಿವೆ. ಲೆಕ್ಕವಿಲ್ಲದಷ್ಟು ವೀರ ಸೇನಾನಿಗಳು ರಣರಂಗದಲ್ಲಿ ಮಡಿದಿದ್ದಾರೆ. ಅಂಥ ಎಲ್ಲರಿಗೂ ‘ಸ್ವರಾಜ್​: ಭಾರತ್​ ಕೆ ಸ್ವಾತಂತ್ರತಾ ಸಂಗ್ರಾಮ್​ ಕಿ ಸಮಗ್ರ ಗಾಥಾ’ ಮೂಲಕ ನಮನ ಸಲ್ಲಿಸಲಾಗುತ್ತಿದೆ.

ಇದನ್ನೂ ಓದಿ
Image
ಅಕ್ಷಯ್​ ಕುಮಾರ್ ಸಿನಿಮಾ ಬ್ಯಾನ್​ ಮಾಡಿದ ಮೂರು ಪ್ರಮುಖ ರಾಷ್ಟ್ರಗಳು; ಬಾಕ್ಸ್​ ಆಫೀಸ್​ ಕಲೆಕ್ಷನ್​ಗೆ ಹೊಡೆತ
Image
ತಾವು ನಟಿಸಿದ ಸಿನಿಮಾದ ಕ್ಲೈಮ್ಯಾಕ್ಸ್​ ನೋಡಿ ವಿಮಾನದಲ್ಲೇ ಅತ್ತ ಕಿಯಾರಾ ಅಡ್ವಾಣಿ
Image
ಸ್ವಾತಂತ್ರ್ಯೋತ್ಸವ ಸಂಭ್ರಮಕ್ಕೆ 5 ಅತ್ಯುತ್ತಮ ದೇಶಭಕ್ತಿ ಸಿನಿಮಾ: ಯಾವ ಓಟಿಟಿಯಲ್ಲಿ ವೀಕ್ಷಣೆಗೆ ಲಭ್ಯ?
Image
Kannada Patriotic Movies: ದೇಶದ ಸ್ವಾತಂತ್ರ್ಯದ ಕುರಿತು ಮೈ ನವಿರೇಳಿಸುವ ಕನ್ನಡದ ದೇಶಭಕ್ತಿ ಸಿನಿಮಾಗಳು

ಆಗಸ್ಟ್​ 14ರಂದು ‘ಸ್ವರಾಜ್​’ ಸರಣಿಯ ಪ್ರದರ್ಶನ ಆರಂಭ ಆಗಿದೆ. 75 ಎಪಿಸೋಡ್​ಗಳಲ್ಲಿ ಈ ಸರಣಿ ಪ್ರಸಾರ ಕಾಣಲಿದೆ. ಸ್ವಾತಂತ್ರ್ಯ ಹೋರಾಟದ ಬಗ್ಗೆ, ದೇಶದ ಇತಿಹಾಸದ ಬಗ್ಗೆ ಜಗತ್ತಿಗೆ ತಿಳಿಯದ ಅನೇಕ ಮಾಹಿತಿಗಳು ಈ ಸರಣಿಯಲ್ಲಿ ಇರಲಿವೆ. ಪ್ರತಿ ಭಾನುವಾರ ರಾತ್ರಿ 9ರಿಂದ 10 ಗಂಟೆಯವರೆಗೆ ಈ ಧಾರಾವಾಹಿ ದೂರದರ್ಶನದಲ್ಲಿ ಪ್ರಸಾರ ಕಾಣಲಿದೆ.

ಕೆಲವೇ ದಿನಗಳ ಹಿಂದೆ ‘ಸ್ವರಾಜ್​: ಭಾರತ್​ ಕೆ ಸ್ವಾತಂತ್ರತಾ ಸಂಗ್ರಾಮ್​ ಕಿ ಸಮಗ್ರ ಗಾಥಾ’ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು. ರಾಣಿ ಅಬ್ಬಕ್ಕ ಹಾಗೂ ಶಿವಪ್ಪ ನಾಯಕನ ಸಂಚಿಕೆಗಳನ್ನು ಬಿತ್ತರ ಮಾಡಲಾಗಿತ್ತು. ವಿಶೇಷ ಪ್ರದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಸೇರಿದಂತೆ ಹಲವು ಸಚಿವರು ಉಪಸ್ಥಿತರಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!