AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ವೈಲೆಂಟ್ ಆದ ಪ್ರಶಾಂತ್; ಗೆಳೆಯನ ವಿರುದ್ಧವೇ ತಿರುಗಿ ಬಿದ್ದ ಸಂಬರ್ಗಿ

ಈ ಎರಡೂ ಟೀಂಗಳಿಗೆ ವಿವಿಧ ರೀತಿಯ ಟಾಸ್ಕ್ ನೀಡಲಾಗುತ್ತಿದೆ. ಮೊದಲ ಟಾಸ್ಕ್​ನಲ್ಲಿ ಪ್ರಶಾಂತ್ ಸಂಬರ್ಗಿ ರಾಂಗ್ ಆಗಿದ್ದಾರೆ.

ಮತ್ತೆ ವೈಲೆಂಟ್ ಆದ ಪ್ರಶಾಂತ್; ಗೆಳೆಯನ ವಿರುದ್ಧವೇ ತಿರುಗಿ ಬಿದ್ದ ಸಂಬರ್ಗಿ
ಪ್ರಶಾಂತ್ ಸಂಬರ್ಗಿ
TV9 Web
| Edited By: |

Updated on: Oct 04, 2022 | 10:08 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಪ್ರಶಾಂತ್ ಸಂಬರ್ಗಿ ಸಾಕಷ್ಟು ವೈಲೆಂಟ್ ಆಗಿ ಗುರುತಿಸಿಕೊಂಡಿದ್ದರು. ದೊಡ್ಮನೆಯಲ್ಲಿ ಅವರು ಉಪವಾಸ ಸತ್ಯಾಗ್ರಹ ಮಾಡಿದ್ದೂ ಇದೆ. ಈ ಬಾರಿಯೂ ಅವರು ಬಿಗ್ ಬಾಸ್ (Bigg Boss)​ ಮನೆಗೆ ಬಂದಿದ್ದಾರೆ. ಕಳೆದ ಸೀಸನ್​ನಂತೆ ಈ ಬಾರಿ ನಡೆದುಕೊಳ್ಳುವುದಿಲ್ಲ ಎಂದು ಆರಂಭದಲ್ಲಿ ಹೇಳಿದ್ದರು ಪ್ರಶಾಂತ್ ಸಂಬರ್ಗಿ (Prashanth Sambargi). ಆದರೆ, ಆ ರೀತಿ ಆಗುತ್ತಿಲ್ಲ. ಪ್ರಶಾಂತ್ ಸಂಬರ್ಗಿ ಮತ್ತೆ ವೈಲೆಂಟ್ ಆಗಿದ್ದಾರೆ. ಗೆಳೆಯ ವಿನೋದ್​​ ಗೊಬ್ಬರಗಾಲ ವಿರುದ್ಧವೇ ಅವರು ತಿರುಗಿ ಬಿದ್ದಿದ್ದಾರೆ. ಇಡೀ ಮನೆ ರಣರಂಗವಾಗಿದೆ.

ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ಸಿ ಆಯ್ಕೆಗೆ ವಿವಿಧ ಟಾಸ್ಕ್​ಗಳನ್ನು ನೀಡಲಾಗುತ್ತಿದೆ. ಅದಕ್ಕಾಗಿ ಮನೆಯಲ್ಲಿ ಎರಡು ಗುಂಪುಗಳನ್ನಾಗಿ ಮಾಡಲಾಗಿದೆ. ಒಂದು ಗುಂಪಿಗೆ ಅನುಪಮಾ ಗೌಡ ಕ್ಯಾಪ್ಟನ್ ಆದರೆ, ಮತ್ತೊಂದು ಟೀಂಗೆ ದೀಪಿಕಾ ದಾಸ್ ನಾಯಕಿ. ಈ ಎರಡೂ ಟೀಂಗಳಿಗೆ ವಿವಿಧ ರೀತಿಯ ಟಾಸ್ಕ್ ನೀಡಲಾಗುತ್ತಿದೆ. ಮೊದಲ ಟಾಸ್ಕ್​ನಲ್ಲಿ ಪ್ರಶಾಂತ್ ಸಂಬರ್ಗಿ ರಾಂಗ್ ಆಗಿದ್ದಾರೆ.

ಇದನ್ನೂ ಓದಿ
Image
ಬಿಗ್ ಬಾಸ್ ಮನೆ ಸೇರಿದ ಒಟಿಟಿ ಸ್ಪರ್ಧಿಗಳು; ಇವರಿಗಿರುವ ಸವಾಲುಗಳು ಒಂದೆರಡಲ್ಲ
Image
Bigg Boss Kannada Season 9: ಬಿಗ್​ ಬಾಸ್​ ಮನೆಗೆ ಎಂಟ್ರಿ ಕೊಡುವ 8 ಮಂದಿ ಇವರೇ..!
Image
‘ಬಿಗ್ ಬಾಸ್ ಕನ್ನಡ ಸೀಸನ್ 9’:​ ಮನೆ ಸೇರುವ 18 ಸ್ಪರ್ಧಿಗಳ ಹೆಸರು ಲೀಕ್? ಇಲ್ಲಿದೆ ಫುಲ್ ಲಿಸ್ಟ್
Image
‘ಬಿಗ್ ಬಾಸ್ ಕನ್ನಡ’ ಹೊಸ ಸೀಸನ್​ಗೆ ರೆಡಿ ಆಯ್ತು ದೊಡ್ಮನೆ; ಮನೆಯಲ್ಲಿ ಏನೇನು ಬದಲಾವಣೆ?

ಬಿಗ್ ಬಾಸ್ ಮನೆಯಲ್ಲಿ ಟಾಸ್ಕ್ ಒಂದನ್ನು ನೀಡಲಾಗಿತ್ತು. ಈ ಟಾಸ್ಕ್​ನ ಪ್ರಕಾರ ಸ್ಪರ್ಧಿಗಳು ಜಿಮ್ ಸೈಕಲ್ ತುಳಿಯುತ್ತಾ ಸ್ಯಾಂಡ್​ವಿಚ್ ಮಾಡಬೇಕಿತ್ತು. ಈ ಟಾಸ್ಕ್​ ಮುಗಿದ ಮೇಲೆ ಪ್ರಶಾಂತ್ ಸಂಬರ್ಗಿ ಸಖತ್ ವೈಲೆಂಟ್ ಆದರು. ಕ್ಯಾಪ್ಟನ್ ಆಗಿದ್ದ ವಿನೋದ್ ಅವರು ತಮ್ಮ ನಿರ್ಧಾರಕ್ಕೆ ಬದ್ಧರಾಗಿದ್ದರು. ಟಾಸ್ಕ್​ನ ಕೆಲ ನಿಯಮಗಳನ್ನು ವಿವಿಧ ರೀತಿಯಲ್ಲಿ ಬದಲಾಯಿಸಿ ಹೇಳಿದ್ದರು ಎಂಬುದು ಪ್ರಶಾಂತ್ ಸಂಬರ್ಗಿ ವಾದ. ವಿನೋದ್​ ನಡೆ ಅನೇಕರ ಸಿಟ್ಟಿಗೆ ಕಾರಣವಾಗಿದೆ. ಅದರಲ್ಲೂ ಪ್ರಶಾಂತ್ ಸಂಬರ್ಗಿ ಅವರು ಸಖತ್ ವೈಲೆಂಟ್ ಆಗಿ ವರ್ತಿಸಿದ್ದಾರೆ.

ಕಳೆದ ವಾರ ಪ್ರಶಾಂತ್ ಹಾಗೂ ವಿನೋದ್ ಜೋಡಿಯಾಗಿ ಆಡಿದ್ದರು. ಇಬ್ಬರೂ ಕ್ಯಾಪ್ಟನ್ಸಿ ಟಾಸ್ಕ್​ಗೆ ಬರೋಕೆ ಪ್ರಶಾಂತ್ ಸಂಬರ್ಗಿ ಅವರು ಮಾಡಿದ್ದ ಐಡಿಯಾವೇ ಕಾರಣವಾಗಿತ್ತು. ಕೊನೆಗೆ ವಿನೋದ್ ಕ್ಯಾಪ್ಟನ್ ಆದರು. ಆದರೆ, ಈಗ ಪ್ರಶಾಂತ್ ಸಂಬರ್ಗಿಯೇ ಕ್ಯಾಪ್ಟನ್ ವಿನೋದ್ ವಿರುದ್ಧ ತಿರುಗಿಬಿದ್ದಿದ್ದಾರೆ

ಇದನ್ನೂ ಓದಿ: ‘ನೀವು ನನ್ನನ್ನು ಆ ದೃಷ್ಟಿಕೋನದಲ್ಲಿ ನೋಡಬೇಡಿ’; ಪ್ರಶಾಂತ್ ಸಂಬರ್ಗಿಗೆ ಸಾನ್ಯಾ ಐಯ್ಯರ್ ಮನವಿ

ಪ್ರಶಾಂತ್ ಸಂಬರ್ಗಿ ಅವರು ಈ ಸೀಸನ್​ನ ಆರಂಭದಲ್ಲಿ ಸೈಲೆಂಟ್ ಆಗಿದ್ದರು. ಆದರೆ, ಬರುಬರುತ್ತಾ ಅವರು ವೈಲೆಂಟ್ ಆದರು. ಸಾನ್ಯಾ ಐಯ್ಯರ್ ಜತೆ ಸಾಕಷ್ಟು ಜಗಳ ಮಾಡಿಕೊಂಡಿದ್ದಾರೆ. ಅನೇಕರ ಜತೆ ಪ್ರಶಾಂತ್ ಸಂಬರ್ಗಿ ಕಿರಿಕ್ ಮಾಡಿಕೊಂಡಿದ್ದಾರೆ. ಈಗ ಅವರು ಮತ್ತೊಂದು ಜಗಳಕ್ಕೆ ನಾಂದಿ ಹಾಡಿದ್ದಾರೆ.

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು