AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ಮದುವೆ ಆಗಿ ಸಂತೋಷ್ ಮನೆಗೆ ಹೋದರೆ ಪರಿಸ್ಥಿತಿ ಏನು’; ನಮ್ರತಾ ಪ್ರಶ್ನೆಗೆ ತನಿಷಾ ಶಾಕ್

ತನಿಷಾ ಕುಪ್ಪಂಡ ಹಾಗೂ ಸಂತೋಷ್ ಮಧ್ಯೆ ಫ್ರೆಂಡ್​ಶಿಪ್ ಬೆಳೆದಿದೆ. ಇವರ ಮಧ್ಯೆ ಲವ್ ಆಗಿದೆ ಎಂದು ಬಿಂಬಿಸುವ ಕೆಲಸ ಆಗುತ್ತಿದೆ. ಆದರೆ, ತನಿಷಾ ಅವರು ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ.

‘ನೀವು ಮದುವೆ ಆಗಿ ಸಂತೋಷ್ ಮನೆಗೆ ಹೋದರೆ ಪರಿಸ್ಥಿತಿ ಏನು’; ನಮ್ರತಾ ಪ್ರಶ್ನೆಗೆ ತನಿಷಾ ಶಾಕ್
ನಮ್ರತಾ-ಸಂತೋಷ್-ತನಿಷಾ
ರಾಜೇಶ್ ದುಗ್ಗುಮನೆ
|

Updated on: Nov 15, 2023 | 7:40 AM

Share

ವರ್ತೂರು ಸಂತೋಷ್ (Varthur Santosh) ಅವರು ಬಿಗ್ ಬಾಸ್ ಮನೆಯಿಂದ ಹೊರ ಹೋಗುತ್ತೇನೆ ಎಂದು ಹಠ ಹಿಡಿದು ಕುಳಿತಿದ್ದರು. ಆದರೆ, ಅವರ ತಾಯಿ ಬಂದು ಅವರನ್ನು ಸಮಾಧಾನ ಮಾಡಿದ್ದಾರೆ. ಇದರಿಂದ ಸಂತೋಷ್ ಅವರು ಖುಷಿಯಾಗಿದ್ದಾರೆ. ಬಿಗ್ ಬಾಸ್​ನಲ್ಲಿ ಆಟ ಮುಂದುವರಿಸುವುದಾಗಿ ಅವರು ಹೇಳಿದ್ದಾರೆ. ಇದರಿಂದ ಅವರ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಅವರ ತಾಯಿ ಬಂದಾಗ ಆಗಿರುವ ಒಂದು ಘಟನೆ ಬಗ್ಗೆ ತನಿಷಾ ಹಾಗೂ ನಮ್ರತಾ ಅವರು ಮಾತನಾಡಿದ್ದಾರೆ. ಈ ಬಗ್ಗೆ ಚರ್ಚೆ ನಡೆದಿದೆ.

ತನಿಷಾ ಕುಪ್ಪಂಡ ಹಾಗೂ ಸಂತೋಷ್ ಮಧ್ಯೆ ಫ್ರೆಂಡ್​ಶಿಪ್ ಬೆಳೆದಿದೆ. ಇವರ ಮಧ್ಯೆ ಲವ್ ಆಗಿದೆ ಎಂದು ಬಿಂಬಿಸುವ ಕೆಲಸ ಆಗುತ್ತಿದೆ. ಆದರೆ, ತನಿಷಾ ಅವರು ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಇದೆಲ್ಲವನ್ನೂ ಸುಮ್ಮನೆ ಹೇಳೋದು ಅನ್ನೋದು ತನಿಷಾಗೂ ಗೊತ್ತಿದೆ. ಆದರೂ ಮನೆ ಮಂದಿ ಕಾಲು ಎಳೆಯುತ್ತಿದ್ದಾರೆ.

ಸಂತೋಷ್ ಅವರ ತಾಯಿ ಮಾತನಾಡಿದ ಭಾಷೆ ಬಗ್ಗೆ ನಮ್ರತಾ ಹಾಗೂ ತನಿಷಾ ಚರ್ಚೆ ಮಾಡಿದ್ದಾರೆ. ‘ಆ ಭಾಷೆ ಕೇಳೋಕೆ ಬಹಳ ವಿಚಿತ್ರವಾಗಿದೆ’ ಎಂದರು ನಮ್ರತಾ. ‘ಅವರ ಆಡುಭಾಷೆ ಹಾಗೆಯೇ. ಕನ್ನಡ, ತೆಲುಗು, ತಮಿಳು ಭಾಷೆಯ ಮಿಶ್ರಣವಾಗಿ ಇದೆ. ಅರ್ಥವೇ ಆಗುವುದಿಲ್ಲ’ ಎಂದರು ತನಿಷಾ. ಇದನ್ನು ಕೇಳಿದ ನಮ್ರತಾ ಅವರು ತನಿಷಾರ ಕಾಲೆಳೆದರು. ‘ಹೀಗಾದ್ರೆ ಮುಂದೆ ಹೇಗೆ? ಅಂದ್ರೆ, ಮದುವೆ ಆಗಿ ಅವರ ಮನೆಗೆ ಹೋದರೆ ಪರಿಸ್ಥಿತಿ ಏನು’ ಎಂದು ಪ್ರಶ್ನೆ ಮಾಡಿದ್ದಾರೆ ನಮ್ರತಾ. ಇದಕ್ಕೆ ತನಿಷಾ, ‘ಯೇ ಹೋಗೇ’ ಎಂದಷ್ಟೇ ಹೇಳಿ ನಕ್ಕಿದ್ದಾರೆ.

ಇದನ್ನೂ ಓದಿ: ಮೋಸಗಾರ, ವ್ಯಸನಿ, ಮಗಳಿಗೆ ಅನ್ಯಾಯ ಮಾಡಿದ್ದಾನೆ: ವರ್ತೂರು ಸಂತೋಷ್ ವಿರುದ್ಧ ಮಾವ ಆರೋಪ

ಸಂತೋಷ್ ಅವರು ಬಿಗ್ ಬಾಸ್​ನಲ್ಲಿ ಎಲ್ಲಿಯೂ ಮದುವೆ ವಿಚಾರ ಎತ್ತಿಲ್ಲ. ಅವರಿಗೆ ಈಗಾಗಲೇ ಒಂದು ಮದುವೆ ಆಗಿ ವಿಚ್ಛೇದನ ಆಗಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ತನಿಷಾ ಜೊತೆ ಅವರು ಕ್ಲೋಸ್ ಆದ ಬಳಿಕ ಈ ವಿಚಾರದ ಬಗ್ಗೆ ಚರ್ಚೆ ನಡೆದಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಎಪಿಸೋಡ್ ಪ್ರಸಾರ ಕಾಣುತ್ತದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ನೋಡಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?