AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ಮದುವೆ ಆಗಿ ಸಂತೋಷ್ ಮನೆಗೆ ಹೋದರೆ ಪರಿಸ್ಥಿತಿ ಏನು’; ನಮ್ರತಾ ಪ್ರಶ್ನೆಗೆ ತನಿಷಾ ಶಾಕ್

ತನಿಷಾ ಕುಪ್ಪಂಡ ಹಾಗೂ ಸಂತೋಷ್ ಮಧ್ಯೆ ಫ್ರೆಂಡ್​ಶಿಪ್ ಬೆಳೆದಿದೆ. ಇವರ ಮಧ್ಯೆ ಲವ್ ಆಗಿದೆ ಎಂದು ಬಿಂಬಿಸುವ ಕೆಲಸ ಆಗುತ್ತಿದೆ. ಆದರೆ, ತನಿಷಾ ಅವರು ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ.

‘ನೀವು ಮದುವೆ ಆಗಿ ಸಂತೋಷ್ ಮನೆಗೆ ಹೋದರೆ ಪರಿಸ್ಥಿತಿ ಏನು’; ನಮ್ರತಾ ಪ್ರಶ್ನೆಗೆ ತನಿಷಾ ಶಾಕ್
ನಮ್ರತಾ-ಸಂತೋಷ್-ತನಿಷಾ
ರಾಜೇಶ್ ದುಗ್ಗುಮನೆ
|

Updated on: Nov 15, 2023 | 7:40 AM

Share

ವರ್ತೂರು ಸಂತೋಷ್ (Varthur Santosh) ಅವರು ಬಿಗ್ ಬಾಸ್ ಮನೆಯಿಂದ ಹೊರ ಹೋಗುತ್ತೇನೆ ಎಂದು ಹಠ ಹಿಡಿದು ಕುಳಿತಿದ್ದರು. ಆದರೆ, ಅವರ ತಾಯಿ ಬಂದು ಅವರನ್ನು ಸಮಾಧಾನ ಮಾಡಿದ್ದಾರೆ. ಇದರಿಂದ ಸಂತೋಷ್ ಅವರು ಖುಷಿಯಾಗಿದ್ದಾರೆ. ಬಿಗ್ ಬಾಸ್​ನಲ್ಲಿ ಆಟ ಮುಂದುವರಿಸುವುದಾಗಿ ಅವರು ಹೇಳಿದ್ದಾರೆ. ಇದರಿಂದ ಅವರ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಅವರ ತಾಯಿ ಬಂದಾಗ ಆಗಿರುವ ಒಂದು ಘಟನೆ ಬಗ್ಗೆ ತನಿಷಾ ಹಾಗೂ ನಮ್ರತಾ ಅವರು ಮಾತನಾಡಿದ್ದಾರೆ. ಈ ಬಗ್ಗೆ ಚರ್ಚೆ ನಡೆದಿದೆ.

ತನಿಷಾ ಕುಪ್ಪಂಡ ಹಾಗೂ ಸಂತೋಷ್ ಮಧ್ಯೆ ಫ್ರೆಂಡ್​ಶಿಪ್ ಬೆಳೆದಿದೆ. ಇವರ ಮಧ್ಯೆ ಲವ್ ಆಗಿದೆ ಎಂದು ಬಿಂಬಿಸುವ ಕೆಲಸ ಆಗುತ್ತಿದೆ. ಆದರೆ, ತನಿಷಾ ಅವರು ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಇದೆಲ್ಲವನ್ನೂ ಸುಮ್ಮನೆ ಹೇಳೋದು ಅನ್ನೋದು ತನಿಷಾಗೂ ಗೊತ್ತಿದೆ. ಆದರೂ ಮನೆ ಮಂದಿ ಕಾಲು ಎಳೆಯುತ್ತಿದ್ದಾರೆ.

ಸಂತೋಷ್ ಅವರ ತಾಯಿ ಮಾತನಾಡಿದ ಭಾಷೆ ಬಗ್ಗೆ ನಮ್ರತಾ ಹಾಗೂ ತನಿಷಾ ಚರ್ಚೆ ಮಾಡಿದ್ದಾರೆ. ‘ಆ ಭಾಷೆ ಕೇಳೋಕೆ ಬಹಳ ವಿಚಿತ್ರವಾಗಿದೆ’ ಎಂದರು ನಮ್ರತಾ. ‘ಅವರ ಆಡುಭಾಷೆ ಹಾಗೆಯೇ. ಕನ್ನಡ, ತೆಲುಗು, ತಮಿಳು ಭಾಷೆಯ ಮಿಶ್ರಣವಾಗಿ ಇದೆ. ಅರ್ಥವೇ ಆಗುವುದಿಲ್ಲ’ ಎಂದರು ತನಿಷಾ. ಇದನ್ನು ಕೇಳಿದ ನಮ್ರತಾ ಅವರು ತನಿಷಾರ ಕಾಲೆಳೆದರು. ‘ಹೀಗಾದ್ರೆ ಮುಂದೆ ಹೇಗೆ? ಅಂದ್ರೆ, ಮದುವೆ ಆಗಿ ಅವರ ಮನೆಗೆ ಹೋದರೆ ಪರಿಸ್ಥಿತಿ ಏನು’ ಎಂದು ಪ್ರಶ್ನೆ ಮಾಡಿದ್ದಾರೆ ನಮ್ರತಾ. ಇದಕ್ಕೆ ತನಿಷಾ, ‘ಯೇ ಹೋಗೇ’ ಎಂದಷ್ಟೇ ಹೇಳಿ ನಕ್ಕಿದ್ದಾರೆ.

ಇದನ್ನೂ ಓದಿ: ಮೋಸಗಾರ, ವ್ಯಸನಿ, ಮಗಳಿಗೆ ಅನ್ಯಾಯ ಮಾಡಿದ್ದಾನೆ: ವರ್ತೂರು ಸಂತೋಷ್ ವಿರುದ್ಧ ಮಾವ ಆರೋಪ

ಸಂತೋಷ್ ಅವರು ಬಿಗ್ ಬಾಸ್​ನಲ್ಲಿ ಎಲ್ಲಿಯೂ ಮದುವೆ ವಿಚಾರ ಎತ್ತಿಲ್ಲ. ಅವರಿಗೆ ಈಗಾಗಲೇ ಒಂದು ಮದುವೆ ಆಗಿ ವಿಚ್ಛೇದನ ಆಗಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ತನಿಷಾ ಜೊತೆ ಅವರು ಕ್ಲೋಸ್ ಆದ ಬಳಿಕ ಈ ವಿಚಾರದ ಬಗ್ಗೆ ಚರ್ಚೆ ನಡೆದಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಎಪಿಸೋಡ್ ಪ್ರಸಾರ ಕಾಣುತ್ತದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ನೋಡಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?