AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಕಾಲಿ ಸಂತೋಷ್​ಗೆ ಉತ್ತಮ, ತನಿಷಾಗೆ ಕಳಪೆ; ಲೆಕ್ಕಾಚಾರವೇ ಉಲ್ಟಾ

ಒಂದು ವಾರ ಕಳಪೆ ಪಡೆದವರು ಮುಂದಿನ ವಾರಕ್ಕೆ ತಮ್ಮ ಆಟವನ್ನು ತೋರಿಸಿ ಬೆಸ್ಟ್ ಎನಿಸಿಕೊಳ್ಳಬಹುದು. ಈ ವಾರ ಬಿಗ್ ಬಾಸ್​ ಮನೆಯಲ್ಲಿ ಇದೇ ರೀತಿಯ ಘಟನೆ ನಡೆದಿದೆ. ತುಕಾಲಿ ಸಂತೋಷ್ ಅವರು ಉತ್ತಮ ಎನಿಸಿಕೊಂಡರೆ, ತನಿಷಾ ಕಳಪೆ ಪಟ್ಟ ಪಡೆದಿದ್ದಾರೆ.

ತುಕಾಲಿ ಸಂತೋಷ್​ಗೆ ಉತ್ತಮ, ತನಿಷಾಗೆ ಕಳಪೆ; ಲೆಕ್ಕಾಚಾರವೇ ಉಲ್ಟಾ
ತನಿಷಾ-ಸಂತೋಷ್
ರಾಜೇಶ್ ದುಗ್ಗುಮನೆ
|

Updated on: Nov 18, 2023 | 7:09 AM

Share

ಬಿಗ್ ಬಾಸ್​ನಲ್ಲಿ(Bigg Boss)  ಯಾವಾಗ ಏನು ಆಗುತ್ತದೆ ಎಂದು ಊಹಿಸುವುದು ಕಷ್ಟ. ಒಂದು ವಾರ ಉತ್ತಮ ಪರ್ಫಾರ್ಮೆನ್ಸ್ ನೀಡಿದವರು, ಕ್ಯಾಪ್ಟನ್ ಆದವರು ಕಳಪೆ ಹಣೆಪಟ್ಟಿ ಪಡೆದು ಜೈಲು ಸೇರಬಹುದು. ಅದೇ ರೀತಿ ಒಂದು ವಾರ ಕಳಪೆ ಪಡೆದವರು ಮುಂದಿನ ವಾರಕ್ಕೆ ತಮ್ಮ ಆಟವನ್ನು ತೋರಿಸಿ ಬೆಸ್ಟ್ ಎನಿಸಿಕೊಳ್ಳಬಹುದು. ಈ ವಾರ ಬಿಗ್ ಬಾಸ್​ ಮನೆಯಲ್ಲಿ ಇದೇ ರೀತಿಯ ಘಟನೆ ನಡೆದಿದೆ. ತುಕಾಲಿ ಸಂತೋಷ್ ಅವರು ಉತ್ತಮ ಎನಿಸಿಕೊಂಡರೆ, ತನಿಷಾ ಕಳಪೆ ಪಟ್ಟ ಪಡೆದಿದ್ದಾರೆ.

ತುಕಾಲಿ ಸಂತೋಷ್ ಅವರು ಇಷ್ಟು ದಿನ ವಿನಯ್ ಅವರ ಜೊತೆ ಕಾಣಿಸಿಕೊಳ್ಳುತ್ತಾ ಬಂದಿದ್ದರು. ಈ ಕಾರಣಕ್ಕೆ ಅವರು ಟೀಕೆಗೆ ಒಳಗಾಗಿದ್ದರು. ಈ ಮೊದಲು ಕ್ಯಾಪ್ಟನ್ಸಿ ಟಾಸ್ಕ್​ನಲ್ಲಿ ಎದುರಾಳಿಯಾಗಿ ವಿನಯ್ ಅವರನ್ನು ಆಯ್ಕೆ ಮಾಡಿಕೊಂಡಿದ್ದರು. ಆದರೆ, ಈಗ ಅವರು ಬದಲಾಗಿದ್ದಾರೆ. ವಿನಯ್ ವಿರುದ್ಧ ತೊಡೆ ತಟ್ಟಿದ್ದಾರೆ. ಎಲ್ಲ ಕಡೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದು ಅನೇಕರಿಗೆ ಇಷ್ಟ ಆಗಿದೆ. ಇನ್ನು, ಟಾಸ್ಕ್​ನಲ್ಲಿ ಅವರು ನೀಡಿದ ಪರ್ಫಾರ್ಮೆನ್ಸ್ ಮೆಚ್ಚುಗೆ ಪಡೆದಿದೆ. ಹೀಗಾಗಿ, ಅವರು ಎಲ್ಲರಿಂದ ಭೇಷ್ ಎನಿಸಿಕೊಂಡಿದ್ದಾರೆ.

ಇನ್ನು, ಸ್ಟ್ರಾಂಗ್ ಸ್ಪರ್ಧಿ ಎನಿಸಿಕೊಂಡಿದ್ದ ತನಿಷಾ ಅವರು ಕಳಪೆ ಪಟ್ಟ ಪಡೆದಿದ್ದಾರೆ. ಅವರು ಈ ವಾರದ ಒಂದು ಟಾಸ್ಕ್​ನಲ್ಲಿ ಉತ್ತಮವಾಗಿ ಆಟ ಆಡಿರಲಿಲ್ಲ. ಇದನ್ನೇ ಎಲ್ಲರೂ ಟಾರ್ಗೆಟ್ ಮಾಡಿದ್ದಾರೆ. ಈ ಕಾರಣದಿಂದಲೇ ಅವರಿಗೆ ಕಳಪೆ ಪಟ್ಟ ಸಿಕ್ಕಿದೆ. ಅವರು ಜೈಲಿನಲ್ಲಿ ಕುಳಿತು ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ಹೆಣ್ಮಕ್ಕಳ ಬಗ್ಗೆ ಡ್ರೋನ್​ ಪ್ರತಾಪ್​ ಹೇಳಿದ ಗಾದೆ ಮಾತು ಕೇಳಿ ಕಾರ್ತಿಕ್​ ಮಹೇಶ್​ ಕಕ್ಕಾಬಿಕ್ಕಿ

ಕಾರ್ತಿಕ್ ಮಹೇಶ್ ಅವರು ಈ ವಾರದ ಕ್ಯಾಪ್ಟನ್ ಆಗಿದ್ದಾರೆ. ಪ್ರತಿ ವಾರವೂ ಅವರು ನಾಮಿನೇಟ್ ಆಗುತ್ತಾ ಬಂದಿದ್ದಾರೆ. ಕ್ಯಾಪ್ಟನ್ ಆಗಿರುವುದರಿಂದ ಮುಂದಿನ ವಾರ ಅವರು ನಾಮಿನೇಷನ್​ನಿಂದ ಬಚಾವ್ ಆಗಲಿದ್ದಾರೆ. ಒಬ್ಬರನ್ನು ನೇರವಾಗಿ ನಾಮಿನೇಟ್ ಮಾಡುವ ಅವಕಾಶವೂ ಅವರಿಗೆ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ