ತುಕಾಲಿ ಸಂತೋಷ್​ಗೆ ಉತ್ತಮ, ತನಿಷಾಗೆ ಕಳಪೆ; ಲೆಕ್ಕಾಚಾರವೇ ಉಲ್ಟಾ

ಒಂದು ವಾರ ಕಳಪೆ ಪಡೆದವರು ಮುಂದಿನ ವಾರಕ್ಕೆ ತಮ್ಮ ಆಟವನ್ನು ತೋರಿಸಿ ಬೆಸ್ಟ್ ಎನಿಸಿಕೊಳ್ಳಬಹುದು. ಈ ವಾರ ಬಿಗ್ ಬಾಸ್​ ಮನೆಯಲ್ಲಿ ಇದೇ ರೀತಿಯ ಘಟನೆ ನಡೆದಿದೆ. ತುಕಾಲಿ ಸಂತೋಷ್ ಅವರು ಉತ್ತಮ ಎನಿಸಿಕೊಂಡರೆ, ತನಿಷಾ ಕಳಪೆ ಪಟ್ಟ ಪಡೆದಿದ್ದಾರೆ.

ತುಕಾಲಿ ಸಂತೋಷ್​ಗೆ ಉತ್ತಮ, ತನಿಷಾಗೆ ಕಳಪೆ; ಲೆಕ್ಕಾಚಾರವೇ ಉಲ್ಟಾ
ತನಿಷಾ-ಸಂತೋಷ್
Follow us
|

Updated on: Nov 18, 2023 | 7:09 AM

ಬಿಗ್ ಬಾಸ್​ನಲ್ಲಿ(Bigg Boss)  ಯಾವಾಗ ಏನು ಆಗುತ್ತದೆ ಎಂದು ಊಹಿಸುವುದು ಕಷ್ಟ. ಒಂದು ವಾರ ಉತ್ತಮ ಪರ್ಫಾರ್ಮೆನ್ಸ್ ನೀಡಿದವರು, ಕ್ಯಾಪ್ಟನ್ ಆದವರು ಕಳಪೆ ಹಣೆಪಟ್ಟಿ ಪಡೆದು ಜೈಲು ಸೇರಬಹುದು. ಅದೇ ರೀತಿ ಒಂದು ವಾರ ಕಳಪೆ ಪಡೆದವರು ಮುಂದಿನ ವಾರಕ್ಕೆ ತಮ್ಮ ಆಟವನ್ನು ತೋರಿಸಿ ಬೆಸ್ಟ್ ಎನಿಸಿಕೊಳ್ಳಬಹುದು. ಈ ವಾರ ಬಿಗ್ ಬಾಸ್​ ಮನೆಯಲ್ಲಿ ಇದೇ ರೀತಿಯ ಘಟನೆ ನಡೆದಿದೆ. ತುಕಾಲಿ ಸಂತೋಷ್ ಅವರು ಉತ್ತಮ ಎನಿಸಿಕೊಂಡರೆ, ತನಿಷಾ ಕಳಪೆ ಪಟ್ಟ ಪಡೆದಿದ್ದಾರೆ.

ತುಕಾಲಿ ಸಂತೋಷ್ ಅವರು ಇಷ್ಟು ದಿನ ವಿನಯ್ ಅವರ ಜೊತೆ ಕಾಣಿಸಿಕೊಳ್ಳುತ್ತಾ ಬಂದಿದ್ದರು. ಈ ಕಾರಣಕ್ಕೆ ಅವರು ಟೀಕೆಗೆ ಒಳಗಾಗಿದ್ದರು. ಈ ಮೊದಲು ಕ್ಯಾಪ್ಟನ್ಸಿ ಟಾಸ್ಕ್​ನಲ್ಲಿ ಎದುರಾಳಿಯಾಗಿ ವಿನಯ್ ಅವರನ್ನು ಆಯ್ಕೆ ಮಾಡಿಕೊಂಡಿದ್ದರು. ಆದರೆ, ಈಗ ಅವರು ಬದಲಾಗಿದ್ದಾರೆ. ವಿನಯ್ ವಿರುದ್ಧ ತೊಡೆ ತಟ್ಟಿದ್ದಾರೆ. ಎಲ್ಲ ಕಡೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದು ಅನೇಕರಿಗೆ ಇಷ್ಟ ಆಗಿದೆ. ಇನ್ನು, ಟಾಸ್ಕ್​ನಲ್ಲಿ ಅವರು ನೀಡಿದ ಪರ್ಫಾರ್ಮೆನ್ಸ್ ಮೆಚ್ಚುಗೆ ಪಡೆದಿದೆ. ಹೀಗಾಗಿ, ಅವರು ಎಲ್ಲರಿಂದ ಭೇಷ್ ಎನಿಸಿಕೊಂಡಿದ್ದಾರೆ.

ಇನ್ನು, ಸ್ಟ್ರಾಂಗ್ ಸ್ಪರ್ಧಿ ಎನಿಸಿಕೊಂಡಿದ್ದ ತನಿಷಾ ಅವರು ಕಳಪೆ ಪಟ್ಟ ಪಡೆದಿದ್ದಾರೆ. ಅವರು ಈ ವಾರದ ಒಂದು ಟಾಸ್ಕ್​ನಲ್ಲಿ ಉತ್ತಮವಾಗಿ ಆಟ ಆಡಿರಲಿಲ್ಲ. ಇದನ್ನೇ ಎಲ್ಲರೂ ಟಾರ್ಗೆಟ್ ಮಾಡಿದ್ದಾರೆ. ಈ ಕಾರಣದಿಂದಲೇ ಅವರಿಗೆ ಕಳಪೆ ಪಟ್ಟ ಸಿಕ್ಕಿದೆ. ಅವರು ಜೈಲಿನಲ್ಲಿ ಕುಳಿತು ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ಹೆಣ್ಮಕ್ಕಳ ಬಗ್ಗೆ ಡ್ರೋನ್​ ಪ್ರತಾಪ್​ ಹೇಳಿದ ಗಾದೆ ಮಾತು ಕೇಳಿ ಕಾರ್ತಿಕ್​ ಮಹೇಶ್​ ಕಕ್ಕಾಬಿಕ್ಕಿ

ಕಾರ್ತಿಕ್ ಮಹೇಶ್ ಅವರು ಈ ವಾರದ ಕ್ಯಾಪ್ಟನ್ ಆಗಿದ್ದಾರೆ. ಪ್ರತಿ ವಾರವೂ ಅವರು ನಾಮಿನೇಟ್ ಆಗುತ್ತಾ ಬಂದಿದ್ದಾರೆ. ಕ್ಯಾಪ್ಟನ್ ಆಗಿರುವುದರಿಂದ ಮುಂದಿನ ವಾರ ಅವರು ನಾಮಿನೇಷನ್​ನಿಂದ ಬಚಾವ್ ಆಗಲಿದ್ದಾರೆ. ಒಬ್ಬರನ್ನು ನೇರವಾಗಿ ನಾಮಿನೇಟ್ ಮಾಡುವ ಅವಕಾಶವೂ ಅವರಿಗೆ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ