ಬಿಗ್​ ಬಾಸ್​ನಲ್ಲಿ ಜೋಡಿ ಆಗಿದ್ದೂ ಇವರೇ, ಕೇಸ್​ ಹಾಕಿಸಿಕೊಂಡಿದ್ದೂ ಇವರೇ: ಎಂಥ ಕಾಕತಾಳೀಯ

ಬಿಗ್​ ಬಾಸ್​ ಮನೆಯಲ್ಲಿ ಕೆಲವರ ನಡುವೆ ಬಾಂಧವ್ಯ ಬೆಳೆಯುತ್ತದೆ. ಈ ಬಾರಿ ವರ್ತೂರು ಸಂತೋಷ್​ ಮತ್ತು ತನಿಷಾ ಕುಪ್ಪಂಡ ನಡುವೆ ಅಂತಹ ಒಂದು ಸ್ನೇಹ ಬೆಳೆದಿದೆ. ಅವರಿಬ್ಬರ ನಡುವೆ ದಿನದಿಂದ ದಿನಕ್ಕೆ ಆಪ್ತತೆ ಹೆಚ್ಚುತ್ತಿರುವುದನ್ನು ಎಲ್ಲರೂ ಗಮನಿಸುತ್ತಿದ್ದಾರೆ. ಕಾಕತಾಳೀಯ ಎಂದರೆ ಇವರಿಬ್ಬರು ವಿವಾದ ಮಾಡಿಕೊಂಡಿದ್ದಾರೆ.

ಬಿಗ್​ ಬಾಸ್​ನಲ್ಲಿ ಜೋಡಿ ಆಗಿದ್ದೂ ಇವರೇ, ಕೇಸ್​ ಹಾಕಿಸಿಕೊಂಡಿದ್ದೂ ಇವರೇ: ಎಂಥ ಕಾಕತಾಳೀಯ
ವರ್ತೂರು ಸಂತೋಷ್​, ತನಿಷಾ ಕುಪ್ಪಂಡ
Follow us
|

Updated on: Nov 15, 2023 | 6:23 PM

‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (Bigg Boss Kannada) ರಿಯಾಲಿಟಿ ಶೋನಲ್ಲಿ ಕೆಲವು ಸ್ಪರ್ಧಿಗಳು ಸಖತ್​ ಸುದ್ದಿ ಆಗುತ್ತಿದ್ದಾರೆ. ಆಟದ ಕಾರಣಕ್ಕೆ ಸುದ್ದಿಯಾದರೆ ಪರವಾಗಿಲ್ಲ. ಆದರೆ ಹೊರ ಜಗತ್ತಿನ ವಿಚಾರಕ್ಕೆ ಕಿರಿಕ್​ ಮಾಡಿಕೊಂಡು ಸುದ್ದಿಯಾದರೆ ಸಂಕಷ್ಟ ಎದುರಾಗುತ್ತದೆ. ಸದ್ಯ ವರ್ತೂರು ಸಂತೋಷ್​ ಮತ್ತು ತನಿಷಾ ಕುಪ್ಪಂಡ (Tanisha Kuppanda) ಅವರು ಈ ರೀತಿ ಸುದ್ದಿ ಆಗಿದ್ದಾರೆ. ಕಾಕತಾಳೀಯ ಏನಂದರೆ, ಇವರಿಬ್ಬರು ಬಿಗ್​ ಬಾಸ್​ ಮನೆಯೊಳಗೆ ಜೋಡಿಯಾಗಿದ್ದಾರೆ. ದೊಡ್ಮನೆಯ ಹೊರಗೆ ಇವರ ಹೆಸರುಗಳು ವಿವಾದಕ್ಕೆ ಸಿಲುಕಿವೆ. ಜಾತಿ ನಿಂದನೆ ಮಾಡಿದ ಆರೋಪದಲ್ಲಿ ತನಿಷಾ ಕುಪ್ಪಂಡ ಅವರ ಮೇಲೆ ದೂರು ದಾಖಲಾಗಿದೆ. ಹುಲಿ ಉಗುರು ಹೊಂದಿದ್ದ ಆರೋಪದಲ್ಲಿ ವರ್ತೂರು ಸಂತೋಷ್ (Varthur Santhosh)​ ಈಗಾಗಲೇ ಜೈಲಿಗೆ ಹೋಗಿ ಬಂದಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಕೆಲವರ ನಡುವೆ ಬಾಂಧವ್ಯ ಬೆಳೆಯುತ್ತದೆ. ಈ ಬಾರಿ ವರ್ತೂರು ಸಂತೋಷ್​ ಮತ್ತು ತನಿಷಾ ಕುಪ್ಪಂಡ ನಡುವೆ ಅಂತಹ ಒಂದು ಸ್ನೇಹ ಬೆಳೆದಿದೆ. ಕಾಕತಾಳೀಯ ಎಂದರೆ ಇವರಿಬ್ಬರು ವಿವಾದ ಮಾಡಿಕೊಂಡಿದ್ದಾರೆ. ಇಬ್ಬರಿಗೂ ಕಾನೂನಿನ ಸಂಕಷ್ಟ ಎದುರಾಗಿದೆ. ವರ್ತೂರು ಸಂತೋಷ್​ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿ ಬಿಗ್​ ಬಾಸ್​ ಮನೆಗೆ ಮರುಪ್ರವೇಶ ಪಡೆದಿದ್ದರೆ, ತನಿಷಾ ಕುಪ್ಪಂಡ ಅವರು ಅರೆಸ್ಟ್​ ಆಗುವ ಸಾಧ್ಯತೆ ಇದೆ. ಯಾವ ಕ್ಷಣದಲ್ಲಾದರೂ ಇವರಿಬ್ಬರು ಬಿಗ್​ ಬಾಸ್​ ಮನೆಯಿಂದ ಹೊರಗೆ ಬರಬೇಕಾಗಬಹುದು.

ಇದನ್ನೂ ಓದಿ: ಜಾತಿ ನಿಂದನೆ ಮಾಡಿದ ಬಿಗ್​ ಬಾಸ್​ ಸ್ಪರ್ಧಿ ತನಿಷಾಗೆ ಕಾದಿದೆ ಸಂಕಷ್ಟ

ಒಮ್ಮೆ ಜೈಲಿಗೆ ಹೋಗಿ ಮತ್ತೊಮ್ಮೆ ಬಿಗ್​ ಬಾಸ್​ ಮನೆ ಪ್ರವೇಶಿಸಿದ ಬಳಿಕ ವರ್ತೂರು ಸಂತೋಷ್​ ಅವರು ಡಲ್​ ಆಗಿದ್ದರು. ಆಟವನ್ನು ಅರ್ಧಕ್ಕೆ ನಿಲ್ಲಿಸಲು ಅವರು ತೀರ್ಮಾನಿಸಿದ್ದರು. ಆದರೆ ನಿರೂಪಕ ಕಿಚ್ಚ ಸುದೀಪ್​, ಅತಿಥಿಯಾಗಿ ಬಂದಿದ್ದ ಸುಷ್ಮಾ ರಾವ್​ ಹಾಗು ಬಿಗ್​ ಬಾಸ್​ ಮನೆಯೊಳಗಿನ ಸ್ಪರ್ಧಿಗಳು ವರ್ತೂರು ಸಂತೋಷ್​ ಅವರ ಮನ ಒಲಿಸಲು ಪ್ರಯತ್ನಿಸಿದರು. ಅಂತಿಮವಾಗಿ ತಾಯಿಯೇ ಬಂದು ಧೈರ್ಯ ತುಂಬಿದ ಬಳಿಕ ವರ್ತೂರು ಸಂತೋಷ್​ ಅವರು ಬಿಗ್ ಬಾಸ್​ ಆಟದಲ್ಲಿ ಮುಂದುವರಿಯಲು ನಿರ್ಧರಿಸಿದರು. ತನಿಶಾ ಮತ್ತು ವರ್ತೂರು ಸಂತೋಷ್​ ನಡುವೆ ದಿನದಿಂದ ದಿನಕ್ಕೆ ಆಪ್ತತೆ ಹೆಚ್ಚುತ್ತಿರುವುದನ್ನು ಎಲ್ಲರೂ ಗಮನಿಸುತ್ತಿದ್ದಾರೆ.

ಇದನ್ನೂ ಓದಿ: ತನಿಷಾ ಕುಪ್ಪಂಡ ವಿಚಾರಣೆ: ಬಿಗ್​ಬಾಸ್ ಮನೆಗೆ ಪೊಲೀಸರು?

ಇದು 10ನೇ ಸೀಸನ್​ ಆದ್ದರಿಂದ ಈ ಬಾರಿ ‘ಕನ್ನಡ ಬಿಗ್​ ಬಾಸ್​’ ಬಗ್ಗೆ ವೀಕ್ಷಕರು ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. ನಿರೀಕ್ಷೆಗೂ ಮೀರಿ ಟಿಆರ್​ಪಿ ಸಿಗುತ್ತಿದೆ. ಇದರಿಂದ ‘ಕಲರ್ಸ್​ ವಾಹಿನಿ’ ಕೂಡ ಖುಷಿಯಾಗಿದೆ. ಜಿಯೋ ಸಿನಿಮಾದಲ್ಲಿ ದಿನದ 24 ಗಂಟೆಯೂ ಲೈವ್​ ನೋಡುವ ಅವಕಾಶ ಇದೆ. ವಿನಯ್​ ಗೌಡ, ಸಂಗೀತಾ ಶೃಂಗೇರಿ, ಕಾರ್ತಿಕ್​ ಮಹೇಶ್​, ಡ್ರೋನ್​ ಪ್ರತಾಪ್​ ಮುಂತಾದವರು ಸ್ಟ್ರಾಂಗ್​ ಸ್ಪರ್ಧಿಗಳು ಎನಿಸಿಕೊಂಡಿದ್ದಾರೆ. 6ನೇ ವಾರದಲ್ಲಿ ಹಣಾಹಣಿ ಮುಂದುವರಿದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು