AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ನಲ್ಲಿ ಜೋಡಿ ಆಗಿದ್ದೂ ಇವರೇ, ಕೇಸ್​ ಹಾಕಿಸಿಕೊಂಡಿದ್ದೂ ಇವರೇ: ಎಂಥ ಕಾಕತಾಳೀಯ

ಬಿಗ್​ ಬಾಸ್​ ಮನೆಯಲ್ಲಿ ಕೆಲವರ ನಡುವೆ ಬಾಂಧವ್ಯ ಬೆಳೆಯುತ್ತದೆ. ಈ ಬಾರಿ ವರ್ತೂರು ಸಂತೋಷ್​ ಮತ್ತು ತನಿಷಾ ಕುಪ್ಪಂಡ ನಡುವೆ ಅಂತಹ ಒಂದು ಸ್ನೇಹ ಬೆಳೆದಿದೆ. ಅವರಿಬ್ಬರ ನಡುವೆ ದಿನದಿಂದ ದಿನಕ್ಕೆ ಆಪ್ತತೆ ಹೆಚ್ಚುತ್ತಿರುವುದನ್ನು ಎಲ್ಲರೂ ಗಮನಿಸುತ್ತಿದ್ದಾರೆ. ಕಾಕತಾಳೀಯ ಎಂದರೆ ಇವರಿಬ್ಬರು ವಿವಾದ ಮಾಡಿಕೊಂಡಿದ್ದಾರೆ.

ಬಿಗ್​ ಬಾಸ್​ನಲ್ಲಿ ಜೋಡಿ ಆಗಿದ್ದೂ ಇವರೇ, ಕೇಸ್​ ಹಾಕಿಸಿಕೊಂಡಿದ್ದೂ ಇವರೇ: ಎಂಥ ಕಾಕತಾಳೀಯ
ವರ್ತೂರು ಸಂತೋಷ್​, ತನಿಷಾ ಕುಪ್ಪಂಡ
Follow us
ಮದನ್​ ಕುಮಾರ್​
|

Updated on: Nov 15, 2023 | 6:23 PM

‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (Bigg Boss Kannada) ರಿಯಾಲಿಟಿ ಶೋನಲ್ಲಿ ಕೆಲವು ಸ್ಪರ್ಧಿಗಳು ಸಖತ್​ ಸುದ್ದಿ ಆಗುತ್ತಿದ್ದಾರೆ. ಆಟದ ಕಾರಣಕ್ಕೆ ಸುದ್ದಿಯಾದರೆ ಪರವಾಗಿಲ್ಲ. ಆದರೆ ಹೊರ ಜಗತ್ತಿನ ವಿಚಾರಕ್ಕೆ ಕಿರಿಕ್​ ಮಾಡಿಕೊಂಡು ಸುದ್ದಿಯಾದರೆ ಸಂಕಷ್ಟ ಎದುರಾಗುತ್ತದೆ. ಸದ್ಯ ವರ್ತೂರು ಸಂತೋಷ್​ ಮತ್ತು ತನಿಷಾ ಕುಪ್ಪಂಡ (Tanisha Kuppanda) ಅವರು ಈ ರೀತಿ ಸುದ್ದಿ ಆಗಿದ್ದಾರೆ. ಕಾಕತಾಳೀಯ ಏನಂದರೆ, ಇವರಿಬ್ಬರು ಬಿಗ್​ ಬಾಸ್​ ಮನೆಯೊಳಗೆ ಜೋಡಿಯಾಗಿದ್ದಾರೆ. ದೊಡ್ಮನೆಯ ಹೊರಗೆ ಇವರ ಹೆಸರುಗಳು ವಿವಾದಕ್ಕೆ ಸಿಲುಕಿವೆ. ಜಾತಿ ನಿಂದನೆ ಮಾಡಿದ ಆರೋಪದಲ್ಲಿ ತನಿಷಾ ಕುಪ್ಪಂಡ ಅವರ ಮೇಲೆ ದೂರು ದಾಖಲಾಗಿದೆ. ಹುಲಿ ಉಗುರು ಹೊಂದಿದ್ದ ಆರೋಪದಲ್ಲಿ ವರ್ತೂರು ಸಂತೋಷ್ (Varthur Santhosh)​ ಈಗಾಗಲೇ ಜೈಲಿಗೆ ಹೋಗಿ ಬಂದಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಕೆಲವರ ನಡುವೆ ಬಾಂಧವ್ಯ ಬೆಳೆಯುತ್ತದೆ. ಈ ಬಾರಿ ವರ್ತೂರು ಸಂತೋಷ್​ ಮತ್ತು ತನಿಷಾ ಕುಪ್ಪಂಡ ನಡುವೆ ಅಂತಹ ಒಂದು ಸ್ನೇಹ ಬೆಳೆದಿದೆ. ಕಾಕತಾಳೀಯ ಎಂದರೆ ಇವರಿಬ್ಬರು ವಿವಾದ ಮಾಡಿಕೊಂಡಿದ್ದಾರೆ. ಇಬ್ಬರಿಗೂ ಕಾನೂನಿನ ಸಂಕಷ್ಟ ಎದುರಾಗಿದೆ. ವರ್ತೂರು ಸಂತೋಷ್​ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿ ಬಿಗ್​ ಬಾಸ್​ ಮನೆಗೆ ಮರುಪ್ರವೇಶ ಪಡೆದಿದ್ದರೆ, ತನಿಷಾ ಕುಪ್ಪಂಡ ಅವರು ಅರೆಸ್ಟ್​ ಆಗುವ ಸಾಧ್ಯತೆ ಇದೆ. ಯಾವ ಕ್ಷಣದಲ್ಲಾದರೂ ಇವರಿಬ್ಬರು ಬಿಗ್​ ಬಾಸ್​ ಮನೆಯಿಂದ ಹೊರಗೆ ಬರಬೇಕಾಗಬಹುದು.

ಇದನ್ನೂ ಓದಿ: ಜಾತಿ ನಿಂದನೆ ಮಾಡಿದ ಬಿಗ್​ ಬಾಸ್​ ಸ್ಪರ್ಧಿ ತನಿಷಾಗೆ ಕಾದಿದೆ ಸಂಕಷ್ಟ

ಒಮ್ಮೆ ಜೈಲಿಗೆ ಹೋಗಿ ಮತ್ತೊಮ್ಮೆ ಬಿಗ್​ ಬಾಸ್​ ಮನೆ ಪ್ರವೇಶಿಸಿದ ಬಳಿಕ ವರ್ತೂರು ಸಂತೋಷ್​ ಅವರು ಡಲ್​ ಆಗಿದ್ದರು. ಆಟವನ್ನು ಅರ್ಧಕ್ಕೆ ನಿಲ್ಲಿಸಲು ಅವರು ತೀರ್ಮಾನಿಸಿದ್ದರು. ಆದರೆ ನಿರೂಪಕ ಕಿಚ್ಚ ಸುದೀಪ್​, ಅತಿಥಿಯಾಗಿ ಬಂದಿದ್ದ ಸುಷ್ಮಾ ರಾವ್​ ಹಾಗು ಬಿಗ್​ ಬಾಸ್​ ಮನೆಯೊಳಗಿನ ಸ್ಪರ್ಧಿಗಳು ವರ್ತೂರು ಸಂತೋಷ್​ ಅವರ ಮನ ಒಲಿಸಲು ಪ್ರಯತ್ನಿಸಿದರು. ಅಂತಿಮವಾಗಿ ತಾಯಿಯೇ ಬಂದು ಧೈರ್ಯ ತುಂಬಿದ ಬಳಿಕ ವರ್ತೂರು ಸಂತೋಷ್​ ಅವರು ಬಿಗ್ ಬಾಸ್​ ಆಟದಲ್ಲಿ ಮುಂದುವರಿಯಲು ನಿರ್ಧರಿಸಿದರು. ತನಿಶಾ ಮತ್ತು ವರ್ತೂರು ಸಂತೋಷ್​ ನಡುವೆ ದಿನದಿಂದ ದಿನಕ್ಕೆ ಆಪ್ತತೆ ಹೆಚ್ಚುತ್ತಿರುವುದನ್ನು ಎಲ್ಲರೂ ಗಮನಿಸುತ್ತಿದ್ದಾರೆ.

ಇದನ್ನೂ ಓದಿ: ತನಿಷಾ ಕುಪ್ಪಂಡ ವಿಚಾರಣೆ: ಬಿಗ್​ಬಾಸ್ ಮನೆಗೆ ಪೊಲೀಸರು?

ಇದು 10ನೇ ಸೀಸನ್​ ಆದ್ದರಿಂದ ಈ ಬಾರಿ ‘ಕನ್ನಡ ಬಿಗ್​ ಬಾಸ್​’ ಬಗ್ಗೆ ವೀಕ್ಷಕರು ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. ನಿರೀಕ್ಷೆಗೂ ಮೀರಿ ಟಿಆರ್​ಪಿ ಸಿಗುತ್ತಿದೆ. ಇದರಿಂದ ‘ಕಲರ್ಸ್​ ವಾಹಿನಿ’ ಕೂಡ ಖುಷಿಯಾಗಿದೆ. ಜಿಯೋ ಸಿನಿಮಾದಲ್ಲಿ ದಿನದ 24 ಗಂಟೆಯೂ ಲೈವ್​ ನೋಡುವ ಅವಕಾಶ ಇದೆ. ವಿನಯ್​ ಗೌಡ, ಸಂಗೀತಾ ಶೃಂಗೇರಿ, ಕಾರ್ತಿಕ್​ ಮಹೇಶ್​, ಡ್ರೋನ್​ ಪ್ರತಾಪ್​ ಮುಂತಾದವರು ಸ್ಟ್ರಾಂಗ್​ ಸ್ಪರ್ಧಿಗಳು ಎನಿಸಿಕೊಂಡಿದ್ದಾರೆ. 6ನೇ ವಾರದಲ್ಲಿ ಹಣಾಹಣಿ ಮುಂದುವರಿದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್