AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತನಿಷಾ ನನಗೆ ಅಕ್ಕ ಇದ್ದಂತೆ, ನೋವಾಗಿದ್ದರೆ ಅವರಿಗೆ ಕ್ಷಮೆ ಕೇಳುತ್ತೇನೆ’; ನೇರವಾಗಿ ಹೇಳಿದ ವರ್ತೂರು ಸಂತೋಷ್

ತನಿಷಾ ಕುಪ್ಪಂಡ ಹಾಗೂ ವರ್ತೂರು ಸಂತೋಷ್ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನ ಮನರಂಜನೆ ನೀಡಿದರು. ಇಬ್ಬರೂ ಒಟ್ಟಾಗಿ ಡ್ಯಾನ್ಸ್ ಮಾಡಿದ್ದು ಇದೆ. ಈ ಜೋಡಿಯನ್ನು ಅನೇಕರು ಇಷ್ಟಪಟ್ಟರು. ಇವರು ದೊಡ್ಮನೆಯಿಂದ ಹೊರ ಬಂದ ಬಳಿಕವೂ ಒಟ್ಟಾಗಿ ಕಾಣಿಸಿಕೊಂಡ ಉದಾಹರಣೆ ಇದೆ. ಆಗ ಕೆಲವು ವದಂತಿಗಳು ಹಬ್ಬಿದ್ದು ಸುಳ್ಳಲ್ಲ.

‘ತನಿಷಾ ನನಗೆ ಅಕ್ಕ ಇದ್ದಂತೆ, ನೋವಾಗಿದ್ದರೆ ಅವರಿಗೆ ಕ್ಷಮೆ ಕೇಳುತ್ತೇನೆ’; ನೇರವಾಗಿ ಹೇಳಿದ ವರ್ತೂರು ಸಂತೋಷ್
ಸಂತೋಷ್-ತನಿಷಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 30, 2025 | 3:02 PM

Share

ವರ್ತೂರು ಸಂತೋಷ್ ಹಾಗೂ ಬೆಂಕಿ ತನಿಷಾ ಕುಪ್ಪಂಡ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10ರಲ್ಲಿ ಒಟ್ಟಾಗಿ ಸ್ಪರ್ಧೆ ಮಾಡಿದ್ದರು. ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿತ್ತು. ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಇವರ ಕೆಮಿಸ್ಟ್ರಿ ನೋಡಿ ಎಲ್ಲರೂ ಫಿದಾ ಆಗಿದ್ದರು ಎಂದರೂ ತಪ್ಪಾಗಲಾರದು. ಈಗ ತನಿಷಾ ಅವರನ್ನು ವರ್ತೂರು ಸಂತೋಷ್ ಅವರು ಅಕ್ಕ ಎಂದು ಕರೆದಿದ್ದಾರೆ. ಅವರ ಬಳಿ ಕ್ಷಮೆ ಕೂಡ ಕೇಳಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತನಿಷಾ ಕುಪ್ಪಂಡ ಹಾಗೂ ವರ್ತೂರು ಸಂತೋಷ್ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನ ಮನರಂಜನೆ ನೀಡಿದರು. ಇಬ್ಬರೂ ಒಟ್ಟಾಗಿ ಡ್ಯಾನ್ಸ್ ಮಾಡಿದ್ದು ಇದೆ. ಈ ಜೋಡಿಯನ್ನು ಅನೇಕರು ಇಷ್ಟಪಟ್ಟರು. ಇವರು ದೊಡ್ಮನೆಯಿಂದ ಹೊರ ಬಂದ ಬಳಿಕವೂ ಒಟ್ಟಾಗಿ ಕಾಣಿಸಿಕೊಂಡ ಉದಾಹರಣೆ ಇದೆ. ಆಗ ಕೆಲವು ವದಂತಿಗಳು ಹಬ್ಬಿದ್ದು ಸುಳ್ಳಲ್ಲ.

ಇದನ್ನೂ ಓದಿ
Image
ರಿಷಬ್ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಅಳುವವರು ಈ ವಿಡಿಯೋ ನೋಡಿ
Image
ಅನುಶ್ರೀ ಹನಿಮೂನ್ ಫೋಟೋಗೆ ಬಂತು ಆ ವಿಶೇಷ ಕಮೆಂಟ್
Image
ಬಿಗ್ ಬಾಸ್ ಮನೆಯಿಂದ ಮೊದಲ ವಾರವೇ ಎಲಿಮಿನೇಟ್ ಆಗಲಿದ್ದಾರೆ ಮಲ್ಲಮ್ಮ?
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

ವರ್ತೂರು ಸಂತೋಷ್ ಹಾಗೂ ತನಿಷಾ ಕುಪ್ಪಂಡ ಮದುವೆ ಆಗಬೇಕು ಎಂದು ಕೆಲವು ಅಭಿಮಾನಿಗಳು ಬಯಸಿದ್ದೂ ಇದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಳ್ಳಲಾಗಿತ್ತು. ಆದರೆ, ಇದನ್ನು ವರ್ತೂರು ಸಂತೋಷ್ ಅಲ್ಲಗಳೆಯುತ್ತಲೇ ಬರುತ್ತಿದ್ದರು. ನಾವಿಬ್ಬರೂ ಫ್ರೆಂಡ್ಸ್ ಎನ್ನುತ್ತಿದ್ದರು. ಈಗ ತನಿಷಾನ ಅಕ್ಕ ಎಂದು ಕರೆದಿದ್ದಾರೆ. ‘ಸಿನಿ ಸ್ಟೋರ್ ಕನ್ನಡ’ ಇನ್​ಸ್ಟಾ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ.

‘ತನಿಷಾ ಅವರು ನನ್ನ ಜೊತೆ ಬಿಗ್ ಬಾಸ್ ಸ್ಪರ್ಧಿ ಆಗಿದ್ದರು. ಅವರಿಗೆ ಅಕ್ಕನ ಸ್ಥಾನ ನೀಡಿದ್ದೇನೆ. ಕೆಲವೊಂದು ಕೇಳಿ ನನಗೆ ಕಿವಿ ತೂತು ಬಿತ್ತು. ಅವರಿಗೂ ಕೆಲವೊಮ್ಮೆ ಮುಜುಗರ ಆಯ್ತು. ಬಿಗ್ ಬಾಸ್​ನಲ್ಲಿ ಅವರು ಕೆಂಪು ಬಣ್ಣದ ಸೀರೆ ಉಟ್ಟು ಬಂದಾಗ ನಾನು ಅವರಿಗೆ ಅಕ್ಕ ಎಂದೇ ಕರೆದಿದ್ದು. ವಿಡಿಯೋನ ಈಗಲೂ ಬೇಕಿದ್ರೆ ನೋಡಬಹುದು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಗ್​ಬಾಸ್ ವೇದಿಕೆ ಮೇಲೆ ವರ್ತೂರು ಸಂತೋಷ್ ಅನ್ನು ನೆನಪಿಸಿಕೊಂಡ ಸುದೀಪ್

‘ಇಬ್ಬರಿಗೂ ಮುಜುಗರ ಆಗಿದೆ. ನನ್ನ ವೈಯಕ್ತಿಕ ನಿಮ್ಮ ಬಳಿ ಕೇಳೋದು, ನಿಮ್ಮ ವೈಯಕ್ತಿಕ ನನ್ನ ಬಳಿ ಕೇಳೋದು ಎಷ್ಟು ಸರಿ? ನನ್ನಿಂದ ಬೇಸರ ಆಗಿದ್ದರೆ ತನಿಷಾಗೆ ಹಾಗೂ ಅವರ ಫ್ಯಾನ್ಸ್​ಗೆ ಕ್ಷಮೆ ಕೇಳುತ್ತೇನೆ. ತನಿಷಾಗೆ ನನ್ನ ಅಕ್ಕನ ಸ್ಥಾನ’ ಎಂದು ವರ್ತೂರು ಸಂತೋಷ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ