AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡಸರ ಜತೆ ಹಾಸಿಗೆ ಹಂಚಿಕೊಳ್ಳಲಾರೆ: ಬಿಗ್ ಬಾಸ್ ಆಫರ್ ತಿರಸ್ಕರಿಸಿದ ತನುಶ್ರೀ ದತ್ತ

ಬಾಲಿವುಡ್ ನಟಿ ತನುಶ್ರೀ ದತ್ತ ಅವರಿಗೆ ಬಿಗ್ ಬಾಸ್ ಕಾರ್ಯಕ್ರಮದ ಆಯೋಜಕರಿಂದ ಆಫರ್ ಬಂದಿತ್ತು. ಬರೋಬ್ಬರಿ 1.65 ಕೋಟಿ ರೂಪಾಯಿ ಸಂಭಾವನೆ ನೀಡುವುದಾಗಿಯೂ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ತನುಶ್ರೀ ದತ್ತ ಅವರು ಅದನ್ನು ಒಪ್ಪಿಕೊಳ್ಳಲಿಲ್ಲ. ಈ ಬಗ್ಗೆ ಅವರು ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದಾರೆ.

ಗಂಡಸರ ಜತೆ ಹಾಸಿಗೆ ಹಂಚಿಕೊಳ್ಳಲಾರೆ: ಬಿಗ್ ಬಾಸ್ ಆಫರ್ ತಿರಸ್ಕರಿಸಿದ ತನುಶ್ರೀ ದತ್ತ
Tanushree Dutta
ಮದನ್​ ಕುಮಾರ್​
|

Updated on: Sep 16, 2025 | 9:02 PM

Share

ನಟಿ ತನುಶ್ರೀ ದತ್ತ (Tanushree Dutta) ಅವರು ಈಗ ಸಿನಿಮಾಗಳಿಂದ ದೂರ ಉಳಿದುಕೊಂಡಿದ್ದಾರೆ. ಒಂದು ಕಾಲದಲ್ಲಿ ಅವರು ‘ಆಶಿಕ್ ಬನಾಯಾ ಆಪ್ನೆ’ ರೀತಿಯ ಸಿನಿಮಾಗಳಿಂದ ಸಖತ್ ಜನಪ್ರಿಯತೆ ಗಳಿಸಿದ್ದರು. ಆದರೆ ನಂತರದಲ್ಲಿ ಅವರು ವಿವಾದಗಳಿಂದಲೇ ಹೆಚ್ಚು ಸುದ್ದಿ ಆದರು. ಈಗಲೂ ಅವರು ಸಿನಿಮಾಗಳ ಹೊರತಾಗಿಯೇ ಸುದ್ದಿ ಆಗುತ್ತಿದ್ದಾರೆ. ಅವರಿಗೆ ಬಿಗ್ ಬಾಸ್ ಶೋಗೆ (Bigg Boss) ಹೋಗುವ ಆಫರ್ ಬಂದಿತ್ತು ಎನ್ನಲಾಗಿದೆ. ಆದರೆ ಅವರು ಆ ಅವಕಾಶವನ್ನು ತಿರಸ್ಕರಿಸಿದ್ದಾರೆ. ಅಲ್ಲದೇ ಅದಕ್ಕೆ ಕಾರಣ ಏನು ಎಂಬುದನ್ನು ಕೂಡ ವಿವರಿಸಿದ್ದಾರೆ.

ಕನ್ನಡ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹೋಲಿಸಿದರೆ ಹಿಂದಿಯಲ್ಲಿ ಬಿಗ್ ಬಾಸ್ ಶೋ ತುಂಬಾ ಬೋಲ್ಡ್ ಆಗಿ ನಡೆಯುತ್ತದೆ. ಮಹಿಳಾ ಸ್ಪರ್ಧಿಗಳು ಮತ್ತು ಪುರುಷ ಸ್ಪರ್ಧಿಗಳು ಒಂದೇ ಹಾಸಿಗೆಯಲ್ಲಿ ನಿದ್ರಿಸಿದ ಉದಾಹರಣೆ ಇದೆ. ಈ ಕಾರಣಕ್ಕೆ ತನುಶ್ರೀ ದತ್ತ ಅವರು ಬಿಗ್ ಬಾಸ್ ಕಾರ್ಯಕ್ರಮವನ್ನು ಜರಿದಿದ್ದಾರೆ. ‘ನಾನು ಅಷ್ಟು ಚೀಪ್ ಅಲ್ಲ’ ಎಂದು ಅವರು ಹೇಳಿದ್ದಾರೆ.

‘ಅಂತಹ ಕಾರ್ಯಕ್ರಮಕ್ಕೆ ನಾನು ಹೋಗುತ್ತೇನೆ ಎಂದು ನಿಮಗೆ ಅನಿಸುತ್ತ? ಅಂಥ ಜಾಗದಲ್ಲಿ ನಾನು ಇರಲಾರೆ. ಆ ರೀತಿ ನಾನು ನನ್ನ ಕುಟುಂಬದ ಜೊತೆಗೂ ಇರಲ್ಲ. ನನಗೆ ಬಿಗ್ ಬಾಸ್ ಕಾರ್ಯಕ್ರಮದ ಮೇಲೆ ಎಂದಿಗೂ ಆಸಕ್ತಿ ಬಂದಿಲ್ಲ, ಬರುವುದೂ ಇಲ್ಲ. ಅವರು ನನಗೆ 1.65 ಕೋಟಿ ರೂಪಾಯಿ ಸಂಭಾವನೆ ಆಫರ್ ಮಾಡಿದ್ದರು. ನನ್ನ ಹಾಗೆ ಇರುವ ಇನ್ನೋರ್ವ ಸೆಲೆಬ್ರಿಟಿಗೂ ಅಷ್ಟೇ ಹಣ ನೀಡಿದರು’ ಎಂದಿದ್ದಾರೆ ತನುಶ್ರೀ.

‘ಬಿಗ್ ಬಾಸ್ ಕಾರ್ಯಕ್ರಮದ ಸ್ಟೈಲಿಸ್ಟ್ ಕಡೆಯಿಂದ ನನಗೆ ಕರೆ ಬಂದಿತ್ತು. ಅವರು ಮನವಿ ಮಾಡಿದರು. ನನ್ನ ಡಯೆಟ್ ನೋಡಿಕೊಳ್ಳುವುದಾಗಿಯೂ ಅವರು ಹೇಳಿದರು. ಏನೇ ಕೊಟ್ಟರು ನಾನು ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹೋಗಲ್ಲ ಅಂತ ಅವರಿಗೆ ಹೇಳಿದೆ’ ಎಂದಿದ್ದಾರೆ ತನುಶ್ರೀ ದತ್ತ.

ಇದನ್ನೂ ಓದಿ: ತನುಶ್ರೀ ದತ್ತಾಗೆ ಕುಟುಂದವರಿಂದಲೇ ಕಿರುಕುಳ; ಕಣ್ಣೀರು ಹಾಕಿದ ನಟಿ

‘ಗಂಡಸರು ಮತ್ತು ಹೆಂಗಸರು ಒಂದೇ ಕೋಣೆಯಲ್ಲಿ ಮಲಗುತ್ತಾರೆ. ಒಟ್ಟಿಗೆ ಫೈಟ್ ಮಾಡುತ್ತಾರೆ. ನಾನು ಅದನ್ನು ಮಾಡಲಾರೆ. ನನ್ನ ಡಯೆಟ್ ತುಂಬ ನಿಖರವಾಗಿದೆ. ಒಂದು ರಿಯಾಲಿಟಿ ಶೋಗಾಗಿ ಗಂಡಸರ ಜೊತೆ ಬೆಡ್ ಹಂಚಿಕೊಳ್ಳುವ ಮಹಿಳೆಯ ರೀತಿ ನಾನು ಕಾಣುತ್ತೇನಾ? ನಾನು ಅಷ್ಟು ಚೀಪ್ ಅಲ್ಲ. ನನ್ನ ಖಾಸಗಿತನ ಅಮೂಲ್ಯವಾದದ್ದು. ನನ್ನ ಪಾಡಿಗೆ ನೆಮ್ಮದಿಯಿಂದ ಕೆಲಸ ಮಾಡಲು ಬಿಟ್ಟರೆ ಅದಕ್ಕಿಂತ ಜಾಸ್ತಿ ಸಂಪಾದನೆ ಮಾಡುತ್ತೇನೆ ಎಂಬುದು ನನಗೆ ಗೊತ್ತು’ ಎಂದು ತನುಶ್ರೀ ದತ್ತ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!