AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಸ್ಪರ್ಧಿಗಳು ಎಂದಿಗೂ ಮರೆಯದ ಉಪಕಾರ ಮಾಡಿದ ನಟಿ ತಾರಾ

ತಾರಾ ಅವರ ಮಾತಿಗೆ ಬಿಗ್ ಬಾಸ್ ತಲೆದೂಗಿಸಿದ್ದಾರೆ. ಮನೆಯಲ್ಲಿ ತರಕಾರಿ, ಕಾಫಿ ಪೌಡರ್, ಉಪ್ಪು ಎಲ್ಲವೂ ಖಾಲಿ ಆಗಿತ್ತು. ಈ ವಿಚಾರ ಕೇಳಿ ತಾರಾ ನೊಂದುಕೊಂಡರು. ಹೀಗಾಗಿ, ಅವರು ಬಿಗ್ ಬಾಸ್ ಬಳಿ ಈ ಬಗ್ಗೆ ಮನವಿ ಮಾಡಿದರು. ಇದಕ್ಕೆ ಬಿಗ್ ಬಾಸ್ ಸಮ್ಮತಿಸಿದರು.

ಬಿಗ್ ಬಾಸ್ ಸ್ಪರ್ಧಿಗಳು ಎಂದಿಗೂ ಮರೆಯದ ಉಪಕಾರ ಮಾಡಿದ ನಟಿ ತಾರಾ
ತಾರಾ
ರಾಜೇಶ್ ದುಗ್ಗುಮನೆ
|

Updated on:Oct 25, 2023 | 7:40 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ ಮೂರನೇ ವಾರಕ್ಕೆ ಕಾಲಿಟ್ಟಿದೆ. 14 ಸ್ಪರ್ಧಿಗಳ ಮಧ್ಯೆ ದೊಡ್ಮನೆಯಲ್ಲಿ ಸ್ಪರ್ಧೆ ಏರ್ಪಟ್ಟಿದೆ. ಎಂಟು ಮಂದಿ ನಾಮಿನೇಟ್ ಆಗಿದ್ದು, ಆ ಪೈಕಿ ಒಬ್ಬರು ಈ ವಾರ ಔಟ್ ಆಗಲಿದ್ದಾರೆ. ಈ ಮಧ್ಯೆ ನಟಿ ತಾರಾ ಅವರು ಬಿಗ್ ಬಾಸ್ ಮನೆಗೆ ಅತಿಥಿ ಆಗಿ ಬಂದಿದ್ದರು. ಅವರು ಬಿಗ್ ಬಾಸ್ (Bigg Boss) ಸ್ಪರ್ಧಿಗಳಿಗೆ ದೊಡ್ಡ ಸಹಾಯ ಮಾಡಿದ್ದಾರೆ. ಈ ಸಹಾಯವನ್ನು ಮನೆ ಮಂದಿ ಮರೆಯಲು ಸಾಧ್ಯವೇ ಇಲ್ಲ. ಅಕ್ಟೋಬರ್ 24ರ ಎಪಿಸೋಡ್​ನಲ್ಲಿ ಈ ವಿಚಾರ ಹೈಲೈಟ್ ಆಗಿದೆ.

ಸ್ಪರ್ಧಿಗಳ ಮಾತನ್ನು ಬಿಗ್ ಬಾಸ್ ಕೇಳುವುದಿಲ್ಲ. ಇಲ್ಲಿ ಬಿಗ್ ಬಾಸ್ ಆದೇಶವೇ ಅಂತಿಮ. ಆದರೆ, ತಾರಾ ಅವರ ಮಾತಿಗೆ ಬಿಗ್ ಬಾಸ್ ತಲೆದೂಗಿಸಿದ್ದಾರೆ. ಮನೆಯಲ್ಲಿ ತರಕಾರಿ, ಕಾಫಿ ಪೌಡರ್, ಉಪ್ಪು ಎಲ್ಲವೂ ಖಾಲಿ ಆಗಿತ್ತು. ಈ ವಿಚಾರ ಕೇಳಿ ತಾರಾ ನೊಂದುಕೊಂಡರು. ಹೀಗಾಗಿ, ಅವರು ಬಿಗ್ ಬಾಸ್ ಬಳಿ ಈ ಬಗ್ಗೆ ಮನವಿ ಮಾಡಿದರು. ಇದಕ್ಕೆ ಬಿಗ್ ಬಾಸ್ ಸಮ್ಮತಿಸಿದರು.

‘ಕಾಫಿ ಪೌಡರ್ ಲಕ್ಷುರಿ ವಸ್ತು. ಹೀಗಾಗಿ, ಅದನ್ನು ಕಳಿಸೋಕೆ ಸಾಧ್ಯವಿಲ್ಲ. ಉಳಿದ ಎಲ್ಲಾ ಐಟಂಗಳನ್ನು ನಾವು ಕಳುಹಿಸುತ್ತೇವೆ’ ಎಂದು ಬಿಗ್ ಬಾಸ್ ಹೇಳಿದರು. ಇದನ್ನು ಕೇಳಿ ಮನೆ ಮಂದಿ ಸಖತ್ ಖುಷಿಪಟ್ಟರು. ಕೆಲವೇ ನಿಮಿಷಗಳಲ್ಲಿ ಸ್ಟೋರೂಂಗೆ ತರಕಾರಿ, ಉಪ್ಪು ಬಂತು. ಬೇಕಷ್ಟು ತರಕಾರಿಗಳನ್ನು ಬಿಗ್ ಬಾಸ್ ಕಳುಹಿಸಿಕೊಟ್ಟರು. ‘ತಾರಾ ಅವರೇ ಧನ್ಯವಾದ. ಬಿಗ್ ಬಾಸ್ ಮಾರ್ಕೆಟ್​ನೇ ಕಳುಹಿಸಿಕೊಟ್ಟಿದ್ದಾರೆ’ ಎಂದು ಮನೆ ಮಂದಿಯೆಲ್ಲ ಖುಷಿಯಿಂದ ಸಂಭ್ರಮಿಸಿದರು.

ಇದನ್ನೂ ಓದಿ: ಬಿಗ್ ಬಾಸ್​ ಮನೆಯಲ್ಲಿ ಶಾಕ್ ಮತ್ತು ಸರ್​ಪ್ರೈಸ್; ಹಿರಿಯ ನಟಿಯ ಎಂಟ್ರಿ

ಬಿಗ್ ಬಾಸ್ ಮನೆಯಲ್ಲಿ ಸಂಭ್ರಮದಿಂದ ನವರಾತ್ರಿ ಹಬ್ಬ ಆಚರಿಸಲಾಗಿದೆ. ಈ ಆಚರಣೆಗೆಂದೇ ತಾರಾ ಅವರು ಆಗಮಿಸಿದ್ದರು. ಅವರು ಮಾಡಿದ ಉಪಕಾರಕ್ಕೆ ಮನೆ ಮಂದಿ ಸಖತ್ ಖುಷಿಪಟ್ಟಿದ್ದಾರೆ. ಈ ಉಪಕಾರವನ್ನು ಎಂದಿಗೂ ಮರೆಯುವುದಿಲ್ಲ ಎಂದು ಅವರು ಹೇಳಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ವಿಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:29 am, Wed, 25 October 23

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ