AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಸ್ಪರ್ಧಿಗಳು ಎಂದಿಗೂ ಮರೆಯದ ಉಪಕಾರ ಮಾಡಿದ ನಟಿ ತಾರಾ

ತಾರಾ ಅವರ ಮಾತಿಗೆ ಬಿಗ್ ಬಾಸ್ ತಲೆದೂಗಿಸಿದ್ದಾರೆ. ಮನೆಯಲ್ಲಿ ತರಕಾರಿ, ಕಾಫಿ ಪೌಡರ್, ಉಪ್ಪು ಎಲ್ಲವೂ ಖಾಲಿ ಆಗಿತ್ತು. ಈ ವಿಚಾರ ಕೇಳಿ ತಾರಾ ನೊಂದುಕೊಂಡರು. ಹೀಗಾಗಿ, ಅವರು ಬಿಗ್ ಬಾಸ್ ಬಳಿ ಈ ಬಗ್ಗೆ ಮನವಿ ಮಾಡಿದರು. ಇದಕ್ಕೆ ಬಿಗ್ ಬಾಸ್ ಸಮ್ಮತಿಸಿದರು.

ಬಿಗ್ ಬಾಸ್ ಸ್ಪರ್ಧಿಗಳು ಎಂದಿಗೂ ಮರೆಯದ ಉಪಕಾರ ಮಾಡಿದ ನಟಿ ತಾರಾ
ತಾರಾ
ರಾಜೇಶ್ ದುಗ್ಗುಮನೆ
|

Updated on:Oct 25, 2023 | 7:40 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ ಮೂರನೇ ವಾರಕ್ಕೆ ಕಾಲಿಟ್ಟಿದೆ. 14 ಸ್ಪರ್ಧಿಗಳ ಮಧ್ಯೆ ದೊಡ್ಮನೆಯಲ್ಲಿ ಸ್ಪರ್ಧೆ ಏರ್ಪಟ್ಟಿದೆ. ಎಂಟು ಮಂದಿ ನಾಮಿನೇಟ್ ಆಗಿದ್ದು, ಆ ಪೈಕಿ ಒಬ್ಬರು ಈ ವಾರ ಔಟ್ ಆಗಲಿದ್ದಾರೆ. ಈ ಮಧ್ಯೆ ನಟಿ ತಾರಾ ಅವರು ಬಿಗ್ ಬಾಸ್ ಮನೆಗೆ ಅತಿಥಿ ಆಗಿ ಬಂದಿದ್ದರು. ಅವರು ಬಿಗ್ ಬಾಸ್ (Bigg Boss) ಸ್ಪರ್ಧಿಗಳಿಗೆ ದೊಡ್ಡ ಸಹಾಯ ಮಾಡಿದ್ದಾರೆ. ಈ ಸಹಾಯವನ್ನು ಮನೆ ಮಂದಿ ಮರೆಯಲು ಸಾಧ್ಯವೇ ಇಲ್ಲ. ಅಕ್ಟೋಬರ್ 24ರ ಎಪಿಸೋಡ್​ನಲ್ಲಿ ಈ ವಿಚಾರ ಹೈಲೈಟ್ ಆಗಿದೆ.

ಸ್ಪರ್ಧಿಗಳ ಮಾತನ್ನು ಬಿಗ್ ಬಾಸ್ ಕೇಳುವುದಿಲ್ಲ. ಇಲ್ಲಿ ಬಿಗ್ ಬಾಸ್ ಆದೇಶವೇ ಅಂತಿಮ. ಆದರೆ, ತಾರಾ ಅವರ ಮಾತಿಗೆ ಬಿಗ್ ಬಾಸ್ ತಲೆದೂಗಿಸಿದ್ದಾರೆ. ಮನೆಯಲ್ಲಿ ತರಕಾರಿ, ಕಾಫಿ ಪೌಡರ್, ಉಪ್ಪು ಎಲ್ಲವೂ ಖಾಲಿ ಆಗಿತ್ತು. ಈ ವಿಚಾರ ಕೇಳಿ ತಾರಾ ನೊಂದುಕೊಂಡರು. ಹೀಗಾಗಿ, ಅವರು ಬಿಗ್ ಬಾಸ್ ಬಳಿ ಈ ಬಗ್ಗೆ ಮನವಿ ಮಾಡಿದರು. ಇದಕ್ಕೆ ಬಿಗ್ ಬಾಸ್ ಸಮ್ಮತಿಸಿದರು.

‘ಕಾಫಿ ಪೌಡರ್ ಲಕ್ಷುರಿ ವಸ್ತು. ಹೀಗಾಗಿ, ಅದನ್ನು ಕಳಿಸೋಕೆ ಸಾಧ್ಯವಿಲ್ಲ. ಉಳಿದ ಎಲ್ಲಾ ಐಟಂಗಳನ್ನು ನಾವು ಕಳುಹಿಸುತ್ತೇವೆ’ ಎಂದು ಬಿಗ್ ಬಾಸ್ ಹೇಳಿದರು. ಇದನ್ನು ಕೇಳಿ ಮನೆ ಮಂದಿ ಸಖತ್ ಖುಷಿಪಟ್ಟರು. ಕೆಲವೇ ನಿಮಿಷಗಳಲ್ಲಿ ಸ್ಟೋರೂಂಗೆ ತರಕಾರಿ, ಉಪ್ಪು ಬಂತು. ಬೇಕಷ್ಟು ತರಕಾರಿಗಳನ್ನು ಬಿಗ್ ಬಾಸ್ ಕಳುಹಿಸಿಕೊಟ್ಟರು. ‘ತಾರಾ ಅವರೇ ಧನ್ಯವಾದ. ಬಿಗ್ ಬಾಸ್ ಮಾರ್ಕೆಟ್​ನೇ ಕಳುಹಿಸಿಕೊಟ್ಟಿದ್ದಾರೆ’ ಎಂದು ಮನೆ ಮಂದಿಯೆಲ್ಲ ಖುಷಿಯಿಂದ ಸಂಭ್ರಮಿಸಿದರು.

ಇದನ್ನೂ ಓದಿ: ಬಿಗ್ ಬಾಸ್​ ಮನೆಯಲ್ಲಿ ಶಾಕ್ ಮತ್ತು ಸರ್​ಪ್ರೈಸ್; ಹಿರಿಯ ನಟಿಯ ಎಂಟ್ರಿ

ಬಿಗ್ ಬಾಸ್ ಮನೆಯಲ್ಲಿ ಸಂಭ್ರಮದಿಂದ ನವರಾತ್ರಿ ಹಬ್ಬ ಆಚರಿಸಲಾಗಿದೆ. ಈ ಆಚರಣೆಗೆಂದೇ ತಾರಾ ಅವರು ಆಗಮಿಸಿದ್ದರು. ಅವರು ಮಾಡಿದ ಉಪಕಾರಕ್ಕೆ ಮನೆ ಮಂದಿ ಸಖತ್ ಖುಷಿಪಟ್ಟಿದ್ದಾರೆ. ಈ ಉಪಕಾರವನ್ನು ಎಂದಿಗೂ ಮರೆಯುವುದಿಲ್ಲ ಎಂದು ಅವರು ಹೇಳಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ವಿಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:29 am, Wed, 25 October 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು