AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಾಪಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ನಟಿ

Tarak mehta ka ulta chasma: 15 ವರ್ಷಗಳಿಂದಲೂ ಪ್ರಸಾರವಾಗುತ್ತಿರುವ ಹಿಂದಿಯ ಜನಪ್ರಿಯ ತಾರಕ್ ಮೆಹ್ತಾ ಕಾ ಉಲ್ಟಾ ಚೆಷ್ಮಾ ಧಾರಾವಾಹಿ ನಟಿಯೊಬ್ಬರು ನಿರ್ಮಾಪಕನ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.

ನಿರ್ಮಾಪಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ನಟಿ
ತಾರಕ್ ಮೆಹ್ತಾ
ಮಂಜುನಾಥ ಸಿ.
|

Updated on: May 12, 2023 | 11:37 PM

Share

ಹಿಂದಿಯ ಜನಪ್ರಿಯ ಧಾರಾವಾಹಿ ‘ತಾರಕ್ ಮೆಹ್ತಾ ಕಾ ಉಲ್ಟಾ ಚಷ್ಮಾ’ (Tarak mehta ka ulta chasma) ಧಾರಾವಾಹಿಯ (Serial) ನಟಿಯೊಬ್ಬರು ಧಾರಾವಾಹಿ ನಿರ್ಮಾಪಕರ (Producer) ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ಧಾರಾವಾಹಿ ನಿರ್ಮಾಪಕ ಅಸಿತ್ ಕುಮಾರ್ ಮೋದಿ ಹಾಗೂ ಇನ್ನಿಬ್ಬರ ವಿರುದ್ಧ ಲೈಂಗಿಕ ಕಿರುಕುಳ ಹಾಗೂ ದುರ್ವತನೆಯ ಆರೋಪ ಮಾಡಿದ್ದರು. ಇದೀಗ ಆರೋಪಗಳಿಗೆ ನಿರ್ಮಾಪಕ ಮೋದಿ ಪ್ರತಿಕ್ರಿಯಿಸಿದ್ದು ನಟಿಯ ಆರೋಪಗಳು ಆಧಾರ ರಹಿತ ಎಂದಿದ್ದಾರೆ.

‘ತಾರಕ್ ಮೆಹ್ತಾ ಕಾ ಉಲ್ಟಾ ಚಷ್ಮಾ’ ಧಾರಾವಾಹಿಯು ಹಿಂದಿ ಭಾಷಿಕರ ಅಚ್ಚು ಮೆಚ್ಚಿನ ಧಾರಾವಾಹಿಯಾಗಿದ್ದು ಒಂದು ದಶಕಕ್ಕೂ ಹೆಚ್ಚು ಕಾಲದಿಂದ ಪ್ರಸಾರವಾಗುತ್ತಿದೆ. ಈ ಧಾರಾವಾಹಿ ಜೊತೆ ಸುಮಾರು 15 ವರ್ಷಗಳಿಂದಲೂ ಗುರುತಿಸಿಕೊಂಡಿದ್ದ ನಟಿಯೊಬ್ಬರು ನಿರ್ಮಾಪಕ ಅಸಿತ್ ಕುಮಾರ್ ಮೋದಿ, ಪ್ರಾಜೆಕ್ಟ್ ಹೆಡ್ ಸೊಹಾಲಿ ರೊಮಾನಿ ಹಾಗೂ ಕಾರ್ಯಕಾರಿ ನಿರ್ಮಾಪಕ ಜತಿನ್ ಬಜಾಜ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದು, ಮುಂಬೈ ಪೊಲೀಸ್, ಮಹಿಳಾ ಆಯೋಗಗಳಿಗೆ ಪತ್ರ ಬರೆದಿದ್ದಾರೆ.

ನಟಿಯು ದುರ್ವತನೆ ತೋರಿದ ಕಾರಣ ಆಕೆಯನ್ನು ಧಾರಾವಾಹಿಯಿಂದ ಹೊರಗೆ ಇಡಲಾಗಿದೆ ಎಂದಿರುವ ನಿರ್ಮಾಪಕ ಮೋದಿ, ನಟಿ ಮಾಡಿರುವ ಆರೋಪಗಳು ಸುಳ್ಳು, ನಟಿಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದಿದ್ದಾರೆ.

ನಟಿಯು ಮಾರ್ಚ್ 6 ರಂದು ಧಾರಾವಾಹಿಯಲ್ಲಿ ಕೊನೆಯ ಬಾರಿ ನಟಿಸಿದ್ದರು. ಅದಾದ ಬಳಿಕ ಯಾವುದೇ ಎಪಿಸೋಡ್​ನಲ್ಲಿ ಕಾಣಿಸಿಕೊಂಡಿಲ್ಲ. ನಟಿ, ಮಾಧ್ಯಮವೊಂದಕ್ಕೆ ನೀಡಿರುವ ಹೇಳಿಕೆಯಂತೆ, ಮಾರ್ಚ್ 7 ರಂದು ಹೋಲಿ ಇದ್ದ ಕಾರಣ ಕುಟುಂಬದೊಟ್ಟಿಗೆ ಸಮಯ ಕಳೆಯಲು ಎರಡು ಗಂಟೆಗಳ ಕಾಲ ಬ್ರೇಕ್ ಕೇಳಿದ್ದರಂತೆ. ಆದರೆ ಇತರೆ ನಟರಿಗೆ ಬ್ರೇಕ್ ಕೊಟ್ಟು ತಮಗೆ ಕೊಡಲಿಲ್ಲವಂತೆ, ಬಲವಂತ ಮಾಡಿದಾಗ ಸೊಹಾಲಿ ರೊಮಾನಿ ಕೆಟ್ಟದಾಗಿ ನಡೆದುಕೊಂಡು ಬೈದರಂತೆ. ತಾವು ಸೆಟ್​ನಿಂದ ಹೊರನಡೆಯಲು ಯತ್ನಿಸಿದಾಗ ಜತಿನ್ ಬಜಾಜ್ ತಮ್ಮ ಕಾರನ್ನು ಅಡ್ಡಗಟ್ಟಲು ಯತ್ನಿಸಿದರಂತೆ. ಅದಾದ ಬಳಿಕ ನೊಟೀಸ್ ಕಳಿಸಿದ್ದಾರೆ, ಆದರೆ ಅದಕ್ಕೆ ವಾಟ್ಸ್​ಆಪ್ ಮೂಲಕ ಪ್ರತಿಕ್ರಿಯಿಸಿದ ನಟಿ, ಲೈಂಗಿಕ ಕಿರುಕುಳದ ದೂರು ನೀಡುವುದಾಗಿ ಎಚ್ಚರಿಸಿದ್ದಾರೆ. ಆಗ ಆ ಕಡೆಯಿಂದ ಹಣ ವಸೂಲಿಗೆ ಯತ್ನ ಮಾಡುತ್ತಿದ್ದೀಯ ಎಂದು ಪ್ರತ್ಯುತ್ತರಿಸಿದ್ದಾರೆ.

ಇದನ್ನೂ ಓದಿ:ಶೀಘ್ರವೇ ಪೂರ್ಣಗೊಳ್ಳಲಿದೆ ‘ಜೊತೆ ಜೊತೆಯಲಿ’ ಧಾರಾವಾಹಿ’; ಕಾರಣ ಏನು?

ನಟಿ ಹೇಳಿರುವಂತೆ, ಧಾರಾವಾಹಿ ನಿರ್ಮಾಪಕ ಮೋದಿ, ಹಲವು ಬಾರಿ ಧಾರಾವಾಹಿಯ ಹಲವು ನಟಿಯರೊಟ್ಟಿಗೆ ಕೆಟ್ಟದಾಗಿ ವರ್ತಿಸಿದ್ದಾರಂತೆ. ಅಸಭ್ಯ ಕಮೆಂಟ್ ಮಾಡುವುದು, ಸುಖಾ-ಸುಮ್ಮನೆ ಮೈಮುಟ್ಟುವುದು ಮಾಡಿದ್ದಾರಂತೆ. ಸಿಂಗಪುರದಲ್ಲಿ ಚಿತ್ರೀಕರಣ ಮಾಡುವಾಗ ನಿರ್ಮಾಪಕ ಮೋದಿ, ನಟಿಯನ್ನು ತಮ್ಮ ರೂಂಗೆ ಆಹ್ವಾನಿಸಿದ್ದರಂತೆ. ಮತ್ತೊಮ್ಮೆ ಸೆಕ್ಸಿ ಎಂದು ಕರೆದು ಕೆನ್ನೆ ಗಿಂಡಿದ್ದಾಗಿಯೂ ನಟಿ ಹೇಳಿಕೊಂಡಿದ್ದಾರೆ. ತಮಗೆ ಮಾತ್ರವೇ ಅಲ್ಲದೆ ಧಾರಾವಾಹಿಯಲ್ಲಿ ನಟಿಸುತ್ತಿರುವ ಇತರ ನಟಿಯರಿಗೂ ಆ ನಿರ್ಮಾಪಕ ಸಮಸ್ಯೆ ಕೊಟ್ಟಿದ್ದಾನೆ ಎಂದು ಹೇಳಿರುವ ನಟಿ, ಆ ಧಾರಾವಾಹಿಯಲ್ಲಿ ನಟಿಸುವ ಪುರುಷರಿಗೆ ಅತಿಯಾದ ಪ್ರಾಮುಖ್ಯತೆ ನೀಡುತ್ತಾರೆ. ಮಹಿಳೆಯರನ್ನು ಕೀಳಾಗಿ ಕಾಣುತ್ತಾರೆ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!