AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಛೋಟಾ ಚಾಂಪಿಯನ್ ಫಿನಾಲೆ’; ಅದ್ದೂರಿ ವೇದಿಕೆ ಮೇಲೆ ‘ತತ್ಸಮ ತದ್ಭವ’ ಸಿನಿಮಾ ತಂಡ

‘ಛೋಟಾ ಚಾಂಪಿಯನ್’ ಹಲವು ಮಕ್ಕಳಿಗೆ ವೇದಿಕೆ ಆಗಿದೆ. ಇತ್ತೀಚೆಗೆ ‘ಛೋಟಾ ಚಾಂಪಿಯನ್ಸ್’ ಫಿನಾಲೆ ತುಮಕೂರಿನಲ್ಲಿ ನಡೆದಿದೆ. ಈ ವಾರ ಇದು ಪ್ರಸಾರ ಕಾಣುತ್ತಿದೆ. ಕುರಿ ಪ್ರತಾಪ್ ಹಾಗೂ ಶ್ವೇತಾ ಚಂಗಪ್ಪ ಅವರು ಈ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ.

‘ಛೋಟಾ ಚಾಂಪಿಯನ್ ಫಿನಾಲೆ’; ಅದ್ದೂರಿ ವೇದಿಕೆ ಮೇಲೆ ‘ತತ್ಸಮ ತದ್ಭವ’ ಸಿನಿಮಾ ತಂಡ
ಪ್ರಜ್ವಲ್-ಮೇಘನಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 02, 2023 | 10:44 AM

Share

ಜೀ ಕನ್ನಡ ವಾಹಿನಿ ಕೇವಲ ಧಾರಾವಾಹಿ ಮಾತ್ರವಲ್ಲದೆ ರಿಯಾಲಿಟಿ ಶೋಗಳನ್ನು ನೀಡುವುದರಲ್ಲೂ ಮುಂದಿದೆ. ಹಲವು ರಿಯಾಲಿಟಿ ಶೋಗಳು ಈ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿವೆ. ಆ ಪೈಕಿ ‘ಛೋಟಾ ಚಾಂಪಿಯನ್’ (Chota Champion) ಕೂಡ ಸಾಕಷ್ಟು ಗಮನ ಸೆಳೆದಿದೆ. ಈ ಶೋನ ಫಿನಾಲೆ ಈ ವಾರ ಪ್ರಸಾರ ಕಾಣುತ್ತಿದೆ. ಈ ರಿಯಾಲಿಟಿ ಶೋ ನೋಡಲು ವೀಕ್ಷಕರು ಕಾದಿದ್ದಾರೆ. ಶನಿವಾರ (ಸೆಪ್ಟೆಂಬರ್ 2) ಹಾಗೂ ಭಾನುವಾರ (ಸೆಪ್ಟೆಂಬರ್ 3) ರಾತ್ರಿ ಆರು ಗಂಟೆಯಿಂದ ಏಳೂವರೆವರೆಗೆ ಈ ರಿಯಾಲಿಟಿ ಶೋ ಪ್ರಸಾರ ಕಾಣುತ್ತಿದೆ.

‘ಛೋಟಾ ಚಾಂಪಿಯನ್’ ಹಲವು ಮಕ್ಕಳಿಗೆ ವೇದಿಕೆ ಆಗಿದೆ. ಸಣ್ಣ ವಯಸ್ಸಿನಲ್ಲೇ ಪ್ರತಿಭೆ ತೋರಿಸಲು ಜೀ ಕನ್ನಡ ವಾಹಿನಿ ಅವಕಾಶ ಮಾಡಿಕೊಟ್ಟಿದೆ. ಈ ಕಾರ್ಯಕ್ರಮದ ಮೂಲಕ ಮಕ್ಕಳು ಸಖತ್ ಮನರಂಜನೆ ನೀಡಿದ್ದಾರೆ. ಇತ್ತೀಚೆಗೆ ‘ಛೋಟಾ ಚಾಂಪಿಯನ್ಸ್’ ಫಿನಾಲೆ ತುಮಕೂರಿನಲ್ಲಿ ನಡೆದಿದೆ. ಈ ವಾರ ಇದು ಪ್ರಸಾರ ಕಾಣುತ್ತಿದೆ. ಕುರಿ ಪ್ರತಾಪ್ ಹಾಗೂ ಶ್ವೇತಾ ಚಂಗಪ್ಪ ಅವರು ಈ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ.

‘ಛೋಟಾ ಚಾಂಪಿಯನ್’ ವೇದಿಕೆಗೆ ‘ತತ್ಸಮ ತದ್ಭವ’ ತಂಡ ಆಗಮಿಸಿದೆ. ಹೌದು, ಈ ಸಿನಿಮಾ ಸೆಪ್ಟೆಂಬರ್ ತಿಂಗಳಲ್ಲೇ ರಿಲೀಸ್ ಆಗಲಿದೆ. ಹೀಗಾಗಿ, ಈ ಚಿತ್ರದಲ್ಲಿ ನಟಿಸಿದ ಮೇಘನಾ ರಾಜ್, ಪ್ರಜ್ವಲ್ ದೇವರಾಜ್ ಅವರು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಮಕ್ಕಳು ನೀಡುವ ಮನರಂಜನೆಗೆ ಸಾಕ್ಷಿ ಆಗಿದ್ದು ಮಾತ್ರವಲ್ಲದೆ, ಸಿನಿಮಾ ಪ್ರಚಾರ ಕೂಡ ಮಾಡಿದ್ದಾರೆ. ‘ತುಮಕೂರು ನನಗೆ ತವರೂರು ಇದ್ದ ಹಾಗೆ’ ಎಂದು ಪ್ರಜ್ವಲ್ ದೇವರಾಜ್ ಹೇಳಿಕೊಂಡಿದ್ದಾರೆ.

ಜೀ ಕನ್ನಡ ವಾಹಿನಿ ಹಲವು ಪ್ರೋಮೋಗಳನ್ನು ಹಂಚಿಕೊಳ್ಳುತ್ತಿದೆ. ‘ಕಲ್ಪತರ ನಾಡಿನಲ್ಲಿ ಛೋಟಾ ಪ್ರತಿಭೆಗಳ ಮನರಂಜನೆಯ ಮಹಾ ಉತ್ಸವ. ಛೋಟಾ ಚಾಂಪಿಯನ್ Grand Finale. ಶನಿ-ಭಾನು ಸಂಜೆ 6ರಿಂದ 7.30ರವರೆಗೆ’ ಎಂದು ಪ್ರೋಮೋಗೆ ಕ್ಯಾಪ್ಷನ್ ನೀಡಲಾಗಿದೆ.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ‘ಅತ್ತಿಗೆ ಹೇಳಿದ ಡೈಲಾಗ್​ ನನಗೆ ಪರ್ಸನಲಿ ಕನೆಕ್ಟ್​ ಆಯ್ತು’: ‘ತತ್ಸಮ ತದ್ಭವ’ ಟ್ರೇಲರ್​ ನೋಡಿ ಧ್ರುವ ಸರ್ಜಾ ಮಾತು

‘ತತ್ಸಮ ತದ್ಭವ’ ಸಿನಿಮಾನ ವಿಶಾಲ್ ಆತ್ರೇಯ ನಿರ್ದೇಶನ ಮಾಡಿದ್ದಾರೆ. ಮೇಘನಾ ರಾಜ್ ಹಾಗೂ ಚಿರು ಗೆಳೆಯ ಪನ್ನಗ ಭರಣ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ನಿರ್ಮಾಣದಲ್ಲಿ ಸ್ಫೂರ್ತಿ ಅನಿಲ್ ಅವರು ಪನ್ನಗ ಭರಣ ಜೊತೆ ಸೇರಿಕೊಂಡಿದ್ದಾರೆ. ವಾಸುಕಿ ವೈಭವ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಪ್ರಜ್ವಲ್ ದೇವರಾಜ್ ಸೇರಿ ಅನೇಕ ಕಲಾವಿದರು ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ