AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಛೋಟಾ ಚಾಂಪಿಯನ್ ಫಿನಾಲೆ’; ಅದ್ದೂರಿ ವೇದಿಕೆ ಮೇಲೆ ‘ತತ್ಸಮ ತದ್ಭವ’ ಸಿನಿಮಾ ತಂಡ

‘ಛೋಟಾ ಚಾಂಪಿಯನ್’ ಹಲವು ಮಕ್ಕಳಿಗೆ ವೇದಿಕೆ ಆಗಿದೆ. ಇತ್ತೀಚೆಗೆ ‘ಛೋಟಾ ಚಾಂಪಿಯನ್ಸ್’ ಫಿನಾಲೆ ತುಮಕೂರಿನಲ್ಲಿ ನಡೆದಿದೆ. ಈ ವಾರ ಇದು ಪ್ರಸಾರ ಕಾಣುತ್ತಿದೆ. ಕುರಿ ಪ್ರತಾಪ್ ಹಾಗೂ ಶ್ವೇತಾ ಚಂಗಪ್ಪ ಅವರು ಈ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ.

‘ಛೋಟಾ ಚಾಂಪಿಯನ್ ಫಿನಾಲೆ’; ಅದ್ದೂರಿ ವೇದಿಕೆ ಮೇಲೆ ‘ತತ್ಸಮ ತದ್ಭವ’ ಸಿನಿಮಾ ತಂಡ
ಪ್ರಜ್ವಲ್-ಮೇಘನಾ
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Sep 02, 2023 | 10:44 AM

Share

ಜೀ ಕನ್ನಡ ವಾಹಿನಿ ಕೇವಲ ಧಾರಾವಾಹಿ ಮಾತ್ರವಲ್ಲದೆ ರಿಯಾಲಿಟಿ ಶೋಗಳನ್ನು ನೀಡುವುದರಲ್ಲೂ ಮುಂದಿದೆ. ಹಲವು ರಿಯಾಲಿಟಿ ಶೋಗಳು ಈ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿವೆ. ಆ ಪೈಕಿ ‘ಛೋಟಾ ಚಾಂಪಿಯನ್’ (Chota Champion) ಕೂಡ ಸಾಕಷ್ಟು ಗಮನ ಸೆಳೆದಿದೆ. ಈ ಶೋನ ಫಿನಾಲೆ ಈ ವಾರ ಪ್ರಸಾರ ಕಾಣುತ್ತಿದೆ. ಈ ರಿಯಾಲಿಟಿ ಶೋ ನೋಡಲು ವೀಕ್ಷಕರು ಕಾದಿದ್ದಾರೆ. ಶನಿವಾರ (ಸೆಪ್ಟೆಂಬರ್ 2) ಹಾಗೂ ಭಾನುವಾರ (ಸೆಪ್ಟೆಂಬರ್ 3) ರಾತ್ರಿ ಆರು ಗಂಟೆಯಿಂದ ಏಳೂವರೆವರೆಗೆ ಈ ರಿಯಾಲಿಟಿ ಶೋ ಪ್ರಸಾರ ಕಾಣುತ್ತಿದೆ.

‘ಛೋಟಾ ಚಾಂಪಿಯನ್’ ಹಲವು ಮಕ್ಕಳಿಗೆ ವೇದಿಕೆ ಆಗಿದೆ. ಸಣ್ಣ ವಯಸ್ಸಿನಲ್ಲೇ ಪ್ರತಿಭೆ ತೋರಿಸಲು ಜೀ ಕನ್ನಡ ವಾಹಿನಿ ಅವಕಾಶ ಮಾಡಿಕೊಟ್ಟಿದೆ. ಈ ಕಾರ್ಯಕ್ರಮದ ಮೂಲಕ ಮಕ್ಕಳು ಸಖತ್ ಮನರಂಜನೆ ನೀಡಿದ್ದಾರೆ. ಇತ್ತೀಚೆಗೆ ‘ಛೋಟಾ ಚಾಂಪಿಯನ್ಸ್’ ಫಿನಾಲೆ ತುಮಕೂರಿನಲ್ಲಿ ನಡೆದಿದೆ. ಈ ವಾರ ಇದು ಪ್ರಸಾರ ಕಾಣುತ್ತಿದೆ. ಕುರಿ ಪ್ರತಾಪ್ ಹಾಗೂ ಶ್ವೇತಾ ಚಂಗಪ್ಪ ಅವರು ಈ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ.

‘ಛೋಟಾ ಚಾಂಪಿಯನ್’ ವೇದಿಕೆಗೆ ‘ತತ್ಸಮ ತದ್ಭವ’ ತಂಡ ಆಗಮಿಸಿದೆ. ಹೌದು, ಈ ಸಿನಿಮಾ ಸೆಪ್ಟೆಂಬರ್ ತಿಂಗಳಲ್ಲೇ ರಿಲೀಸ್ ಆಗಲಿದೆ. ಹೀಗಾಗಿ, ಈ ಚಿತ್ರದಲ್ಲಿ ನಟಿಸಿದ ಮೇಘನಾ ರಾಜ್, ಪ್ರಜ್ವಲ್ ದೇವರಾಜ್ ಅವರು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಮಕ್ಕಳು ನೀಡುವ ಮನರಂಜನೆಗೆ ಸಾಕ್ಷಿ ಆಗಿದ್ದು ಮಾತ್ರವಲ್ಲದೆ, ಸಿನಿಮಾ ಪ್ರಚಾರ ಕೂಡ ಮಾಡಿದ್ದಾರೆ. ‘ತುಮಕೂರು ನನಗೆ ತವರೂರು ಇದ್ದ ಹಾಗೆ’ ಎಂದು ಪ್ರಜ್ವಲ್ ದೇವರಾಜ್ ಹೇಳಿಕೊಂಡಿದ್ದಾರೆ.

ಜೀ ಕನ್ನಡ ವಾಹಿನಿ ಹಲವು ಪ್ರೋಮೋಗಳನ್ನು ಹಂಚಿಕೊಳ್ಳುತ್ತಿದೆ. ‘ಕಲ್ಪತರ ನಾಡಿನಲ್ಲಿ ಛೋಟಾ ಪ್ರತಿಭೆಗಳ ಮನರಂಜನೆಯ ಮಹಾ ಉತ್ಸವ. ಛೋಟಾ ಚಾಂಪಿಯನ್ Grand Finale. ಶನಿ-ಭಾನು ಸಂಜೆ 6ರಿಂದ 7.30ರವರೆಗೆ’ ಎಂದು ಪ್ರೋಮೋಗೆ ಕ್ಯಾಪ್ಷನ್ ನೀಡಲಾಗಿದೆ.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ‘ಅತ್ತಿಗೆ ಹೇಳಿದ ಡೈಲಾಗ್​ ನನಗೆ ಪರ್ಸನಲಿ ಕನೆಕ್ಟ್​ ಆಯ್ತು’: ‘ತತ್ಸಮ ತದ್ಭವ’ ಟ್ರೇಲರ್​ ನೋಡಿ ಧ್ರುವ ಸರ್ಜಾ ಮಾತು

‘ತತ್ಸಮ ತದ್ಭವ’ ಸಿನಿಮಾನ ವಿಶಾಲ್ ಆತ್ರೇಯ ನಿರ್ದೇಶನ ಮಾಡಿದ್ದಾರೆ. ಮೇಘನಾ ರಾಜ್ ಹಾಗೂ ಚಿರು ಗೆಳೆಯ ಪನ್ನಗ ಭರಣ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ನಿರ್ಮಾಣದಲ್ಲಿ ಸ್ಫೂರ್ತಿ ಅನಿಲ್ ಅವರು ಪನ್ನಗ ಭರಣ ಜೊತೆ ಸೇರಿಕೊಂಡಿದ್ದಾರೆ. ವಾಸುಕಿ ವೈಭವ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಪ್ರಜ್ವಲ್ ದೇವರಾಜ್ ಸೇರಿ ಅನೇಕ ಕಲಾವಿದರು ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ