Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ವಿನ್ನರ್​ಗೆ ಕಂಕಣ ಭಾಗ್ಯ?; ದೊಡ್ಮನೆಯಿಂದ ಹೊರಬಂದ ಎರಡೇ ದಿನದಲ್ಲಿ ಸಿಹಿಸುದ್ದಿ

40 ಲಕ್ಷ ರೂಪಾಯಿ ಬಹುಮಾನದ ಮೊತ್ತವನ್ನು ತೇಜಸ್ವಿ ಪ್ರಕಾಶ್​ ಪಡೆದಿದ್ದಾರೆ. ಈಗ ದೊಡ್ಮನೆಯಿಂದ ಹೊರ ಬಂದ ಅವರು ಮದುವೆ ವಿಚಾರದಲ್ಲಿ ಸುದ್ದಿಯಲ್ಲಿದ್ದಾರೆ.

ಬಿಗ್​ ಬಾಸ್​ ವಿನ್ನರ್​ಗೆ ಕಂಕಣ ಭಾಗ್ಯ?; ದೊಡ್ಮನೆಯಿಂದ ಹೊರಬಂದ ಎರಡೇ ದಿನದಲ್ಲಿ ಸಿಹಿಸುದ್ದಿ
ತೇಜಸ್ವಿ ಪ್ರಕಾಶ್​-ಕರಣ್​ ಕುಂದ್ರಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Feb 01, 2022 | 7:23 PM

ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಲವ್​​ಸ್ಟೋರಿಗಳು ಹುಟ್ಟಿಕೊಂಡಿವೆ. ಕೆಲವು ಅಲ್ಲಿಯೇ ಕೊನೆಯಾದರೆ, ಇನ್ನೂ ಕೆಲವು ಜೋಡಿಗಳು ಮನೆಯಿಂದ ಹೊರ ಬಂದು ಮದುವೆ ಆಗಿದ್ದಾರೆ. ಇತ್ತೀಚೆಗೆ ಪೂರ್ಣಗೊಂಡಿದ್ದ ಹಿಂದಿ ಬಿಗ್​ ಬಾಸ್​ ಸೀಸನ್​ 15ರ (Hindi Bigg Boss 15 Winner ) ವಿನ್ನರ್​ ತೇಜಸ್ವಿ ಪ್ರಕಾಶ್ (Tejasswi Prakash)​ ಕೂಡ ಇದೇ ವಿಚಾರದಲ್ಲಿ ಸುದ್ದಿಯಲ್ಲಿದ್ದಾರೆ. ಅವರು ಸಹ ಸ್ಪರ್ಧಿ ಕರಣ್​ ಕುಂದ್ರಾ (Karan Kundra) ಅವರನ್ನು ಮದುವೆ ಆಗೋಕೆ ರೆಡಿ ಆಗಿದ್ದಾರೆ. ಮನೆಯಿಂದ ಹೊರ ಬಂದ ಎರಡೇ ದಿನಕ್ಕೆ ಮದುವೆ ಪ್ಲ್ಯಾನ್​ ನಡೆದಿದೆ ಎನ್ನುವ ಸುದ್ದಿ ಜೋರಾಗಿದೆ. ಹಾಗಾದರೆ, ಈ ಜೋಡಿ ಶೀಘ್ರವೇ ಮದುವೆ ಆಗುತ್ತಾರಾ? ಇಲ್ಲ. ಎರಡೂ ಮನೆಯಲ್ಲಿ ಮದುವೆ ಮಾತುಕತೆ ನಡೆಯುತ್ತಿದ್ದು, ಕಂಕಣ ಕೂಡಿ ಬಂದಾಗ ಮದುವೆ ಆಗಲಿದ್ದಾರೆ. ಈ ವಿಚಾರ ಕೇಳಿ ಅವರ ಅಭಿಮಾನಿಗಳು ಸಖತ್​ ಖುಷಿಪಟ್ಟಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಹಲವು ರೀತಿಯಲ್ಲಿ ಗಮನ ಸೆಳೆದ ನಟಿ ತೇಜಸ್ವಿ ಪ್ರಕಾಶ್​ ಅವರು ‘ಬಿಗ್​ ಬಾಸ್​ 15’ರ ವಿನ್ನರ್​ ಆಗಿ ಹೊರಹೊಮ್ಮಿದರು. ಅವರು ವಿನ್ ಆಗುತ್ತಾರೆ ಎಂದು ಬಹುತೇಕರು ಊಹಿಸಿರಲಿಲ್ಲ. ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ ಅವರೇ ಈ ಬಾರಿ ಬಿಗ್​ ಬಾಸ್​ ಟ್ರೋಫಿ ಎತ್ತಿ ಹಿಡಿಯಬಹುದು ಎಂದು ಅನೇಕರು ಅಂದಾಜಿಸಿದ್ದರು. ಆದರೆ ಆ ಲೆಕ್ಕಾಚಾರ ಉಲ್ಟಾ ಆಗಿತ್ತು. ಅಂತಿಮವಾಗಿ ತೇಜಸ್ವಿ ಪ್ರಕಾಶ್​ ಅವರಿಗೆ ವಿಜಯಲಕ್ಷ್ಮಿ ಒಲಿದಿದ್ದಳು. 40 ಲಕ್ಷ ರೂಪಾಯಿ ಬಹುಮಾನದ ಮೊತ್ತವನ್ನು ತೇಜಸ್ವಿ ಪ್ರಕಾಶ್​ ಪಡೆದಿದ್ದಾರೆ. ಈಗ ದೊಡ್ಮನೆಯಿಂದ ಹೊರ ಬಂದ ಅವರು ಮದುವೆ ವಿಚಾರದಲ್ಲಿ ಸುದ್ದಿಯಲ್ಲಿದ್ದಾರೆ.

ಕರಣ್​ ಕುಂದ್ರಾ ಹಾಗೂ ತೇಜಸ್ವಿ ಪ್ರಕಾಶ್​ ಜೋಡಿ ಸಾಕಷ್ಟು ಗಮನ ಸೆಳೆದಿತ್ತು. ಇದೊಂದು ಪಬ್ಲಿಸಿಟಿ ಗಿಮಿಕ್​ ಎಂದು ಅನೇಕರು ಆಡಿಕೊಂಡಿದ್ದರು. ಆದರೆ, ಈ ಜೋಡಿ ಇದಕ್ಕೆ ತಲೆಕೆಡಿಸಿಕೊಂಡಿಲ್ಲ. ಈ ಜೋಡಿ ಮದುವೆ ಆಗೋ ಆಲೋಚನೆಯಲ್ಲಿದೆ ಅನ್ನೋದು ವಿಶೇಷ.

View this post on Instagram

A post shared by Koimoi.com (@koimoi)

ಬಿಗ್​ ಬಾಸ್​ ಫಿನಾಲೆಯಲ್ಲಿ ಕರಣ್​ ತಂದೆ ಕೂಡ ಆಗಮಿಸಿದ್ದರು. ಅವರಿಗೆ ಈ ಜೋಡಿ ಬಗ್ಗೆ ಪ್ರಶ್ನೆ ಮಾಡಲಾಯಿತು. ಇದಕ್ಕೆ ಉತ್ತರಿಸಿದ್ದ ಕರಣ್​ ತಂದೆ, ‘ಎಲ್ಲವೂ ಹೀಗೆ ನಡೆದರೆ, ಶೀಘ್ರವೇ ಮದುವೆ ಪ್ಲ್ಯಾನ್​ ಮಾಡುತ್ತೇವೆ’ ಎಂದಿದ್ದರು. ಈ ವಿಡಿಯೋ ಅಭಿಮಾನಿ ವಲಯದಲ್ಲಿ ಸಾಕಷ್ಟು ವೈರಲ್​ ಆಗುತ್ತಿದೆ.

ಕರಣ್​ ಬಿಗ್​ ಬಾಸ್​ ಮನೆಯಿಂದ ಹೊರ ಬಂದ ನಂತರದಲ್ಲಿ ತೇಜಸ್ವಿ ಮನೆಗೆ ಭೇಟಿ ನೀಡಿದ್ದಾರೆ. ಇದರ ಫೋಟೋ ಹಾಗೂ ವಿಡಿಯೋಗಳು ಸಾಕಷ್ಟು ವೈರಲ್​ ಆಗುತ್ತಿವೆ. ಈ ಜೋಡಿಯನ್ನು ನೋಡಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಕರಣ್​ ಹಾಗೂ ತೇಜಸ್ವಿ ಬಿಗ್​ ಬಾಸ್​ ಮನೆಯಲ್ಲಿ ಉತ್ತಮ ಗೆಳೆಯರಾಗಿದ್ದರು. ದಿನ ಕಳೆದಂತೆ ಅವರು ಹತ್ತಿರವಾದರು. ನಂತರ ಅವರು ಪ್ರೀತಿಯಲ್ಲಿ ಬಿದ್ದರು. ಈ ಜೋಡಿಯನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

ಇದನ್ನೂ ಓದಿ: Bigg Boss 15 Winner: ನಟಿ ತೇಜಸ್ವಿ ಪ್ರಕಾಶ್​ಗೆ ‘ಬಿಗ್​ ಬಾಸ್​ 15’ ವಿನ್ನರ್​ ಪಟ್ಟ; ಬಹುಮಾನದ ಮೊತ್ತ ಎಷ್ಟು?

‘ಬಿಗ್​ ಬಾಸ್​ 15’ ಗೆದ್ದ ಸುಂದರಿ ತೇಜಸ್ವಿ ಪ್ರಕಾಶ್; ಇಲ್ಲಿವೆ ಖ್ಯಾತ ನಟಿಯ ಮನಮೋಹಕ ಫೋಟೋಗಳು

Published On - 7:23 pm, Tue, 1 February 22

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !