AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಬಿಗ್​​ಬಾಸ್​​ನಲ್ಲಿ ಸಾಮಾನ್ಯರೇ ಕಿಂಗ್, ಕನ್ನಡದಲ್ಲಿ ಸಿಗುತ್ತಾ ಅವಕಾಶ?

Bigg Boss Kannada: ಅಕ್ಕಿನೇನಿ ನಾಗಾರ್ಜುನ ನಿರೂಪಣೆ ಮಾಡುತ್ತಿರುವ ಬಿಗ್​​ಬಾಸ್ ತೆಲುಗು ಸೀಸನ್ 9 ಎರಡು ದಿನದ ಹಿಂದಷ್ಟೆ ಆರಂಭವಾಗಿದೆ. ಶೋನಲ್ಲಿ ಸಿನಿಮಾ ಸೆಲೆಬ್ರಿಟಿಗಳು ಜೊತೆಗೆ ಆರು ಮಂದಿ ಸಾಮಾನ್ಯರನ್ನು ಸ್ಪರ್ಧಿಗಳನ್ನಾಗಿ ಆಯ್ಕೆ ಮಾಡಲಾಗಿದೆ. ಕನ್ನಡದಲ್ಲಿಯೂ ಸಾಮಾನ್ಯರನ್ನು ಸ್ಪರ್ಧಿಗಳಾಗಿ ಶೋಗೆ ಸೇರಿಸಿಕೊಳ್ಳಲಾಗುತ್ತದೆಯೇ?

ತೆಲುಗು ಬಿಗ್​​ಬಾಸ್​​ನಲ್ಲಿ ಸಾಮಾನ್ಯರೇ ಕಿಂಗ್, ಕನ್ನಡದಲ್ಲಿ ಸಿಗುತ್ತಾ ಅವಕಾಶ?
Sudeep
ಮಂಜುನಾಥ ಸಿ.
|

Updated on: Sep 09, 2025 | 12:59 PM

Share

ತೆಲುಗು ಬಿಗ್​​ಬಾಸ್ ಸೀಸನ್ 9 ಪ್ರಾರಂಭವಾಗಿದೆ. ಇದೇ ಭಾನುವಾರ ಶೋ ಪ್ರಾರಂಭವಾಗಿದ್ದು 13 ಮಂದಿ ಸ್ಪರ್ಧಿಗಳು ಬಿಗ್​​ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ವಿಶೇಷವೆಂದರೆ ಈ 13 ಮಂದಿಯಲ್ಲಿ 6 ಮಂದಿ ಸಾಮಾನ್ಯರು. ಇನ್ನು ಏಳು ಮಂದಿ ಸಿನಿಮಾ ಹಾಗೂ ಧಾರಾವಾಹಿ ಕ್ಷೆತ್ರದ ಸೆಲೆಬ್ರಿಟಿಗಳಾಗಿದ್ದಾರೆ. ತೆಲುಗು ಬಿಗ್​​ಬಾಸ್​​​ನಲ್ಲಿ ಈ ಬಾರಿ ಎರಡು ಮನೆಗಳಿದ್ದು, ‘ಮನೆ ಮಾಲೀಕರು ಮತ್ತು ಬಾಡಿಗೆದಾರರು’ ಎಂಬ ಕಾನ್ಸೆಪ್ಟ್ ಬಳಸಿ ಮೊದಲ ವಾರ ಆಟ ಆಡಿಸಲಾಗುತ್ತಿದೆ. ತೆಲುಗಿನಲ್ಲಿ ಸಾಮಾನ್ಯರಿಗೆ ಅವಕಾಶ ಸಿಕ್ಕಂತೆ ಕನ್ನಡದಲ್ಲಿಯೂ ಸಿಗುತ್ತದೆಯೇ?

ತೆಲುಗಿನಲ್ಲಿ ಸೈನಿಕ ಕಲ್ಯಾಣ್ ಪಡಲ, ಮಾಸ್ಕ್ ಮ್ಯಾನ್ ಎಂದು ಖ್ಯಾತವಾಗಿರುವ ಯೂಟ್ಯೂಬರ್ ಹರೀಶ್, ಸಾಮಾಜಿಕ ಜಾಲತಾಣದ ಮೂಲಕ ಜನಪ್ರಿಯವಾಗಿರುವ ಡಿಮೋನ್ ಪವನ್, ಯೂಟ್ಯೂಬರ್ ಶ್ರೀಜಾ ದಮ್ಮು, ಯೂಟ್ಯೂಬರ್ ಪ್ರಿಯಾ ಶೆಟ್ಟಿ, ಉದ್ಯಮಿ ಮರ್ಯಾದಾ ಮನೀಷ್ ಅವರುಗಳು ಶ್ರೀಸಾಮಾನ್ಯರ ಕೋಟಾನಲ್ಲಿ ತೆಲುಗು ಬಿಗ್​​ಬಾಸ್ ಪ್ರವೇಶಿಸಿದ್ದಾರೆ. ಇವರಲ್ಲಿ ಹಲವರು ಮನೆ ಮಾಲೀಕರಾಗಿದ್ದು, ಬಿಗ್​​ಬಾಸ್ ಮನೆಯ ಸವಲತ್ತುಗಳನ್ನು ಅನುಭವಿಸುತ್ತಿದ್ದಾರೆ.

ಇನ್ನು ಸೆಲೆಬ್ರಿಟಿಗಳ ಕೋಟಾನಲ್ಲಿ ಕನ್ನಡದ ನಟಿ ಸಂಜನಾ ಗಲ್ರಾನಿ, ಮತ್ತೊಬ್ಬ ಕನ್ನಡದ ನಟಿ ತನುಜಾ ಪುಟ್ಟಸ್ವಾಮಿ, ಕನ್ನಡದ ಸಿನಿಮಾಗಳು ಸೇರಿದಂತೆ ಹಲವು ಭಾಷೆಯ ಸಿನಿಮಾಗಳಲ್ಲಿ ನಟಿಸಿರುವ ಫ್ಲೋರಾ ಸೈನಿ, ಜಬರ್ದಸ್ಥ್ ಕಾಮಿಡಿ ಶೋನಿಂದ ಖ್ಯಾತವಾಗಿರುವ ನಟ ಇಮಾನ್ಯುಯೆಲ್, ಖ್ಯಾತ ಕೊರಿಯೋಗ್ರಾಫರ್ ಶ್ರಷ್ಠಿ ವರ್ಮಾ, ನಟಿ ರಿತು ಚೌಧರಿ, ನಟ ಭರಣಿ ಶಂಕರ್, ಗಾಯಕ, ಸಂಗೀತ ನಿರ್ದೇಶಕ ರಾಮು ರಾಥೋಡ್, ಖ್ಯಾತ ಹಾಸ್ಯನಟ ಸುಮನ್ ಶೆಟ್ಟಿ ಅವರುಗಳು ಎಂಟ್ರಿ ನೀಡಿದ್ದಾರೆ.

ಇದನ್ನೂ ಓದಿ:Bigg Boss Kannada 12: ಮತ್ತೆ ಬಂತು ಬಿಗ್​ಬಾಸ್: ಈ ಸಲ ಕಿಚ್ಚು ಹೆಚ್ಚು

ಕನ್ನಡದಲ್ಲಿ ಇದೇ ತಿಂಗಳು 28ರಿಂದ ಬಿಗ್​​ಬಾಸ್ ಆರಂಭವಾಗುತ್ತಿದ್ದು, ಕನ್ನಡದ ಶೋನಲ್ಲಿ ಸಾಮಾನ್ಯರಿಗೆ ಅವಕಾಶ ನೀಡಲಾಗುತ್ತದೆಯೇ ಎಂಬ ಪ್ರಶ್ನೆ ಎದುರಾಗಿದೆ. ಸಾಮಾನ್ಯರನ್ನು ಅತಿಥಿಗಳಾಗಿ ಆಹ್ವಾನಿಸಲಾಗುತ್ತದೆ ಎಂದು ಈಗಾಗಲೇ ಆಯೋಜಕರು ಘೋಷಣೆ ಮಾಡಿದ್ದಾರೆ. ಆದರೆ ಸಾಮಾನ್ಯರನ್ನು ಸ್ಪರ್ಧಿಗಳಾಗಿ ಆಯ್ಕೆ ಮಾಡಲಾಗುತ್ತದೆಯೇ ಇಲ್ಲವೇ ಎಂಬುದು ಖಾತ್ರಿ ಇಲ್ಲ. ಈ ಹಿಂದೆ ಶೋನಲ್ಲಿ ಕೆಲ ಸಾಮಾನ್ಯರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಯಾರೂ ಸಹ ದೊಡ್ಡ ಮಟ್ಟದಲ್ಲಿ ಗಮನ ಸೆಳೆಯಲು ವಿಫಲರಾದರು. ಹಾಗಾಗಿ ಆ ಸಂಪ್ರದಾಯಕ್ಕೆ ಬ್ರೇಕ್ ಹಾಕಲಾಗಿತ್ತು. ಆದರೆ ತೆಲುಗಿನಲ್ಲಿ ಸಾಮಾನ್ಯರು ಪ್ರತಿ ಬಾರಿಯೂ ಗಮನ ಸೆಳೆಯುತ್ತಿದ್ದಾರೆ.

ಬಿಗ್​​ಬಾಸ್ 12 ಸೆಪ್ಟೆಂಬರ್ 28ರಂದು ಪ್ರಾರಂಭ ಆಗಲಿದೆ. ಈ ಬಾರಿಯ ಶೋ ಭಿನ್ನವಾಗಿರಲಿದೆ ಎಂದು ಆಯೋಜಕರು ಹೇಳಿದ್ದಾರೆ. ಸುದೀಪ್ ಅವರೇ ಈ ಬಾರಿಯೂ ಶೋನ ನಿರೂಪಣೆ ಮಾಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ